ಸಂವಿಧಾನ ಬದಲಾವಣೆ ಕೈ ಹಾಕಿದರೆ ದೇಶದಲ್ಲಿ ರಕ್ತ ಕ್ರಾಂತಿ: ಖರ್ಗೆ
ಕಲಬುರಗಿ, ಮೇ 11: ಬಿಜೆಪಿ ಏನಾದರೂ ಸಂವಿಧಾನ ಬದಲಾವಣೆಗೆ ಕೈ ಹಾಕಿದರೆ ದೇಶದಲ್ಲಿ ರಕ್ತಕ್ರಾಂತಿ ಆಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮಲ್ಲಿಕಾರ್ಜುನ್ ಖರ್ಗೆ ಎಚ್ಚರಿಕೆ ನೀಡಿದರು.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಚಿಂಚೋಳಿ ಉಪಚುನಾವಣೆ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಅನಂತ್ಕುಮಾರ್ ಹೆಗಡೆ, ಆರ್ಎಸ್ಎಸ್ನ ಭಾಗವತ್, ಬೆಂಗಳೂರಿನ ಒಬ್ಬಾತ ಬಿಜೆಪಿಯವ, ಬನಸಗೌಡ ಪಾಟೀಲ್ ಯಾತ್ನಾಳ್ ಎಲ್ಲರೂ ಸಂವಿಧಾನ ಬದಲಾಯಿಸುವ ಮಾತನಾಡುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಮೊನ್ನೆಯಷ್ಟೆ ಬಿಜೆಪಿ ಸಂಸದ ಬನಸಗೌಡ ಪಾಟೀಲ್ ಯಾತ್ನಾಳ್ ಅವರು 'ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ದೇಶದೆಲ್ಲೆಡೆ ಏಕರೂಪ ನಾಗರೀಕ ಸಂಹಿತೆ ಜಾರಿಮಾಡುವುದಾಗಿ ಹೇಳಿದ್ದರು' ಇದು ವಿವಾದ ಎಬ್ಬಿಸಿತ್ತು.

ಮಲ್ಲಿಕಾರ್ಜುನ್ ಖರ್ಗೆ ಅವರು ಸಂವಿಧಾನದ ಬದಲಾವಣೆ ವಿಚಾರವಾಗಿ ಅವಕಾಶ ಸಿಕ್ಕಾಗೆಲ್ಲಾ ಬಿಜೆಪಿ ವಿರುದ್ಧ ಹರಿಹಾಯುತ್ತಲೇ ಬರುತ್ತಿದ್ದಾರೆ. ದಲಿತ ಮುಖಂಡರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಬಲ ಅಂಬೇಡ್ಕರ್ ಅನುಯಾಯಿಯಾಗಿದ್ದಾರೆ.
ಕೇಂದ್ರ ಬಿಜೆಪಿ ಮಂತ್ರಿ ಅನಂತ್ಕುಮಾರ್ ಹೆಗಡೆ ಅವರು, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನವನ್ನು ಬದಲಾಯಿಸಲು ಎಂದು ಹೇಳಿದ್ದರು, ಇದು ರಾಜ್ಯದಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ಭಾರಿ ವಿವಾದ ಎಬ್ಬಿಸಿತ್ತು.
ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದು, ತಮ್ಮ ಅಧೀನದ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಿಯೇತೀರುವ ಒತ್ತಡದಲ್ಲಿದ್ದಾರೆ.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications