ಅಫಜಲಪುರದಲ್ಲಿ ಮಾಲಿಕಯ್ಯ ಗುತ್ತೇದಾರ್ಗೆ ಬಿಜೆಪಿ ಟಿಕೆಟ್: ತಮ್ಮನಿಂದಲೇ ವಿರೋಧ- ಕಾಂಗ್ರೆಸ್ಗೆ ಲಾಭ?
ಅಫಜಲಪುರ, ಏಪ್ರಿಲ್ 12: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ( Karnataka Assembly Elections 2023 ) ಬಿಜೆಪಿ ( BJP ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ಬಿಜೆಪಿಯೊಳಗೆ ಬಂಡಾಯವನ್ನು ಹುಟ್ಟುಹಾಕಿದೆ. ಪ್ರಬಲ ನಾಯಕರಿಗೂ ಟಿಕೆಟ್ ತಪ್ಪಿರುವುದರಿಂದ ಕೇಸರಿ ಪಾಳಯಲದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ.
ಶಿವಮೊಗ್ಗ, ಬೆಳಗಾವಿ, ಕಲಬುರಗಿಯಲ್ಲಿ ಬಂಡಾಯ ಕಂಡುಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ಮಾಲಿಕಯ್ಯ ಗೊತ್ತೇದಾರ ಅವರಿಗೆ ಟಿಕೆಟ್ ನೀಡಿರುವ ವಿಚಾರ ಕಲಬುರಗಿ ಜಿಲ್ಲೆಯ ಬಿಜೆಪಿಯಲ್ಲಿ ಅಸಮಾಧಾನವನ್ನು ಸೃಷ್ಟಿಸಿದೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಅವರ ಕಿರಿಯ ಸಹೋದರ ನಿತೀನ್ ಗುತ್ತೇದಾರ್ ಅವರು ವಿರೋಧ ವ್ಯಕ್ತಪಡಿಸಬಹುದು ಎಂಬ ಮಾತುಗಳು ಕೇಳಿ ಬಂದಿವೆ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರೂ ಆಗಿರುವ ನಿತಿನ್ ಗುತ್ತೇದಾರ್ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಈಗ ಬಿಜೆಪಿ ಟಿಕೆಟ್ ಕೈತಪ್ಪಿರುವುದರಿಂದ ಸಹಜವಾಗಿಯೇ ಬಂಡಾಯ ಏಳುವ ಸಾಧ್ಯತೆ ಇದೆ.
ಅಫಜಲಪುರ ಕ್ಷೇತ್ರದ ಬಿಜೆಪಿ ನಾಯಕರಲ್ಲಿ ಎರಡು ಗುಂಪುಗಳಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ಗುಂಪು ಮಾಲಿಕಯ್ಯ ಗುತ್ತೇದಾರ್ ಅವರನ್ನು ಬೆಂಬಲಿಸುತ್ತಿದೆ. ಇನ್ನೊಂದು ನಿತಿನ್ ಗುತ್ತೇದಾರ್ ಅವರಿಗೆ ಮಣೆ ಹಾಕಿದೆ. ಈಗ ಟಿಕೆಟ್ ಕೈತಪ್ಪಿರುವ ನಿತಿನ್ ಗುತ್ತೇದಾರ್ ಅವರು ಸ್ವತಂತ್ರರಾಗಿ ಸ್ಪರ್ಧಿಸಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿದೆ.

ಆರು ಬಾರಿ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಮನೆಯ ಮೇಲೆ ಕಾಂಗ್ರೆಸ್ ಬಾವುಟವನ್ನು ಹಾರಿಸಿಕೊಂಡಿದ್ದರು. ಆದರೆ, 2018 ರಲ್ಲಿ ಅಂದರೆ ಕಳೆದ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು ಬಿಜೆಪಿಗೆ ಸೇರಲು ಕಾಂಗ್ರೆಸ್ ಪಕ್ಷವನ್ನು ತೊರೆದರು. ಆ ಸಂದರ್ಭದಲ್ಲಿ ಮಾಲಿಕಯ್ಯ ಗುತ್ತೇದಾರ್ ಅವರ ಜೊತೆ ನಿತಿನ್ ಗುತ್ತೇದಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.
ಈಗ ಸಹೋದರರ ನಡುವಿನ ಆಂತರಿಕ ಕಚ್ಚಾಟದಿಂದ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಗೊಂದಲ ಹಾಗೂ ನಿರಾಸೆಗೆ ಒಳಗಾಗಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. ಪಕ್ಷದ ಆಂತರಿಕ ಕಚ್ಚಾಟ ಕಾಂಗ್ರೆಸ್ಗೆ ಲಾಭ ಮಾಡಿಕೊಡಬಹುದು ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಎಂ ವೈ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಈ ಕ್ಷೇತ್ರ ಹಾಲಿ ಶಾಸಕರಾಗಿದ್ದು, ಬಿಜೆಪಿ ಬಂಡಾಯದಿಂದ ಲಾಭ ಪಡೆಯಬಹುದು ಎಂದು ರಾಜಕೀಯ ಪಂಡಿತರ ಅಭಿಪ್ರಾಯ ಪಟ್ಟಿದ್ದಾರೆ.
ಈ ಕ್ಷೇತ್ರದಲ್ಲಿ ಕೋಲಿ ಸಮಾಜದ ಮತದಾರರು ಶೇ 14 ರಷ್ಟಿದ್ದಾರೆ. ಕುರುಬ ಮತದಾರರು ಶೇ 12 ರಷ್ಟಿದ್ದಾರೆ. ಪಂಚಮಸಾಲಿ ಲಿಂಗಾಯತ ಮತದಾರರು ಶೇ 12 ರಷ್ಟಿದ್ದಾರೆ. ಎಸ್ಸಿ ಮತದಾರರ ಸಂಖ್ಯೆ ಸರಿ ಸುಮಾರು 44,068 ಆಗಿದೆ. ಮುಸ್ಲಿಂ ಮತದಾರರು ಸರಿಸುಮಾರು 36,296 ರಷ್ಟಿದ್ದಾರೆ. 2019 ರ ಸಂಸತ್ ಚುನಾವಣೆ ಪ್ರಕಾರ, ಅಫ್ಜಲ್ಪುರ ವಿಧಾನಸಭೆಯ ಒಟ್ಟು ಮತದಾರರು ಸಂಖ್ಯೆ 2, 22, 677 ರಷ್ಟಿತ್ತು. 2019 ರ ಸಂಸತ್ ಚುನಾವಣೆ ಪ್ರಕಾರ, ಅಫ್ಜಲ್ಪುರ ವಿಧಾನಸಭೆಯ ಮತಗಟ್ಟೆಗಳ ಸಂಖ್ಯೆ 251 ರಷ್ಟಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications