ಕಲಬುರಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ; ಕಬ್ಬು ಬೆಳೆದ ರೈತರು ಕಂಗಾಲು
ಕಲಬುರಗಿ, ಮೇ 30: ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಇದರ ಜೊತೆಗೆ ಬೆಳೆಗಳಿಗೆ ಸೂಕ್ತ ಬೆಲೆಯೂ ಸಿಗದೇ ರೈತರು ಚಿಂತೆಯಲ್ಲಿದ್ದಾರೆ. ಆದರೆ ಈ ನಡುವೆ ಜಿಲ್ಲೆಯಲ್ಲಿ ಮರಳು ಮಾಫಿಯಾ ಕೂಡ ಆರಂಭವಾಗಿರುವುದು ರೈತರು ಕಂಗಾಲಾಗುವಂತೆ ಮಾಡಿದೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗ ಕೊಳ್ಳೂರ ಬಳಿಯ ಭೀಮಾ ನದಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಜೆಸಿಬಿ ಬಳಸಿ ಮರಳು ಅಗೆಯುತ್ತಿದ್ದು, ನಿತ್ಯ ನೂರಾರು ಟಿಪ್ಪರ್ ಗಳಲ್ಲಿ ಮರಳನ್ನು ಸಾಗಣೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸುವವರೂ ಯಾರಿಲ್ಲದಂತಾಗಿದೆ.
ಹೀಗೆ ನಿರಂತರವಾಗಿ ಮರಳು ತೆಗೆಯುತ್ತಿದ್ದರೆ, ಭೀಮಾ ನದಿಯಲ್ಲಿ ಇರುವ ಅಲ್ಪ ಸ್ವಲ್ಪ ನೀರೂ ಬರಿದಾಗುತ್ತದೆ ಎಂಬ ಆತಂಕ ಇಲ್ಲಿನ ರೈತರದ್ದು. ಈ ಭೀಮಾ ನದಿ ನೀರನ್ನೇ ನಂಬಿಕೊಂಡು ಇಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದಾರೆ. ಆದರೆ ಈ ಅಕ್ರಮ ಮರಳುಗಾರಿಕೆಯಿಂದ ನೀರು ಖಾಲಿಯಾದರೆ ಮುಂದಿನ ಕಥೆಯೇನು ಎಂಬ ಭೀತಿ ಇದೀಗ ರೈತರನ್ನು ಕಾಡತೊಡಗಿದೆ.

ಹೀಗೇ ಮರಳು ತೆಗೆಯುವ ಕೆಲಸ ಮುಂದುವರೆದಿದ್ದೇ ಆದರೆ, ನದಿ ನೀರೂ ಇಲ್ಲದಂತಾಗಿ, ನದಿ ತೀರದ ಹತ್ತಾರು ಹಳ್ಳಿಗಳ ಸಾವಿರಾರು ಎಕರೆ ಕಬ್ಬು ಒಣಗುವುದು ಖಚಿತವಾಗಿದೆ. ಹೀಗಾಗೇ ರೈತರಲ್ಲಿ ಆತಂಕ ಮನೆಮಾಡಿದೆ. ಸದ್ಯಕ್ಕೆ, ಈ ಅಕ್ರಮ ಮರಳು ಗಣಿಗಾರಿಕೆ ತಡೆಯಿರಿ ಎಂದು ರೈತರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಜಿಲ್ಲಾಧಿಕಾರಿಗಳು ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ನೋಡಬೇಕಿದೆ...
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications