ಕಲಬುರಗಿಯಲ್ಲಿ ಮೂರು ಹೊಸ ಆಸ್ಪತ್ರೆಗಳ ನಿರ್ಮಾಣ: ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್
ಕಲಬುರಗಿ, ಜೂನ್. 01: ಕಲಬುರಗಿ ಜಿಲ್ಲೆಯು ಮೂರು ಆಸ್ಪತ್ರೆಗಳನ್ನು ಪಡೆಯಲಿದೆ. ಈ ಟ್ರಾಮಾ ಸೆಂಟರ್, ವಿಶೇಷ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯೊಂದಿಗೆ ಜಿಲ್ಲೆಯು ಹೆಲ್ತ್ಕೇರ್ ಹಬ್ ಆಗಲಿದೆ ಎಂದು ನೂತನ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ. ಶರಣಪ್ರಕಾಶ ಪಾಟೀಲ್, ನಗರದಲ್ಲಿ ಈಗಿರುವ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಪಕ್ಕದಲ್ಲಿ ಲಭ್ಯವಿರುವ ಒಂದು ಎಕರೆ ಜಾಗವನ್ನು ಈ ಭಾಗದ ಜನರಿಗೆ ಅನುಕೂಲವಾಗುವ ಎಲ್ಲ ಮೂರು ಆಸ್ಪತ್ರೆಗಳನ್ನು ಸ್ಥಾಪಿಸಲು ಬಳಸಿಕೊಳ್ಳಲಾಗುವುದು. ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಯೋಜನೆಗಳನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರು 10 ಅಂಶಗಳ ಕಾರ್ಯಕ್ರಮ ರೂಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಲ್ಲ 10 ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾಹಿತಿ ನೀಡಿದ್ದಾರೆ.
ಕಿದ್ವಾಯಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯ ಕೊರತೆಯಿಂದ ರೋಗಿಯೊಬ್ಬರು ಸಾವನ್ನಪ್ಪಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ. ಶರಣಪ್ರಕಾಶ ಪಾಟೀಲ್, ಸಮರ್ಪಕ ಆಮ್ಲಜನಕ ಪೂರೈಕೆಗೆ ತಕ್ಷಣ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ಕಿದ್ವಾಯಿ ಆಸ್ಪತ್ರೆಗೆ ಆಮ್ಲಜನಕ ಸ್ಥಾವರವನ್ನು ಸಹ ಸ್ಥಾಪಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.
ಇನ್ನು, ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಲಬುರಗಿ-ಬೆಂಗಳೂರು ನಡುವೆ 2 ಮತ್ತು ಬೀದರ್-ಬೆಂಗಳೂರು ನಡುವೆ 1 ಹೊಸ ರೈಲನ್ನು ಆರಂಭಿಸಬೇಕು ಎಮದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಪತ್ರವನ್ನು ಬರೆದಿದ್ದಾರೆ. ಹೊಸ ರೈಲು ಏಕೆ ಬೇಕು? ಎಂದು ಕಾರಣಗಳನ್ನು ಸಹ ಅವರು ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ತಮ್ಮ ಪತ್ರದಲ್ಲಿ ಕಲಬುರಗಿ ಮತ್ತು ಬೀದರ್ನಿಂದ ಬೆಂಗಳೂರು ನಗರಕ್ಕೆ ಸಂಚಾರ ನಡೆಸುವ ಜನರ ಸಂಖ್ಯೆಯ ಕುರಿತು ಸಚಿವರ ಗಮನ ಸೆಳೆದಿದ್ದು, ಕಲಬುರಗಿಯಿಂದ ಬೆಂಗಳೂರಿಗೆ ಪ್ರತಿದಿನ ಸುಮಾರು 6 ಸಾವಿರ ಜನರು ಪ್ರಯಾಣಿಸುತ್ತಾರೆ. ಇವರಲ್ಲಿ ಬಹುತೇಕರು ವಲಸೆ ಕೂಲಿ ಕಾರ್ಮಿಕರು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
-
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ












Click it and Unblock the Notifications