ಮಾನವೀಯತೆ ಮರೆದ ಜೇವರ್ಗಿ ಶಾಸಕ ಡಾ.ಅಜಯ್ಸಿಂಗ್
ಜೇವರ್ಗಿ, ಜನವರಿ 23: ಶಾಸಕ ಡಾ.ಅಜಯ್ಸಿಂಗ್ ಅವರ ಮಾನವೀಯತೆ ಮತ್ತು ಸಮಯ ಸ್ಪೂರ್ಥಿಯಿಂದ ಅಪಘಾತಕ್ಕೊಳಗಿ ತೀರ್ವ ರಕ್ತಸ್ರಾವದಿಂದ ಅರೆಜೀವವಾಗಿದ್ದ ಮಹಿಳೆಯೊಬ್ಬಳ ಜೀವ ಉಳಿದಿದೆ.
ತಾಲ್ಲೂಕಿನ ಇಜೇರಿ ಬಳಿ ಬೈಕ್ ಅಪಘಾತವೊಂದರಲ್ಲಿ ಗಾಯಗೊಂಡ ನರಿಬೋಳ ಗ್ರಾಮದ ಚನ್ನಮ್ಮ ಹಡಪದ ಎಂಬುವರು ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದರು. ಆಗ ಇದೇ ರಸ್ತೆಯಲ್ಲಿ ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟನೆಗೆಂದು ತೆರಳುತ್ತಿದ್ದ ಶಾಸಕ ಅಜಯ್ ಸಿಂಗ್, ಮಹಿಳೆಯ ಸ್ಥಿತಿ ಕಂಡಿದ್ದಾರೆ. ತಕ್ಷಣ ತಮ್ಮ ಕಾರಿನಲ್ಲಿದ್ದ ಮುಖಂಡರನ್ನು ಕೆಳಗಿಳಿಸಿ ಮಹಿಳೆಯನ್ನು ಜೇವರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಜೇವರ್ಗಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆ ಜೇವರ್ಗಿಯಿಂದ ಆಂಬುಲೆನ್ಸ್ನಲ್ಲಿ ಕಲಬುರಗಿಗೆ ಕಳಿಸಿಲಾಗಿದೆ.

ಆಕೆಯನ್ನು ಆಂಬುಲೆನ್ಸ್ ಹತ್ತಿಸಿ ಕಳಿಸುವವರೆಗೂ ಗಾಯಾಳುವಿನ ಜೊತೆಗಿದ್ದ ಶಾಸಕರು ಆಕೆಗೆ ಸೂಕ್ತ ಸಮಯದಲ್ಲಿ ಪ್ರಾಥಮಿಕ ಚಿಕಿತ್ಸೆ ದೊರಕಿಸುವಲ್ಲಿ ನೆರವಾದರೂ. ಆಕೆಯ ಜೀವಕ್ಕೆ ಇದೀಗ ಯಾವುದೇ ಹಾನಿ ಇಲ್ಲ ಎಂದು ವೈದ್ಯರು ಭರವಸೆ ನೀಡಿದ್ದಾರೆ.
ಆಂಬುಲೆನ್ಸ್ ಹೋದ ಬಳಿಕವಷ್ಟೇ ಶಾಸಕ ಅಜಯ್ಸಿಂಗ್ ತಮ್ಮ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಈ ಹಿಂದೆ ಕೂಡಾ ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಜನರ ಮೆಚ್ಚುಗೆಗೆ ಅವರು ಪಾತ್ರರಾಗಿದ್ದರು. ಇದೀಗ ಮತ್ತೊಮ್ಮೆ ಶಾಸಕರ ಮಾನವೀಯತೆಗೆ ಜನರಿಂದ ಶ್ಲಾಘನೆ ವ್ಯಕ್ತವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications