ಮೇ 23ರ ನಂತರ ಕಾಂಗ್ರೆಸ್ 4 ಹೋಳು: ಬಾಬುರಾವ್ ಚಿಂಚನಸೂರ್
ಚಿಂಚೋಳಿ ಮೇ 12: ಮೇ 23 ರ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಮೂಲಾಗ್ರ ಬದಲಾವಣೆ ಆಗಲಿದ್ದು, ದಿನೇಶ್ ಗುಂಡುರಾವ್, ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್ ಅವರ ನೇತೃತ್ವದಲ್ಲಿ ನಾಲ್ಕು ಹೋಳಾಗಲಿದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಚುನಾವಣಾ ಪ್ರಚಾರ ಪ್ರಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮುಖಂಡರುಗಳ ಮೇಲೆ ವಾಗ್ದಾಳಿ ನಡೆಸಿದರು. ಮಾಲಿಕಯ್ಯ ಗುತ್ತೇದಾರ್ ಹೇಳಿದಂತೆ 23 ನೇ ತಾರೀಕು ಭೂಕಂಪ ಆಗೋದು ಗ್ಯಾರಂಟಿ. ಯಡಿಯೂರಪ್ಪನವರು ಸಿಎಂ ಆಗಿಲ್ಲ ಅಂತಾ ಇಡೀ ರಾಜ್ಯದ ಜನತೆ ಕಣ್ಣೀರು ಸುರಿಸುತ್ತಿದ್ದಾರೆ. ಸೂರ್ಯ ಚಂದ್ರರಷ್ಟೇ ಸತ್ಯವಾಗಿ ಯಡಿಯೂರಪ್ಪನವರು ಸಿಎಂ ಆಗುವುದು ಸತ್ಯ. ಮೇ 20 ರ ನಂತರ ಕಾಂಗ್ರೆಸ್ ನಲ್ಲಿ ಅಮೂಲಾಗ್ರ ಬದಲಾವಣೆ ಆಗಲಿದ್ದು, 20 ಕ್ಕೂ ಹೆಚ್ಚು ಶಾಸಕರು ಅವರಾಗಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ದಿನೇಶ್ ಗುಂಡೂರಾವ್, ಡಿಕೆಶಿ, ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರ ನೇತೃತ್ವದಲ್ಲಿ ನಾಲ್ಕೈದು ಗುಂಪುಗಳಾಗಿ ಹೋಳಾಗಲಿದೆ. ಸಮ್ಮಿಶ್ರ ಸರಕಾರದ ಈ ಸಂಸಾರ ಬಹಳ ದಿನ ನಡೆಯುವುದಿಲ್ಲ ಎಂದ ಅವರು ಸ್ವಲ್ಪ ದಿನದಲ್ಲೇ ವಿಚ್ಚೇದನ ಆಗಲಿದೆ ಎಂದು ಭವಿಷ್ಯ ನುಡಿದರು.

ಉಮೇಶ್ ಜಾಧವ್ ಕಾಂಗ್ರೆಸ್ ಗೆ ವಿಷದ ಇಂಜೆಕ್ಷನ್ ಕೊಟ್ಟಿದ್ದಾರೆ ಎನ್ನುವ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಾಕ್ಟರ್ ದೇವರು ಇದ್ದ ಹಾಗೆ ಇಂತಹ ಹೇಳಿಕೆ ಖರ್ಗೆ ವ್ಯಕ್ತಿತ್ವಕ್ಕೆ ಶೋಭೆ ತರಲ್ಲ ಎಂದರು.
ಚಿಂಚೋಳಿ ಉಪಚುನಾವಣೆಯನ್ನು ಗೆಲ್ಲಲೇ ಬೇಕು ಎನ್ನುವ ಪಣ ತೊಟ್ಟಿರುವ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ತಮ್ಮ ಬಿರುಸಿನ ಪ್ರಚಾರ ಕಾರ್ಯವನ್ನು ಮುಂದುವರೆಸಿದ್ದಾರೆ. ಕ್ಷೇತ್ರದ ಉಸ್ತುವಾರಿಗಳಾದ ಮಾಜಿ ಸಚಿವ ವಿ ಸೋಮಣ್ಣ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಜೊತೆಗೂಡಿ ಸೂಗೂರು ಗ್ರಾಮದಲ್ಲಿ ಸುನಿಲ ವಲ್ಲಾಪುರೆಜಿ, ಅಮರನಾಥ ಪಾಟೀಲ ಜೊತೆಗೂಡಿ ಪ್ರಚಾರ ನಡೆಸಿದರು.
ಮತ್ತೊಂದೆಡೆ, ಮಾಜಿ ಸಚಿವ ಶೋಭಾ ಕರಂದ್ಲಾಜೆ ಅವರು ಕೂಡ್ಲೀ ಗ್ರಾಮದಿಂದ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದರು. ಸಶಕ್ತ ದೇಶ ಹಾಗೂ ಸಶಕ್ತ ಕರ್ನಾಟಕಕ್ಕೆ ಬಿಜೆಪಿ ಗೆ ಬೆಂಬಲಿಸುವಂತೆ ಮನವಿ ಮಾಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications