ಕಲಬುರಗಿ ಡಿಸಿ ಶರತ್ ದಿಢೀರ್ ವರ್ಗಾವಣೆ
ಕಲಬುರಗಿ, ಏಪ್ರಿಲ್ 28: ಕಲಬುರಗಿಯಲ್ಲಿ ಕೊರೊನಾ ಅಟ್ಟಹಾಸ ತುಂಬಿರುವ ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಸುರಾರ್ಲಕರ್ ವಿಕಾಸ್ ಕಿಶೋರ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಕಲಬುರಗಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಮುಂದಿನ ಆದೇಶದವರೆಗೆ ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಿರುವುದಾಗಿ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಲಾಕ್ಡೌನ್ ಕರ್ತವ್ಯ ಲೋಪ: ಮೂವರು ಅಧಿಕಾರಿಗಳು ಮನೆಗೆ
ಕಲಬುರಗಿಯಲ್ಲಿ ಕೊರೊನಾ ತಡೆಗಟ್ಟುವಲ್ಲಿ ಶರತ್ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರನ್ನು ವರ್ಗಾವಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಶರತ್ ಅವರನ್ನು ವರ್ಗಾಯಿಸಿರುವುದು ತುಂಬಾ ಬೇಸರ ತಂದಿದೆ. ಅವರ ವರ್ಗಾವಣೆಯನ್ನು ಕೂಡಲೇ ರದ್ದುಪಡಿಸಬೆಕೆಂದು ಕನ್ನಡ ಅಭಿವೃಧಿ ಪ್ರಾಧಿಕಾರದ ಸದಸ್ಯ ಸುರೇಶ್ ಬಡಿಗೇರ ಆಗ್ರಹಿಸಿದ್ದಾರೆ.