Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
ಕಲಬುರಗಿ ಏಪ್ರಿಲ್ 20: ಕಲಬುರಗಿಯಲ್ಲಿ ಕಳೆದ ಕೆಲ ಗಂಟೆಗಳಿಂದ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಹೀಗಾಗಿ ಜನ ಖುಷಿಯಲ್ಲಿ ತೇಲಾಡಿದ್ದಾರೆ.
ಸೂರ್ಯನಗರಿಯಲ್ಲಿ ಶನಿವಾರ ಮಧ್ಯಾಹ್ನ ಭಾರಿ ಅಬ್ಬರದೊಂದಿಗೆ ಆಲಿಕಲ್ಲು ಸಹಿತ ಜೋರಾದ ಮಳೆ ಸುರಿದ ಪರಿಣಾಮ ಹಲವಾರು ಕಡೆಗಳಲ್ಲಿ ಮರಗಳು ನೆಲಕ್ಕುರುಳಿವೆ. ವಾಹನಗಳು ಜಖಂಗೊಂಡಿವೆ. ನಗರದ ಬಹುತೇಕ ಕಡೆ ಮಳೆಯಾಗುತ್ತಿದ್ದು ವಾಹನ ಸವಾರರು ಪರದಾಡುವಂತಾಗಿದೆ.
ಗುಲ್ಬಾರ್ಗಾದಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ ಗುಲ್ಬರ್ಗದಲ್ಲಿ ಕಳೆದ ಕೆಲ ಗಂಟೆಗಳಿಂದ ತೀವ್ರ ಗಾಳಿಯೊಂದಿಗೆ ಅಧಿಕ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.#Kalaburagi #HeavyRain #Rainfall #RainUpdate #KarnatakaRains pic.twitter.com/WCsVvgaG3d
— oneindiakannada (@OneindiaKannada) April 20, 2024
ಗುಲ್ಬರ್ಗದಲ್ಲಿ ಬೆಳಗಿನಿಂದಲೇ ತುಂಬಾ ಧಗೆ ಮತ್ತು ಬೇಗುದಿ ವಾತಾವರಣವಿತ್ತು. ಮಧ್ಯಾಹ್ನ 12-30 ಗಂಟೆ ಸುಮಾರಿಗೆ ಗುಡುಗು-ಮಿಂಚು ಸಹಿತ ಸಿಡಿಲ ಆರ್ಭಟದೊಂದಿಗೆ ಸಣ್ಣಗೆ ಶುರುವಾದ ಮಳೆ ಸ್ವಲ್ಪ ಸಮಯದ ಬಳಿಕ ಜೋರಾಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಬಿರುಗಾಳಿಯೊಂದಿಗೆ ಮಳೆ ಮುಂದುವರೆದಿದೆ.

ಈ ಸಂದರ್ಭದಲ್ಲಿ ಜಲ್ಲಿ ಕಲ್ಲಿನ ಗಾತ್ರದಷ್ಟು ಆಲಿಕಲ್ಲುಗಳು (ಗಾರ್) ಬೀಳುತ್ತಿವೆ. ಒಮ್ಮೆಲೆ ಆಲಿಕಲ್ಲು ಬೀಳುವುದು ಶುರುವಾಗಿದ್ದರಿಂದ ಕಾರ್ ಇನ್ನಿತರ ವಾಹನಗಳ ಚಾಲಕರು ಕೊಂಚು ಹೊತ್ತು ಗಲಿಬಿಲಿಗೊಂಡರು. ಇನ್ನೂ ಗಾಳಿಯೊಂದಿಗೆ ಮಳೆಯಾಗುತ್ತಿರುವುದರಿಂದ ಎಲ್ಲೆಡೆ ಗೋಚರತೆ ಕಡಿಮೆಯಾಗಿದೆ. ಮನೆಯಿಂದ ಹೊರಗಿದ್ದ ಜನ ಹಾಗೂ ವಾಹನ ಸವಾರರು ಮರ, ಗಿಡ ಸೇರಿದಂತೆ ಇನ್ನಿತರ ಅಂಗಡಿ ಮನೆಗಳ ಆಶ್ರಯ ಪಡೆದು ನಿಂತಿರುವ ದೃಶ್ಯಗಳು ಎಲ್ಲೆಡೆ ಕಂಡು ಬಂದಿವೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications