Get Updates
Get notified of breaking news, exclusive insights, and must-see stories!

ಅಫಜಲಪುರದಲ್ಲಿ ಮಾಲಿಕಯ್ಯ ಗುತ್ತೇದಾರ್‌ಗೆ ಬಿಜೆಪಿ ಟಿಕೆಟ್‌: ತಮ್ಮನಿಂದಲೇ ವಿರೋಧ- ಕಾಂಗ್ರೆಸ್‌ಗೆ ಲಾಭ?

ಅಫಜಲಪುರ, ಏಪ್ರಿಲ್‌ 12: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ( Karnataka Assembly Elections 2023 ) ಬಿಜೆಪಿ ( BJP ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ಬಿಜೆಪಿಯೊಳಗೆ ಬಂಡಾಯವನ್ನು ಹುಟ್ಟುಹಾಕಿದೆ. ಪ್ರಬಲ ನಾಯಕರಿಗೂ ಟಿಕೆಟ್‌ ತಪ್ಪಿರುವುದರಿಂದ ಕೇಸರಿ ಪಾಳಯಲದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ.

ಶಿವಮೊಗ್ಗ, ಬೆಳಗಾವಿ, ಕಲಬುರಗಿಯಲ್ಲಿ ಬಂಡಾಯ ಕಂಡುಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ಮಾಲಿಕಯ್ಯ ಗೊತ್ತೇದಾರ ಅವರಿಗೆ ಟಿಕೆಟ್‌ ನೀಡಿರುವ ವಿಚಾರ ಕಲಬುರಗಿ ಜಿಲ್ಲೆಯ ಬಿಜೆಪಿಯಲ್ಲಿ ಅಸಮಾಧಾನವನ್ನು ಸೃಷ್ಟಿಸಿದೆ.

Karnataka Elections: BJP ticket for Malikayya Guttedar in Afazalpur: Will it help Congress?

ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಟಿಕೆಟ್‌ ನೀಡಿರುವುದಕ್ಕೆ ಅವರ ಕಿರಿಯ ಸಹೋದರ ನಿತೀನ್‌ ಗುತ್ತೇದಾರ್‌ ಅವರು ವಿರೋಧ ವ್ಯಕ್ತಪಡಿಸಬಹುದು ಎಂಬ ಮಾತುಗಳು ಕೇಳಿ ಬಂದಿವೆ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರೂ ಆಗಿರುವ ನಿತಿನ್ ಗುತ್ತೇದಾರ್ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಈಗ ಬಿಜೆಪಿ ಟಿಕೆಟ್‌ ಕೈತಪ್ಪಿರುವುದರಿಂದ ಸಹಜವಾಗಿಯೇ ಬಂಡಾಯ ಏಳುವ ಸಾಧ್ಯತೆ ಇದೆ.

ಅಫಜಲಪುರ ಕ್ಷೇತ್ರದ ಬಿಜೆಪಿ ನಾಯಕರಲ್ಲಿ ಎರಡು ಗುಂಪುಗಳಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ಗುಂಪು ಮಾಲಿಕಯ್ಯ ಗುತ್ತೇದಾರ್ ಅವರನ್ನು ಬೆಂಬಲಿಸುತ್ತಿದೆ. ಇನ್ನೊಂದು ನಿತಿನ್ ಗುತ್ತೇದಾರ್ ಅವರಿಗೆ ಮಣೆ ಹಾಕಿದೆ. ಈಗ ಟಿಕೆಟ್‌ ಕೈತಪ್ಪಿರುವ ನಿತಿನ್‌ ಗುತ್ತೇದಾರ್‌ ಅವರು ಸ್ವತಂತ್ರರಾಗಿ ಸ್ಪರ್ಧಿಸಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿದೆ.

Karnataka Elections: BJP ticket for Malikayya Guttedar in Afazalpur: Will it help Congress?

ಆರು ಬಾರಿ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಮನೆಯ ಮೇಲೆ ಕಾಂಗ್ರೆಸ್ ಬಾವುಟವನ್ನು ಹಾರಿಸಿಕೊಂಡಿದ್ದರು. ಆದರೆ, 2018 ರಲ್ಲಿ ಅಂದರೆ ಕಳೆದ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು ಬಿಜೆಪಿಗೆ ಸೇರಲು ಕಾಂಗ್ರೆಸ್‌ ಪಕ್ಷವನ್ನು ತೊರೆದರು. ಆ ಸಂದರ್ಭದಲ್ಲಿ ಮಾಲಿಕಯ್ಯ ಗುತ್ತೇದಾರ್‌ ಅವರ ಜೊತೆ ನಿತಿನ್‌ ಗುತ್ತೇದಾರ್‌ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು.

ಈಗ ಸಹೋದರರ ನಡುವಿನ ಆಂತರಿಕ ಕಚ್ಚಾಟದಿಂದ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಗೊಂದಲ ಹಾಗೂ ನಿರಾಸೆಗೆ ಒಳಗಾಗಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. ಪಕ್ಷದ ಆಂತರಿಕ ಕಚ್ಚಾಟ ಕಾಂಗ್ರೆಸ್‌ಗೆ ಲಾಭ ಮಾಡಿಕೊಡಬಹುದು ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಎಂ ವೈ ಪಾಟೀಲ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಅವರು ಈ ಕ್ಷೇತ್ರ ಹಾಲಿ ಶಾಸಕರಾಗಿದ್ದು, ಬಿಜೆಪಿ ಬಂಡಾಯದಿಂದ ಲಾಭ ಪಡೆಯಬಹುದು ಎಂದು ರಾಜಕೀಯ ಪಂಡಿತರ ಅಭಿಪ್ರಾಯ ಪಟ್ಟಿದ್ದಾರೆ.

ಈ ಕ್ಷೇತ್ರದಲ್ಲಿ ಕೋಲಿ ಸಮಾಜದ ಮತದಾರರು ಶೇ 14 ರಷ್ಟಿದ್ದಾರೆ. ಕುರುಬ ಮತದಾರರು ಶೇ 12 ರಷ್ಟಿದ್ದಾರೆ. ಪಂಚಮಸಾಲಿ ಲಿಂಗಾಯತ ಮತದಾರರು ಶೇ 12 ರಷ್ಟಿದ್ದಾರೆ. ಎಸ್‌ಸಿ ಮತದಾರರ ಸಂಖ್ಯೆ ಸರಿ ಸುಮಾರು 44,068 ಆಗಿದೆ. ಮುಸ್ಲಿಂ ಮತದಾರರು ಸರಿಸುಮಾರು 36,296 ರಷ್ಟಿದ್ದಾರೆ. 2019 ರ ಸಂಸತ್ ಚುನಾವಣೆ ಪ್ರಕಾರ, ಅಫ್ಜಲ್‌ಪುರ ವಿಧಾನಸಭೆಯ ಒಟ್ಟು ಮತದಾರರು ಸಂಖ್ಯೆ 2, 22, 677 ರಷ್ಟಿತ್ತು. 2019 ರ ಸಂಸತ್ ಚುನಾವಣೆ ಪ್ರಕಾರ, ಅಫ್ಜಲ್‌ಪುರ ವಿಧಾನಸಭೆಯ ಮತಗಟ್ಟೆಗಳ ಸಂಖ್ಯೆ 251 ರಷ್ಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+