ನಿಗದಿತ ಅವಧಿಯೊಳಗೆ ಬೆಣ್ಣೆತೊರಾ ಆಧುನೀಕರಣಕ್ಕೆ ಸಚಿವರ ಕಟ್ಟಪ್ಪಣೆ
ನಿಗದಿತ ಅವಧಿಯೊಳಗೆ ಬೆಣ್ಣೆತೊರಾ ಯೋಜನೆಯ ಆಧುನೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟ ಕಾಪಾಡಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಲಬುರಗಿ, ಮೇ 23: ನಿಗದಿತ ಅವಧಿಯೊಳಗೆ ಬೆಣ್ಣೆತೊರಾ ಯೋಜನೆಯ ಆಧುನೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟ ಕಾಪಾಡಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಲಬುರಗಿಯಲ್ಲಿ ಬೆಣ್ಣೆತೊರಾ ಯೋಜನೆ ಅಡಿಯಲ್ಲಿ ಅನುಷ್ಠಾನದಲ್ಲಿರುವ ನೀರು ಬಳಕೆದಾರರ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕರ್ನಾಟಕ ನೀರಾವರಿ ನಿಗಮದ ನೀರಾವರಿ ಯೋಜನೆಗಳ ವಲಯ ಕಚೇರಿಯಲ್ಲಿ ಈ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಅವರು ನೀರಾವರಿ ಯೋಜನೆಯ ಬಲದಂಡೆ/ಎಡದಂಡೆ ಕಾಲುವೆಗಳಲ್ಲಿ ಬರುವ ಹೊಲಗಾಲುವೆಗಳನ್ನು ಹಂತ ಹಂತವಾಗಿ ನಿರ್ಮಿಸಲು ನೀರಾವರಿ ಯೋಜನೆಗಳ ವಲಯ ಕಾಡಾ ಆಡಳಿತಾಧಿಕಾರಿಗೆ ಸೂಚಿಸಿದರು.
ಮೊದಲನೇ ಹಂತವಾಗಿ 5000 ಹೆಕ್ಟೇರ್ ಪ್ರದೇಶಕ್ಕೆ ಹೊಲಗಾಲುವೆಗಳ ಪುನರ್ ನಿರ್ಮಾಣ ಹಾಗೂ ಭೂಮಿ ಸಮತಟ್ಟು ಕಾಮಗಾರಿಯ ಪ್ರಸ್ತಾವನೆಯನ್ನು ತಯಾರಿಸಿ ಸಲ್ಲಿಸಲು ಸೂಚಿಸಿದರು. ಮತ್ತು ಎಲ್ಲಾ ನೀರು ಬಳಕೆದಾರರ ಸಂಘದ ಅಧ್ಯಕ್ಷರನ್ನು ಉದ್ದೇಶಿಸಿ ಆಧುನೀಕರಣ ಕಾಮಗಾರಿಯ ಬಗ್ಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ಎಲ್ಲಾ ಅಚ್ಚುಕಟ್ಟು ಭಾಗದ ರೈತರಿಗೂ ನೀರನ್ನು ಉಪಯೋಗಿಸುವಂತೆ ಸಚಿವರು ಇದೇ ಸಂದರ್ಭದಲ್ಲಿ ಕೋರಿದರು.
ಇನ್ನು 2017-18ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಣ್ಣೆತೊರಾ ಬಲದಂಡೆ ಕಾಲುವೆಯಿಂದ 45 ಕಿ.ಮೀ. ವರೆಗೆ ಒಳಪಡುವ 9181.69 ಹೆಕ್ಟೇರ್ ಮತ್ತು ಎಡದಂಡೆ ಕಾಲುವೆಯಿಂದ 32 ಕಿ.ಮೀ.ವರೆಗೆ ಒಳಪಡುವ 2127 ಹೆಕ್ಟೇರ್ ನೀರಾವರಿ ಕ್ಷೇತ್ರಕ್ಕೆ ನೀರು ಬಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.
ಡಿ.ಪಿ.ಆರ್. ವರದಿ ಪ್ರಕಾರ ಮುಂಗಾರು ಹಂಗಾಮಿನಲ್ಲಿ ಬೆಳೆಯಬೇಕಾದ ಬೆಳೆಗಳ ವಿವರ ಇಂತಿದೆ. ತೊಗರಿ-2428 ಹೆಕ್ಟೇರ್, ದ್ವಿದಳ ಧಾನ್ಯ-6880 ಹೆಕ್ಟೇರ್, ಶೇಂಗಾ-1619 ಹೆಕ್ಟೇರ್, ಮೆಕ್ಕೆಜೋಳ-405 ಹೆಕ್ಟೇರ್ ಮತ್ತು ಜೋಳ-809 ಹೆಕ್ಟೇರ್.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications