Kalyana Karnataka Utsav 2023; 91 ಬಸ್ಗಳಲ್ಲಿ ಉಚಿತವಾಗಿ ಸಂಚಾರ ನಡೆಸಿ
ಫೆಬ್ರವರಿ 24, 25 ಹಾಗೂ 26ರಂದು ಕಲ್ಯಾಣ ಕರ್ನಾಟಕ ಉತ್ಸವ-2023 ನಡೆಯಲಿದೆ. ಉತ್ಸವಕ್ಕೆ ಜನರು ಆಗಮಿಸಲು ಅನುಕೂಲವಾಗುವಂತೆ 91 ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಕಲಬುರಗಿ, ಫೆಬ್ರವರಿ 23; ಕಲ್ಯಾಣ ಕರ್ನಾಟಕ ಉತ್ಸವ-2023ರಲ್ಲಿ ಜನರು ಭಾವಹಿಸಲು ಅನುಕೂಲವಾಗುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ಗಳನ್ನು ಓಡಿಸುತ್ತಿದೆ. ಜನರು ಈ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಈ ಉತ್ಸವದಲ್ಲಿ ಪಾಲ್ಗೊಳ್ಳಲು ಕಲಬುರಗಿ ನಗರ, ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಪ್ರತಿ ಜಿಲ್ಲೆಯಿಂದ ಒಟ್ಟು 91 ಬಸ್ಗಳನ್ನು ಓಡಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರು ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಅಧ್ಯಕ್ಷರಾದ ಎಂ. ರಾಚಪ್ಪ ತಿಳಿಸಿದ್ದಾರೆ.

ಕಲಬುರಗಿ ನಗರ (ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸುಪರ ಮಾರ್ಕೆಟ್, ಗಂಜ್, ರಾಮಮಂದಿರ, ಆಳಂದ ಚೆಕ್ ಪೋಸ್ಟ್, ಹೈಕೋರ್ಟ್) ಹಾಗೂ ಸುತ್ತಮುತ್ತಲಿನ ವಿವಿಧ ಭಾಗ (ಫರಹತಾಬಾದ ಮಾರ್ಗದ ಹಳ್ಳಿಗಳು, ಪಟ್ಟಣ ವೃತ್ತದ ಹಾಗೂ ಮೆಳಕುಂದ ವೃತ್ತದ ಹಳ್ಳಿಗಳು) ಗಳಿಂದ 65 ಬಸ್ಗಳು ಸಂಚಾರ ನಡೆಸಲಿವೆ.
ಕಲಬುರಗಿ ಜಿಲ್ಲೆಯ ಪ್ರತಿ ತಾಲೂಕಿನಿಂದ 2 ಬಸ್ಗಳಂತೆ ಒಟ್ಟು 20 ಬಸ್ಗಳು ಹಾಗೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಪ್ರತಿ ಜಿಲ್ಲೆಯಿಂದ 1 ಬಸ್ನಂತೆ 6 ಬಸ್ಗಳು ಕಾರ್ಯಾಚರಣೆ ಮಾಡಲಿವೆ. ಜನರು ಈ ಬಸ್ಗಳಲ್ಲಿ ಉಚಿತವಾಗಿ ಸಂಚಾರ ನಡೆಸಬಹುದು.
ಹೆಚ್ಚುವರಿ ಬಸ್ ಸಂಚಾರ; ಜನರ ಬೇಡಿಕೆಗನುಗುಣವಾಗಿ ನಿಗಮದಿಂದ ಟಿಕೆಟ್ ಆಧಾರದ ಮೇಲೆ ಹೆಚ್ಚುವರಿ ಬಸ್ಸುಗಳನ್ನು ಸಹ ಕಾರ್ಯಾಚರಣೆ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ ಉತ್ಸವವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಬಸ್ ಸೇವೆ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಲಾಗಿದೆ.

ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಫೆಬ್ರವರಿ 24, 25 ಹಾಗೂ 26 ರವರೆಗೆ ಮೂರು ದಿನಗಳ ಕಾಲ ಕಲ್ಯಾಣ ಕರ್ನಾಟಕ ಉತ್ಸವ-2023 ನಡೆಯಲಿದೆ. ಉತ್ಸವದ ಅಂಗವಾಗಿ ವಿವಿಧ ಸ್ಪರ್ಧೆ, ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ವಿವಿಧ ಪ್ರದರ್ಶನ, ಸ್ಪರ್ಧೆ; 2023ನೇ ಸಾಲಿನ ಕಲ್ಯಾಣ ಕರ್ನಾಟಕ ಉತ್ಸವ ಅಂವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 26ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಶ್ವಾನ ಪ್ರದರ್ಶನ ಆಯೋಜನೆ ಮಾಡಲಾಗಿದೆ.
ಫೆಬ್ರವರಿ 24 ರಿಂದ 26ರ ವರೆಗೆ ಗುಲಬರ್ಗಾ ವಿವಿಯ ರಂಗಾಯಣ ಬಯಲು ರಂಗಮಂದಿರದಲ್ಲಿ ಸಂಜೆ 4 ರಿಂದ ರಾತ್ರಿ 8.30ರ ಸಂಗೀತ, ನಾಟಕ ಪ್ರದರ್ಶನ ಹಾಗೂ ಜಾನಪದ ಕಾರ್ಯಕ್ರಮಗಳು ನಡೆಯಲಿದೆ.
ಕಲ್ಯಾಣ ಕರ್ನಾಟಕದ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪರಂಪರೆ ಅನಾವರಣಗೊಳಿಸುವ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವ 2023 ಕಲಬುರಗಿಯ ವಿವಿ ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳದಲ್ಲಿ ಆಯೋಜನೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಉತ್ಸವದ ಸಂಪೂರ್ಣ ಖರ್ಚು-ವೆಚ್ಚವನ್ನು ಭರಿಸಲಿದೆ. ಮಂಡಳಿಯ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ. ಉತ್ಸವದ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ವಿವಿಧ ಸಮಿತಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ್ದಾರೆ.
ವಾಹನಗಳ ನೋಂದಣಿ ಮಾಡಿಸಿ; ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಉತ್ಸವಕ್ಕೆ ಆಗಮಿಸುವ ವಿವಿಧ ಕಲಾವಿದರ ಹಾಗೂ ಗಣ್ಯ ವ್ಯಕ್ತಿಗಳನ್ನು ಪ್ರಯಾಣಿಸಲು (ಶಿಷ್ಟಾಚಾರಕ್ಕಾಗಿ) ವಾಹನ ಹಾಗೂ ಚಾಲಕನ್ನೊಳಗೊಂಡಂತೆ ವಿವಿಧ ಜಿಲ್ಲೆಗಳ ತಲಾ 100 ಸರ್ಕಾರಿ ಕಚೇರಿ ಹಾಗೂ ಖಾಸಗಿ ವಾಹನಗಳನ್ನು ನಿಯೋಜಿಸಲಾಗಿದೆ.
ಕಲಬುರಗಿ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಉಪ ಸಾರಿಗೆ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಸಾರಿಗೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಉತ್ಸವಕ್ಕೆ ನಿಯೋಜಿಸಿದ ವಾಹನ ಚಾಲಕರು ತಮ್ಮ ವಾಹನಗಳೊಂದಿಗೆ ಕಲಬುರಗಿ ನೂತನ ವಿದ್ಯಾಲಯ ಆವರಣದಲ್ಲಿನ ಮೈದಾನದಲ್ಲಿರುವ ಕಲಬುರಗಿ ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಿಬ್ಬಂದಿಗಳಲ್ಲಿ ವರದಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications