ಕನ್ನಡ ಆಡಳಿತ ಭಾಷೆ, ಇದರಲ್ಲಿ ರಾಜಿಯಿಲ್ಲ: ಸಿದ್ದರಾಮಯ್ಯ
ಕಲಬುರಗಿ, ಫೆಬ್ರವರಿ 7: ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಲೇಬೇಕು, ಇದರಲ್ಲಿ ಯಾವುದೇ ರಾಜಿಯಿಲ್ಲ, ಉದಾರತೆ ಮನುಷ್ಯತ್ವಕ್ಕೆ ಇರಬೇಕು. ಭಾಷೆಯಲ್ಲಿ ಮಾತ್ರ ಕಠಿಣವಾಗಿರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲಬುರಗಿ ವಿವಿ ಆವರಣದಲ್ಲಿ ಆಯೋಜಿಸಿದ್ದ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಖಂಡ ಕರ್ನಾಟಕದಲ್ಲಿ ಕನ್ನಡ ಒಂದೇ ಸಾರ್ವಭೌಮ. ಹೀಗಾಗಿ ಕನ್ನಡ ಮಾತೃಭಾಷೆಯಾಗಬೇಕು ಅಂದು ಹೇಳಿದರು.
ರಾಜ್ಯದಲ್ಲಿ ಇಂಗ್ಲಿಷ್ ಶಾಲೆಗಳಿವೆ, ಕನ್ನಡ ಶಾಲೆಗಳಿವೆ. ನಾವು ಎರಡು ದೋಣಿಗಳ ಮೇಲೆ ಕಾಲಿಟ್ಟು ನಡೆಯುತ್ತಿದ್ದೇವೆ. ಅಲ್ಲದೇ ಇಂಗ್ಲೀಷ್ ಕಲಿತರೆ ಉದ್ಯೋಗ ಸಿಗುತ್ತೆ ಎನ್ನುವ ಭ್ರಮೆಯಿಂದ ಹೊರಬರಬೇಕು. ಜೊತೆಗೆ ಪ್ರತಿಯೊಬ್ಬ ಕನ್ನಡಿಗ ಕನ್ನಡ ಭಾಷೆ ಮಾತೃಭಾಷೆಯಾಗಲು ಬೆಂಬಲ ನೀಡಬೇಕು. ನಮ್ಮ ಮಕ್ಕಳು ಬುದ್ಧಿವಂತರಾಗಲು ಮಾತೃಭಾಷೆಯಲ್ಲೇ ಶಿಕ್ಷಣ ಕಲಿಯಬೇಕು ಎಂದು ಸಲಹೆ ನೀಡಿದರು.

ಹೈದರಾಬಾದ್-ಕರ್ನಾಟಕ ಅಭಿವೃದ್ಧಿಗೋಸ್ಕರ 371ಜೆ ಮೀಸಲಾತಿ ನೀಡಲಾಗಿದೆ. ಈ ಆರು ಜಿಲ್ಲೆಗಳು ಇನ್ನೂ ಅಭಿವೃದ್ಧಿಯಾಗಬೇಕು. ಅಲ್ಲದೇ ಕನ್ನಡ ನಾಡು ನುಡಿಗೆ ನಮ್ಮ ಸೇವೆ ಮಾಡಬೇಕು. ಕನ್ನಡಿಗರಲ್ಲಿ ಈ ಗುಣ ಇರುವುದರಿಂದ ಕನ್ನಡದ ನೆಲ, ಜಲಕ್ಕೆ ಯಾವತ್ತು ಅಪಾಯ ಬರುವುದಿಲ್ಲ, ಎಲ್ಲರೂ ಈ ನೆಲದ ಭಾಷೆ ಕಲಿಯಬೇಕು ಜೊತೆಗೆ ಹೊರಗಿನಿಂದ ಬಂದವರು ಸಹ ಕನ್ನಡಿಗರಾಗಿ ಬಾಳಬೇಕು. ನೆಲದ ಭಾಷೆ ಕಲಿಯಬೇಕು ಕನ್ನಡಿಗರಾಗಿ ಬಾಳುವುದು ಪ್ರತಿಯೊಬ್ಬನ ಕರ್ತವ್ಯ ಎಂದು ಹೇಳಿದರು.
ಸಾಹಿತ್ಯ ಸಮ್ಮೇಳಾನಧ್ಯಕ್ಷರಾದ ಎಚ್.ಎಸ್ ವೆಂಕಟೇಶಮೂರ್ತಿ ಮಾತನಾಡಿ, ವಿಧಾನಸೌಧದಲ್ಲಿ ಪಕ್ಷ-ವಿಪಕ್ಷಗಳು ಎಷ್ಟೇ ವಾಗ್ವಾದ ನಡೆಸಿದರೂ ಕನ್ನಡದ ವಿಚಾರ ಬಂದಾಗ ನಾವೆಲ್ಲರೂ ಒಂದೇ ಎಂದರು.
ಮೂರು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ನಾಡಿನ ಚಿಂತಕರು, ಕಲಾವಿದರು, ಸಾಹಿತಿಗಳು ಹಾಗೂ ಲಕ್ಷಾಂತರ ಕನ್ನಡಿಗರನ್ನು ಕಣ್ತುಂಬಿಕೊಡಿದ್ದೇನೆ ಎಂದು ಹೇಳಿದರು.

ಇನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನು ಬಳಿಗಾರ್ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಜನರ ಕನ್ನಡದ ಕಂಪು, ಪರಂಪರೆ ಮೆಚ್ಚಬೇಕು. ಈ ಸಮ್ಮೇಳನದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಕನ್ನಡಿಗರೂ ಸ್ವಯಂಸೇವರಾಗಿ ಕೆಲಸ ಮಾಡಿದ್ದಾರೆ ಇದು ಕನ್ನಡ ಶಕ್ತಿ ಎಂದರು.
ಈ ಸಮಾರೋಪ ಸಮಾರಂಭದದಲ್ಲಿ ವಿಧಾನಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಬಿ,ಜಿ ಪಾಟೀಲ್, ಡಾ. ಚಂದ್ರಶೇಖರ್ ಪಾಟೀಲ್, ಜೇವರ್ಗಿ ಶಾಸಕ ಅಜಯ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಡಾ.ಪದ್ಮರಾಜ ದಂಡಾವತಿ ಸ್ವಾಗತಿಸಿದರು, ಡಾ.ವತ್ಸಲಾ ಮೋಹನ್ ನಿರೂಪಿಸಿದರು, ಕನ್ನಡ ಸಾಹಿತ್ಯ ಪರಿಷತ್ ಕಲಬುರಗಿ ಜಿಲ್ಲಾಧ್ಯಕ್ಷರಾದ ವೀರಭದ್ರಪ್ಪ ಸಿಂಪಿ ವಂದಿಸಿದರು.
ಈ ಸಾಹಿತ್ಯ ಸಮ್ಮೇಳನದ ವಿಜಯ ಪ್ರಧಾನ ವೇದಿಕೆ ಮೇಲೆ ಮಾತನಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದಂತೆ ಕನ್ನಡ ನುಡಿ ಜಾತ್ರೆಗೆ ಬಂದ ಕೆಲವರು 'ಹೌದು ಹುಲಿಯಾ.. ಹೌದು ಹುಲಿಯಾ' ಎಂದು ಕೂಗಿದರು.
-
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ










Click it and Unblock the Notifications