ವಿದೇಶಿ ಕೆಲಸಕ್ಕೆ ಹೋಗುವ ಮುನ್ನ ಎಚ್ಚರ: ರಷ್ಯಾದಲ್ಲಿ ಸಿಲುಕಿದ ಕಲಬುರಗಿ ಯುವಕರ ಗೋಳು ಕೇಳಿ!
ಕಲಬುರಗಿ, ಫೆಬ್ರವರಿ 22: ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿ ಅಪಾಯ ಸಿಲುಕುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಉದ್ಯೋಗದ ಹೆಸರಿನಲ್ಲಿ ಕರೆಸಿಕೊಂಡು ನಮ್ಮ ರಾಜ್ಯದ ಕಲಬುರಗಿ ಜಿಲ್ಲೆಯ ಯುವಕರನ್ನು ರಷ್ಯಾದಲ್ಲಿ ಯುದ್ಧಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.
ವಿದೇಶದಲ್ಲಿ ಕೆಲಸ ಮಾಡುವ ಆಸೆಯಿಂದ ಏಜೆಂಟ್ ಮೂಲಕ ರಷ್ಯಾಗೆ ತೆರಳಿದ ಕಲಬುರಗಿ ಮೂಲದ ಮೂರು ಯುವಕರನ್ನು ಅಲ್ಲಿ ಯುದ್ಧಕ್ಕೆ ಬಳಕೆ ಮಾಡಿರುವ ಸಂಗತಿ ವಿಡಿಯೋ ಸಮೇತ ಬೆಳಕಿಗೆ ಬಂದಿದೆ. ಕಲಬುರಗಿ ಮೂಲದ ಯುವಕರು ರಕ್ಷಣೆಗಾಗಿ ಪರದಾಡುತ್ತಿದ್ದು, ಇಲ್ಲಿಂದ ರಕ್ಷಿಸಿ ತಮ್ಮ ತಾಯ್ನಾಡಿಗೆ ವಾಪಸ್ ಕರೆಸಿಕೊಳ್ಳಿ ಎಂದು ವಿಡಿಯೋದ ಮೂಲಕ ಯುವಕರು ನೋವು ತೋಡಿಕೊಂಡಿದ್ದಾರೆ.

ಕಲಬುರಗಿ ಮೂಲದ ಮೂವರು ದುಬೈ ಏಜೆಂಟರ ಮೂಲಕ ರಷ್ಯಾಕ್ಕೆ ತೆರಳಿದ್ದಾರೆ. ರಷ್ಯಾದಲ್ಲಿ ಸೆಕ್ಯುರಿಟಿ ಕೆಲಸ ಕೊಡಿಸುವುದಾಗಿ ಹೇಳಿ ಏಜೆಂಟರು ಕಳುಹಿಸಿದ್ದಾರೆ. ಆದರೆ ಅಲ್ಲಿ ಸೂಕ್ತ ಕೆಲಸ ಕೊಡಿಸದೇ ಸೆಕ್ಯುರಿಟಿ ಕೆಲಸದ ಬದಲಿಗೆ ರಷ್ಯಾ ಉಕ್ರೇನ್ ಯುದ್ದಕ್ಕೆ ಅವರನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಕೆಲಸಕ್ಕಾಗಿ ಕಲಬುರಗಿಯ 4 ಯುವಕರು ಸೇರಿ ಭಾರತದ 6 ಯುವಕರು ಬಾಬಾ ಏಜೆಂಟ್ ಮೂಲಕ 2023 ಡಿಸೆಂಬರ್ 5ರಂದು ರಷ್ಯಾಕ್ಕೆ ತೆರಳಿದ್ದರು. ಸೆಕ್ಯುರಿಟಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಕ ಪ್ರತಿಯೊಬ್ಬ ಯುವಕರ ಬಳಿ ಮೂರು ಲಕ್ಷ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಆದರೆ ಈಗ ಕೆಲಸವೂ ಕೊಡದೆ ಸಂಕಷ್ಟಕ್ಕೆ ಸಿಲುಕಿಸಿದ್ದಾನೆ. ಕಲಬುರಗಿಯ ಆಳಂದ ತಾಲೂಕಿನ ನರೋಣದ ಸೈಯದ್ ಇಲಿಯಾಸ್ ಹುಸೇನ್, ಮೊಹಮ್ಮದ್ ಸಮೀರ್ ಅಹಮದ್, ಸೋಫಿಯಾ ಮೊಹಮ್ಮದ್ ರಷ್ಯಾದಲ್ಲಿ ಸಿಲುಕಿಕೊಂಡಿದ್ದಾರೆ.
"ದುಬೈ ಮೂಲದ ವ್ಯಕ್ತಿ ಬಾಬಾ ಎನ್ನುವಾತ ರಷ್ಯಾದಲ್ಲಿ ಸೆಕ್ಯುರಿಟಿ ಕೆಲಸ ಕೊಡಿಸುವುದಾಗಿ ನಂಬಿಸಿ ಇಲ್ಲಿಗೆ ಕಳುಹಿಸಿದ್ದಾನೆ ಆದರೆ ಇಲ್ಲಿ ಯುದ್ಧಕ್ಕೆ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ. ನಮಗೆ ಮೋಸ ಮಾಡಿದ್ದಾರೆ. ನಾವೀಗ ಗಡಿಯಲ್ಲಿದ್ದೇವೆ. ಬಾಬಾ ಎನ್ನುವಾತ ಫ್ರಾಡ್ ಕೆಲಸ ಮಾಡುತ್ತಿದ್ದಾನೆ. ನಮ್ಮ ಈಗಿನ ಪರಿಸ್ಥಿತಿ ನೋಡಿ" ಎಂದು ಯುವಕರು ವಿಡಿಯೋ ಮಾಡಿ ನೋವು ತೋಡಿಕೊಂಡಿದ್ದಾರೆ. ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಂಸದ ಅಸಾದುದ್ದೀನ್ ಓವೈಸಿ ರಷ್ಯಾದಲ್ಲಿ ಸಿಲುಕಿದ ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications