ಗಂಡು ಮಗುವಿಗಾಗಿ ತಾಯಂದಿರ ಪಟ್ಟು , ಡಿಎನ್ಎ ಪರೀಕ್ಷೆಗೆ ಚಿಂತನೆ
ಕಲಬುರಗಿ, ಡಿಸೆಂಬರ್ 20: ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ನವಜಾತು ಶಿಶುಗಳ ಅದಲಿ ಬದಲಿ ಪ್ರಕರಣ ಅಂತ್ಯ ಕಾಣದೆ ದಿನದಿಂದ ದಿನಕ್ಕೆ ಜಠಿಲಗೊಳ್ಳುತ್ತಾ ಹೋಗುತ್ತಿದೆ.
ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಡಿಸೆಂಬರ್ 14 ರಂದು ವೈದ್ಯರ ಎಡವಟ್ಟಿನಿಂದಾಗಿ ನವಜಾತ ಶಿಶುಗಳು ಅದಲು ಬದಲಾಗಿದ್ದವು, ಹೆಣ್ಣು ಮಗು ಹೆತ್ತ ನಂದಮ್ಮನಿಗೆ ಗಂಡು ಮಗು ಕೊಟ್ಟು, ಗಂಡು ಮಗು ಹೆತ್ತಿದ್ದ ನಾಜ್ಬಿಯಾಗೆ ಹೆಣ್ಣು ಮಗು ಕೊಟ್ಟಿದ್ದರು, ಆದರೆ ಆಮೇಲೆ ತಪ್ಪಿನ ಅರಿವಾಗಿ ಮಕ್ಕಳನ್ನು ಮತ್ತೆ ಅವರ ತಾಯಂದಿರಿಗೆ ತಲುಪಿಸಲು ಪ್ರಯತ್ನಿಸಿದ್ದರು.
ಆದರೆ ನಂದಮ್ಮ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ 'ನಾನು ಹೆತ್ತಿರುವುದು ಗಂಡು ಮಗುವನ್ನೇ ವೈದ್ಯರು ನನ್ನ ಮಗುವನ್ನು ಬೇರೆಯವರಿಗೆ ನೀಡಿ ನನಗೆ ಹೆಣ್ಣು ಮಗು ನೀಡಿದ್ದಾರೆ ಎಂದು ಪ್ರತಿಭಟನೆ ಪ್ರಾರಂಭ ಮಾಡಿದ್ದರು. ಇತ್ತ ನಾಜ್ಬಿಯಾ ನಾನು ಹೆತ್ತಿರುವುದು ಗಂಡು ಮಗು ಅದನ್ನು ಬೇರೆಯವರಿಗೆ ನಾನು ಕೊಡಲು ತಯಾರಿಲ್ಲ ಎಂದಿದ್ದರು.

ವೈದ್ಯರು ಎಷ್ಟು ಹೇಳಿದರೂ ಕೇಳದೆ ನಂದಮ್ಮ ಹಾಗೂ ಕುಟುಂಬದವರು ಗಂಡು ಮಗುವೇ ಬೇಕೆಂದು ಪಟ್ಟು ಹಿಡಿದ ಕಾರಣ ವೈದ್ಯರು ಮಕ್ಕಳ ಹಾಗೂ ಪೋಷಕರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳಿಸಿದ್ದರು.
ಇದೀಗ ರಕ್ತದ ಪರೀಕ್ಷೆ ವರದಿಗಳು ಬಂದಿದ್ದು, ನಂದಮ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಎಂದು ತಿಳಿದು ಬಂದಿದೆ ಆದರೆ ನಂದಮ್ಮ ವರದಿಯನ್ನು ನಿರಾಕರಿಸಿದ್ದು, ಗಂಡು ಮಗುವನ್ನೇ ಹೆತ್ತಿದ್ದೇನೆ ಎಂದು ಹಠ ಹಿಡಿದಿದ್ದಾರೆ.
ಸಚಿವರೂ ಈ ಬಗ್ಗೆ ತಲೆ ಕೆಡಿಸಿಕೊಂಡಿದ್ದು ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿ, ರಕ್ತ ಪರೀಕ್ಷೆ ವರದಿ ಬಂದ ನಂತರ ಪ್ರಕರಣ ತಾರ್ತಿಕವಾಗಿ ಅಂತ್ಯವಾಗಬೇಕಿತ್ತು ಆದರೆ ಮಹಿಳೆ ವರದಿಯನ್ನ ತಿರಸ್ಕರಿಸಿದ್ದಾಳೆ, ಅಗತ್ಯ ಬಿದ್ದರೆ ಡಿಎನ್ಗೆ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಈಗಿನ 'ಭೇಟಿ ಪಡಾವೊ ಭೇಟಿ ಬಚಾವೊ' ಸೇರಿದಂತೆ ಈ ಮುಂಚೆಯೇ ಹೆಣ್ಣು ಶಿಶು ಜೀವ ಉಳಿಸಲು ನೂರಾರು ಕಾರ್ಯಕ್ರಮಗಳು ಬಂದು ಹೋಗಿದ್ದರು ಕೂಡ ಈಗಲೂ ಗಂಡು ಮೇಲೆಂಬ ಭಾವನೆ ಹೋಗಿಲ್ಲವೆಂಬುದಕ್ಕೆ ಇದೊಂದು ತಾಜಾ ಉದಾಹರಣೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications