ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಿಂಗಾಯತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅಪರಾಧ : ಯಡಿಯೂರಪ್ಪ

|
Google Oneindia Kannada News

Recommended Video

ಲಿಂಗಾಯತರು ಕಾಂಗ್ರೆಸ್ ಗೆ ಮತ ಹಾಕಿದರೆ ಅದು ಅಪರಾಧ ಅಂದ್ರು ಬಿ ಎಸ್ ಯಡಿಯೂರಪ್ಪ | Oneindia Kannada

ಕಲಬುರಗಿ, ಮೇ 15 : 'ಲಿಂಗಾಯತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅಪರಾಧ ಮಾಡಿದಂತೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕಲಬುರಗಿಯಲ್ಲಿ ಬುಧವಾರ ಯಡಿಯೂರಪ್ಪ ಅವರು ಈ ಹೇಳಿಕೆ ನೀಡಿದ್ದು ಉಪ ಚುನಾವಣೆ ಹಿನ್ನಲೆಯಲ್ಲಿ ಇದು ಕುತೂಹಲಕ್ಕೆ ಕಾರಣವಾಗಿದೆ. ಮೇ 19ರಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.

ಲಿಂಗಾಯತ ಚಳವಳಿಯನ್ನು ಹದಗೆಡಿಸಿದ ರಾಜಕೀಯ ಮುಖಂಡರುಲಿಂಗಾಯತ ಚಳವಳಿಯನ್ನು ಹದಗೆಡಿಸಿದ ರಾಜಕೀಯ ಮುಖಂಡರು

ಉಪ ಚುನಾವಣೆಯ ಮತದಾನಕ್ಕೆ ಕೇವಲ ನಾಲ್ಕು ದಿನಗಳು ಬಾಕಿ ಇದೆ. ಇಂತಹ ಸಮಯದಲ್ಲಿ ಯಡಿಯೂರಪ್ಪ ಅವರು ಜಾತಿ ರಾಜಕಾರಣದ ದಾಳವನ್ನು ಉರುಳಿಸಿದ್ದಾರೆ. ಎರಡೂ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಹೆಚ್ಚಿವೆ.

ಲಿಂಗಾಯತ ಧರ್ಮ: ಡಿಕೆಶಿ ವಿರುದ್ಧ ಏಕವಚನದ ವಾಗ್ದಾಳಿ ಮಾಡಿದ MB.ಪಾಟೀಲ್ಲಿಂಗಾಯತ ಧರ್ಮ: ಡಿಕೆಶಿ ವಿರುದ್ಧ ಏಕವಚನದ ವಾಗ್ದಾಳಿ ಮಾಡಿದ MB.ಪಾಟೀಲ್

Yeddyurappa

ಚಿಂಚೋಳಿ ಕ್ಷೇತ್ರದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಲಿಂಗಾಯತ ಮತಗಳಿವೆ. ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಯಡಿಯೂರಪ್ಪ ಅವರು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಈ ಕುರಿತು ಚುನಾವಣಾ ಆಯೋಗಕ್ಕೂ ದೂರು ನೀಡಿದೆ.

ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸಿ ಫೇಸ್‌ಬುಕ್ ಪೋಸ್ಟ್‌ :ಮಹಿಳೆಯ ಬಂಧನಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸಿ ಫೇಸ್‌ಬುಕ್ ಪೋಸ್ಟ್‌ :ಮಹಿಳೆಯ ಬಂಧನ

ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ಕೊಡಲು ಕಾಂಗ್ರೆಸ್-ಜೆಡಿಎಸ್ ಸಹ ತಂತ್ರ ರೂಪಿಸಿವೆ. ಚಿಂಚೋಳಿಯಲ್ಲಿ ಲಿಂಗಾಯತ ಸಮುದಾಯದ ಸಭೆಯನ್ನು ಕರೆಯಲಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗೃಹ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
Karnataka BJP president B.S.Yeddyurappa said that if lingayat voted for Congress it's crime. Yeddyurappa in Kalaburagi for Chincholi by election campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X