Kalaburagi Rape: ಬಾಲಕಿ ಮೇಲೆ ನಾಲ್ವರು ಬಾಲಕರಿಂದ ಅತ್ಯಾಚಾರ!
ಕಲಬುರಗಿ ಜುಲೈ 7: ಒಂಬತ್ತು ವರ್ಷದ ಬಾಲಕಿ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ನಗರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.
ಈ ಘಟನೆ ಜುಲೈ 5ರಂದು ಮಧ್ಯಾಹ್ನ ಬಾಲಕಿಯ ಮನೆ ಮೇಲಿನ ಮಹಡಿಯಲ್ಲಿ ನಡೆದಿದೆ. ಅತ್ಯಾಚಾರವೆಸಗಿದವರನ್ನು ನಾಲ್ವರ ಅಪ್ರಾಪ್ತ ವಯಸ್ಸಿನ ಹುಡುಗರು ಎಂದು ಗುರುತಿಸಲಾಗಿದೆ. ಬಾಲಕಿ ಪೋಷಕರು ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಾಲಕಿ ಅಸ್ವಸ್ಥಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ದಾಖಲಾದ ಬಳಿಕ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗುಜರಾತ್ನಲ್ಲಿ ಮತ್ತೊಂದು ಘಟನೆ
ಗುಜರಾತ್ನಲ್ಲಿ ಅತ್ಯಾಚಾರ ಪ್ರಕರಣವೊಂದರ ಆರೋಪಿಗೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ. 'ಯಾರೂ ಕಾನೂನಿಗಿಂತ ದೊಡ್ಡವರಲ್ಲ' ಎಂಬ ಸಂದೇಶ ರವಾನಿಸಲು ಬುಧವಾರ ಪೊಲೀಸರು 22 ವರ್ಷದ ಮಹಿಳೆಯ ಅತ್ಯಾಚಾರವೆಸಗಿದ ಆರೋಪ ಹೊಂದಿರುವ ವ್ಯಕ್ತಿಯನ್ನು ಗುಜರಾತ್ನ ನವಸಾರಿ ಜಿಲ್ಲೆಯ ಖೇರ್ಗಮ್ ಗ್ರಾಮದಲ್ಲಿ ಪರೇಡ್ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ಅತ್ಯಾಚಾರ ಸಂತ್ರಸ್ತೆಯು ಖೇರ್ಗಮ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರನ್ನು (ಜೂನ್ 24) ದಾಖಲಿಸಿದ ನಂತರ ಸೋಮವಾರದಂದು ಖೇರ್ಗಮ್ ಗ್ರಾಮದ ನಿವಾಸಿಯಾದ ಅಸೀಮ್ ಶೇಖ್(35) ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಸ್ಥಳೀಯ ನ್ಯಾಯಾಲಯವೊಂದು ಜುಲೈ 13ರವರೆಗೆ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿದೆ. ಬುಧವಾರ ಮಧ್ಯಾಹ್ನ ಅತ್ಯಾಚಾರ ಆರೋಪಿಯನ್ನು ಎರಡು ಕಿಮೀ ದೂರ ಪರೇಡ್ ಮಾಡಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಜಿಲ್ಲಾ ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಡಿ.ಎಸ್.ಕೋರಟ್ ಅವರು, "ಈ ವ್ಯಕ್ತಿಯು ಇಡೀ ಗ್ರಾಮದಲ್ಲಿ ಭೀತಿ ಸೃಷ್ಟಿಸಿದ್ದ ಮತ್ತು ಎಲ್ಲರೂ ಈತನಿಗೆ ಹೆದರುತ್ತಿದ್ದರು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಹಾಗೂ ಅಪರಾಧ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧ ಕಠಿಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಸಾರ್ವಜನಿಕರಿಗೆ ರವಾನಿಸಲು ಗ್ರಾಮದ ಮಾರುಕಟ್ಟೆ ಪ್ರದೇಶದಲ್ಲಿ ಆತನನ್ನು ಪರೇಡ್ ನಡೆಸಲಾಯಿತು. ಆತನ ವಿರುದ್ಧ ಜಗಳ, ಕಳ್ಳಭಟ್ಟಿ ಮದ್ಯ ವ್ಯವಹಾರ ಸೇರಿದಂತೆ 18 ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ" ಎಂದು ತಿಳಿಸಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications