ಕಲಬುರಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ; ಕಬ್ಬು ಬೆಳೆದ ರೈತರು ಕಂಗಾಲು
ಕಲಬುರಗಿ, ಮೇ 30: ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಇದರ ಜೊತೆಗೆ ಬೆಳೆಗಳಿಗೆ ಸೂಕ್ತ ಬೆಲೆಯೂ ಸಿಗದೇ ರೈತರು ಚಿಂತೆಯಲ್ಲಿದ್ದಾರೆ. ಆದರೆ ಈ ನಡುವೆ ಜಿಲ್ಲೆಯಲ್ಲಿ ಮರಳು ಮಾಫಿಯಾ ಕೂಡ ಆರಂಭವಾಗಿರುವುದು ರೈತರು ಕಂಗಾಲಾಗುವಂತೆ ಮಾಡಿದೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗ ಕೊಳ್ಳೂರ ಬಳಿಯ ಭೀಮಾ ನದಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಜೆಸಿಬಿ ಬಳಸಿ ಮರಳು ಅಗೆಯುತ್ತಿದ್ದು, ನಿತ್ಯ ನೂರಾರು ಟಿಪ್ಪರ್ ಗಳಲ್ಲಿ ಮರಳನ್ನು ಸಾಗಣೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸುವವರೂ ಯಾರಿಲ್ಲದಂತಾಗಿದೆ.
ಹೀಗೆ ನಿರಂತರವಾಗಿ ಮರಳು ತೆಗೆಯುತ್ತಿದ್ದರೆ, ಭೀಮಾ ನದಿಯಲ್ಲಿ ಇರುವ ಅಲ್ಪ ಸ್ವಲ್ಪ ನೀರೂ ಬರಿದಾಗುತ್ತದೆ ಎಂಬ ಆತಂಕ ಇಲ್ಲಿನ ರೈತರದ್ದು. ಈ ಭೀಮಾ ನದಿ ನೀರನ್ನೇ ನಂಬಿಕೊಂಡು ಇಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದಾರೆ. ಆದರೆ ಈ ಅಕ್ರಮ ಮರಳುಗಾರಿಕೆಯಿಂದ ನೀರು ಖಾಲಿಯಾದರೆ ಮುಂದಿನ ಕಥೆಯೇನು ಎಂಬ ಭೀತಿ ಇದೀಗ ರೈತರನ್ನು ಕಾಡತೊಡಗಿದೆ.

ಹೀಗೇ ಮರಳು ತೆಗೆಯುವ ಕೆಲಸ ಮುಂದುವರೆದಿದ್ದೇ ಆದರೆ, ನದಿ ನೀರೂ ಇಲ್ಲದಂತಾಗಿ, ನದಿ ತೀರದ ಹತ್ತಾರು ಹಳ್ಳಿಗಳ ಸಾವಿರಾರು ಎಕರೆ ಕಬ್ಬು ಒಣಗುವುದು ಖಚಿತವಾಗಿದೆ. ಹೀಗಾಗೇ ರೈತರಲ್ಲಿ ಆತಂಕ ಮನೆಮಾಡಿದೆ. ಸದ್ಯಕ್ಕೆ, ಈ ಅಕ್ರಮ ಮರಳು ಗಣಿಗಾರಿಕೆ ತಡೆಯಿರಿ ಎಂದು ರೈತರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಜಿಲ್ಲಾಧಿಕಾರಿಗಳು ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ನೋಡಬೇಕಿದೆ...
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications