Kalaburagi Rape: ಬಾಲಕಿ ಮೇಲೆ ನಾಲ್ವರು ಬಾಲಕರಿಂದ ಅತ್ಯಾಚಾರ!
ಕಲಬುರಗಿ ಜುಲೈ 7: ಒಂಬತ್ತು ವರ್ಷದ ಬಾಲಕಿ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ನಗರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.
ಈ ಘಟನೆ ಜುಲೈ 5ರಂದು ಮಧ್ಯಾಹ್ನ ಬಾಲಕಿಯ ಮನೆ ಮೇಲಿನ ಮಹಡಿಯಲ್ಲಿ ನಡೆದಿದೆ. ಅತ್ಯಾಚಾರವೆಸಗಿದವರನ್ನು ನಾಲ್ವರ ಅಪ್ರಾಪ್ತ ವಯಸ್ಸಿನ ಹುಡುಗರು ಎಂದು ಗುರುತಿಸಲಾಗಿದೆ. ಬಾಲಕಿ ಪೋಷಕರು ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಾಲಕಿ ಅಸ್ವಸ್ಥಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ದಾಖಲಾದ ಬಳಿಕ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗುಜರಾತ್ನಲ್ಲಿ ಮತ್ತೊಂದು ಘಟನೆ
ಗುಜರಾತ್ನಲ್ಲಿ ಅತ್ಯಾಚಾರ ಪ್ರಕರಣವೊಂದರ ಆರೋಪಿಗೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ. 'ಯಾರೂ ಕಾನೂನಿಗಿಂತ ದೊಡ್ಡವರಲ್ಲ' ಎಂಬ ಸಂದೇಶ ರವಾನಿಸಲು ಬುಧವಾರ ಪೊಲೀಸರು 22 ವರ್ಷದ ಮಹಿಳೆಯ ಅತ್ಯಾಚಾರವೆಸಗಿದ ಆರೋಪ ಹೊಂದಿರುವ ವ್ಯಕ್ತಿಯನ್ನು ಗುಜರಾತ್ನ ನವಸಾರಿ ಜಿಲ್ಲೆಯ ಖೇರ್ಗಮ್ ಗ್ರಾಮದಲ್ಲಿ ಪರೇಡ್ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ಅತ್ಯಾಚಾರ ಸಂತ್ರಸ್ತೆಯು ಖೇರ್ಗಮ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರನ್ನು (ಜೂನ್ 24) ದಾಖಲಿಸಿದ ನಂತರ ಸೋಮವಾರದಂದು ಖೇರ್ಗಮ್ ಗ್ರಾಮದ ನಿವಾಸಿಯಾದ ಅಸೀಮ್ ಶೇಖ್(35) ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಸ್ಥಳೀಯ ನ್ಯಾಯಾಲಯವೊಂದು ಜುಲೈ 13ರವರೆಗೆ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿದೆ. ಬುಧವಾರ ಮಧ್ಯಾಹ್ನ ಅತ್ಯಾಚಾರ ಆರೋಪಿಯನ್ನು ಎರಡು ಕಿಮೀ ದೂರ ಪರೇಡ್ ಮಾಡಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಜಿಲ್ಲಾ ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಡಿ.ಎಸ್.ಕೋರಟ್ ಅವರು, "ಈ ವ್ಯಕ್ತಿಯು ಇಡೀ ಗ್ರಾಮದಲ್ಲಿ ಭೀತಿ ಸೃಷ್ಟಿಸಿದ್ದ ಮತ್ತು ಎಲ್ಲರೂ ಈತನಿಗೆ ಹೆದರುತ್ತಿದ್ದರು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಹಾಗೂ ಅಪರಾಧ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧ ಕಠಿಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಸಾರ್ವಜನಿಕರಿಗೆ ರವಾನಿಸಲು ಗ್ರಾಮದ ಮಾರುಕಟ್ಟೆ ಪ್ರದೇಶದಲ್ಲಿ ಆತನನ್ನು ಪರೇಡ್ ನಡೆಸಲಾಯಿತು. ಆತನ ವಿರುದ್ಧ ಜಗಳ, ಕಳ್ಳಭಟ್ಟಿ ಮದ್ಯ ವ್ಯವಹಾರ ಸೇರಿದಂತೆ 18 ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ" ಎಂದು ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications