ಕಲಬುರಗಿ: ದೇವದಾಸಿ ಪದ್ಧತಿಗೆ ದೂಡಲ್ಪಟ್ಟಿದ ದಲಿತ ಬಾಲಕಿ ರಕ್ಷಣೆ
ಕಲಬುರಗಿ, ಜೂನ್ 16: 5 ವರ್ಷದ ಹಿಂದೆ ದೇವದಾಸಿ ಪದ್ಧತಿಗೆ ದೂಡಲ್ಪಟ್ಟಿದ್ದ 10ರ ಹರೆಯದ ದಲಿತ ಅಪ್ರಾಪ್ತ ಯುವತಿಯನ್ನು ಕಲಬುರಗಿಯಲ್ಲಿ ರಕ್ಷಣೆ ಮಾಡಲಾಗಿದೆ
ಕಲಬುರಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಸಹಾಯವಾಣಿ ಮತ್ತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಯುವತಿಯನ್ನು ರಕ್ಷಿಸಿದ್ದಾರೆ.

ಯುವತಿ ಕಲಬುರಗಿಯ ಚಿತ್ತಾಪುರ ತಾಲೂಕಿನ ಮಾವಿನಸೂರ ಗ್ರಾಮದವಳು ಎಂದು ತಿಳಿದು ಬಂದಿದ್ದು ಸದ್ಯ 5ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಈಕೆಯನ್ನು 5 ವರ್ಷದ ಕೆಳಗೆ ಬೇಡಸೂರ ಗ್ರಾಮದ ಸಾಮವ್ವ ದೇವಿಗೆ ದೇವದಾಸಿಯನ್ನಾಗಿ ಮಾಡಲಾಗಿತ್ತು.
ಈ ಕುರಿತು 'ದಿ ಹಿಂದೂ'ಗೆ ಪ್ರತಿಕ್ರಿಯೆ ನೀಡಿರುವ ಮಕ್ಕಳ ರಕ್ಷಣಾ ಅಧಿಕಾರಿ ಸಿವಿ ರಾಮನ್, "ಮಗುವಿನ ಪೋಷಕರು ಮತ್ತು ಸಾಮವ್ವ ದೇವಸ್ಥಾನದ ಅರ್ಚಕ ಶರಣಪ್ಪ ತಪ್ಪು ಒಪ್ಪಿಕೊಂಡಿದ್ದಾರೆ. ಕಳೆದ 40 ವರ್ಷಗಳಿಂದ ನಾನು ದೇವದಾಸಿ ಆಚರಣೆಗಳನ್ನು ನಡೆಸುತ್ತಿರುವುದಾಗಿ ಅರ್ಚಕ ಒಪ್ಪಿಕೊಂಡಿದ್ದು ಸುಮಾರು 1,000 ಯುವತಿಯರನ್ನು ದೇವದಾಸಿ ಪದ್ಧತಿಗೆ ದೂಡಿದ್ದಾನೆ. ಅರ್ಚಕ ಸಲಹೆ ಮೇರೆ ಮಗಳನ್ನು ಪೋಷಕರು ದೇವದಾಸಿ ಮಾಡಿದ್ದರು," ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ ಯುವತಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದಳು. ಈ ಸಂದರ್ಭ ಅರ್ಚಕರ ಬಳಿಗೆ ಕರೆದುಕೊಂಡು ಹೋದಾಗ ಅರ್ಚಕರು ಆಕೆಯನ್ನು ದೇವದಾಸಿ ಮಾಡಲು ಹೇಳಿದ್ದರು ಎನ್ನಲಾಗಿದೆ.
ಇನ್ನು ಘಟನೆ ಬಗ್ಗೆ ಗೊತ್ತಿದ್ದು ಇಬ್ಬರು ಶಾಲಾ ಶಿಕ್ಷಕರು ಈ ಬಗ್ಗೆ ಚಕಾರವೆತ್ತಿಲ್ಲ. ಹೀಗಾಗಿ ಎಫ್ಐಆರ್ ನಲ್ಲಿ ಅವರ ಹೆಸರನ್ನೂ ಆರೋಪಿಗಳ ಪಟ್ಟಿಯಲ್ಲಿ ಹಾಕಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಹೇಳಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications