ಕಲಬುರಗಿಯಲ್ಲಿ ಸಾಮೂಹಿಕ ಪ್ರಾರ್ಥನೆ: 15 ಮಂದಿ ಬಂಧನ
ಕಲಬುರಗಿ, ಏಪ್ರಿಲ್ 30: ಕಲಬುರಗಿಯಲ್ಲಿ ಲಾಕ್ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
Recommended Video
ರಂಜಾನ್ ತಿಂಗಳು ಆಗಿರುವ ಕಾರಣ ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಿದ್ದರು. ಆದರೆ, ಲಾಕ್ಡೌನ್ ಸಮಯದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಿದ್ದು, ನಿಯಮ ಪಾಲಿಸದ ಕಾರಣ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.
ರಂಜಾನ್ 2020: ಮೆಕ್ಕಾದಿಂದ ಮುಸ್ಲಿಮರಿಗೆ ಬಂತು ಸಂದೇಶ
ಬೊಮ್ಮನಹಳ್ಳಿಯಲ್ಲಿ 15 ಮಂದಿ ಮಸೀದಿಗೆ ತೆರಳಿ ಪ್ರಾರ್ಥನೆ ಮಾಡಿದ್ದರು. ಈ ವೇಳೆ ಅದನ್ನು ಗಮನಿಸಿದ ಸ್ಥಳೀಯರು ಪೊಲೀಸರ ಗಮನಕ್ಕೆ ತಂದರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಲಾಟಿ ಏಟು ನೀಡಿ, ಎಲ್ಲರನ್ನು ಬಂಧಿಸಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಕಲಬುರಗಿಯಲ್ಲಿ ಈವರೆಗೆ 44 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. 7 ಜನರು ಇದರಿಂದ ಗುಣಮುಖರಾಗಿದ್ದರು, 32 ಜನರನ್ನು ಕ್ವಾರಂಟೈನ್ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿಂದೆಯೇ ಮೆಕ್ಕಾ ಮಸೀದಿಯ ಮುಖ್ಯಸ್ಥರಾದ ಮೊಹಮ್ಮದ್ ಅಬ್ದುಲ್ ಖಾದಿರ್ ಸಿದ್ದಿಕಿ ರಂಜಾನ್ ಆಚರಣೆಗೆ ಬಗ್ಗೆ ತಿಳಿಸಿದ್ದಾರೆ. ಎಲ್ಲ ಮುಸ್ಲಿಮರಿಗೆ ಮನೆಯಲ್ಲಿಯೇ ದೇವರನ್ನು ಪ್ರಾರ್ಥನೆ ಮಾಡುವಂತೆ ಹೇಳಿದ್ದಾರೆ. ಕೊರೊನಾ ವೈರಸ್ನಿಂದ ಸಾವು, ನೋವು ಸಂಭವಿಸಿದ್ದು, ಅವರ ನಿವಾರಣೆಗೆ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ.