ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿ ಏನು ಕರ್ನಾಟಕ ಮುಖ್ಯಮಂತ್ರಿ ಆಗ್ತಾರಾ? ಖರ್ಗೆ ಲೇವಡಿ

|
Google Oneindia Kannada News

Recommended Video

ನರೇಂದ್ರ ಮೋದಿಯನ್ನ ಲೇವಡಿ ಮಾಡಿದ ಮಲ್ಲಿಕಾರ್ಜುನ ಖರ್ಗೆ | Oneindia Kannada

ಕಲಬುರಗಿ, ಮೇ 1: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ಭೇಟಿಯಿಂದ ರಾಜ್ಯದ ದಿಕ್ಸೂಚಿ ಬದಲಾಗುವುದಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ದುರ್ಬಲವಾಗಿದೆ. ಅದಕ್ಕೆ ಟಾನಿಕ್ ನೀಡಲು ಮೋದಿ ಬರುತ್ತಿದ್ದಾರೆ. ಅವರ ಬಂದರೆ ರಾಜ್ಯ ರಾಜಕೀಯದ ದಿಕ್ಸೂಚಿ ಬದಲಾಗಲಿದೆ ಎನ್ನುತ್ತಾರೆ. ಆದರೆ, ಅವರೇನು ಇಲ್ಲಿ ಮುಖ್ಯಮಂತ್ರಿಯಾಗಲು ಬರುತ್ತಿದ್ದಾರೆಯೇ. ಭಾಯಿಯೋಂ ಬೆಹೆನೋ ಎಂದು ಹೇಳಿ ಹೋಗಲಷ್ಟೇ ಅವರು ಬಂದಿರೋದು ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ? ಖರ್ಗೆ ಪ್ರತಿಕ್ರಿಯೆ ಏನು?ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ? ಖರ್ಗೆ ಪ್ರತಿಕ್ರಿಯೆ ಏನು?

ಮೋದಿ ಅವರಿಂದ ಕರ್ನಾಟಕಕ್ಕೆ ಯಾವ ಪ್ರಯೋಜನವೂ ಆಗಿಲ್ಲ. ಅವರು ರಾಜ್ಯದ ಜನರಿಗೆ ಉದ್ಯೋಗ ನೀಡಿದ್ದಾರೆಯೇ? ಆರ್ಥಿಕ ನೆರವು ನೀಡಿದ್ದಾರೆಯೇ? ಯಾವ ಯೋಜನೆಗೂ ನಯಾಪೈಸೆ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

karnataka assembly elections Mallikarjuna kharge slams narendra modi

ನಾವು ನಮ್ಮ ಕೆಲಸದ ಆಧಾರದಲ್ಲಿ ಮತ ಕೇಳುತ್ತೇವೆ. ಮೋದಿ ಅವರಿಗೆ ಜನರ ಎದುರು ಬರಲು ಮುಖವಿಲ್ಲ. ಇದುವರೆಗೂ ನೀಡಿದ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಹಿತದೃಷ್ಟಿಯಿಂದ ಬಿಜೆಪಿಯನ್ನು ಹೊರಗಿಡಬೇಕು ಎಂದು ಖರ್ಗೆ ಟೀಕಿಸಿದರು.

English summary
Congress leader Mallikarjuna Kharge slams prime minister Narendra Modi as he has done nothing to the state's development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X