ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ; ಕಬ್ಬು ಬೆಳೆದ ರೈತರು ಕಂಗಾಲು

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಮೇ 30: ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಇದರ ಜೊತೆಗೆ ಬೆಳೆಗಳಿಗೆ ಸೂಕ್ತ ಬೆಲೆಯೂ ಸಿಗದೇ ರೈತರು ಚಿಂತೆಯಲ್ಲಿದ್ದಾರೆ. ಆದರೆ ಈ ನಡುವೆ ಜಿಲ್ಲೆಯಲ್ಲಿ ಮರಳು ಮಾಫಿಯಾ ಕೂಡ ಆರಂಭವಾಗಿರುವುದು ರೈತರು ಕಂಗಾಲಾಗುವಂತೆ ಮಾಡಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗ ಕೊಳ್ಳೂರ ಬಳಿಯ ಭೀಮಾ ನದಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಜೆಸಿಬಿ ಬಳಸಿ ಮರಳು ಅಗೆಯುತ್ತಿದ್ದು, ನಿತ್ಯ ನೂರಾರು ಟಿಪ್ಪರ್ ಗಳಲ್ಲಿ ಮರಳನ್ನು ಸಾಗಣೆ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸುವವರೂ ಯಾರಿಲ್ಲದಂತಾಗಿದೆ.

ಕಲಬುರಗಿ ನಗರದಲ್ಲಿ ನೂರಾರು ವ್ಯಾಪಾರಿಗಳಿಂದ ದಿಢೀರ್ ಪ್ರತಿಭಟನೆಕಲಬುರಗಿ ನಗರದಲ್ಲಿ ನೂರಾರು ವ್ಯಾಪಾರಿಗಳಿಂದ ದಿಢೀರ್ ಪ್ರತಿಭಟನೆ

ಹೀಗೆ ನಿರಂತರವಾಗಿ ಮರಳು ತೆಗೆಯುತ್ತಿದ್ದರೆ, ಭೀಮಾ ನದಿಯಲ್ಲಿ ಇರುವ ಅಲ್ಪ ಸ್ವಲ್ಪ ನೀರೂ ಬರಿದಾಗುತ್ತದೆ ಎಂಬ ಆತಂಕ ಇಲ್ಲಿನ ರೈತರದ್ದು. ಈ ಭೀಮಾ ನದಿ ನೀರನ್ನೇ ನಂಬಿಕೊಂಡು ಇಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆದಿದ್ದಾರೆ. ಆದರೆ ಈ ಅಕ್ರಮ ಮರಳುಗಾರಿಕೆಯಿಂದ ನೀರು ಖಾಲಿಯಾದರೆ ಮುಂದಿನ ಕಥೆಯೇನು ಎಂಬ ಭೀತಿ ಇದೀಗ ರೈತರನ್ನು ಕಾಡತೊಡಗಿದೆ.

Illegal Sand Mining From Bhima River In Kalaburagi

ಹೀಗೇ ಮರಳು ತೆಗೆಯುವ ಕೆಲಸ ಮುಂದುವರೆದಿದ್ದೇ ಆದರೆ, ನದಿ ನೀರೂ ಇಲ್ಲದಂತಾಗಿ, ನದಿ ತೀರದ ಹತ್ತಾರು ಹಳ್ಳಿಗಳ ಸಾವಿರಾರು ಎಕರೆ ಕಬ್ಬು ಒಣಗುವುದು ಖಚಿತವಾಗಿದೆ. ಹೀಗಾಗೇ ರೈತರಲ್ಲಿ ಆತಂಕ ಮನೆಮಾಡಿದೆ. ಸದ್ಯಕ್ಕೆ, ಈ ಅಕ್ರಮ ಮರಳು ಗಣಿಗಾರಿಕೆ ತಡೆಯಿರಿ ಎಂದು ರೈತರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಜಿಲ್ಲಾಧಿಕಾರಿಗಳು ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ನೋಡಬೇಕಿದೆ...

English summary
Illegal sand mining from bhima river created tension among farmers in kalaburagi district. This is the only river farmers have depended to grow sugar cane
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X