ರೈಲು ವಿಳಂಬದಿಂದ ಪಿಡಬ್ಲ್ಯುಡಿ ಪರೀಕ್ಷೆ ಬರೆಯದ ಅಭ್ಯರ್ಥಿಗಳಿಗೆ ಡಿ.29ರಂದು ಮರು ಪರೀಕ್ಷೆ
ಕಲಬುರಗಿ, ಡಿಸೆಂಬರ್ 16: ರೈಲು ವಿಳಂಬದಿಂದ ಲೋಕೋಪಯೋಗಿ ಇಲಾಖೆ ಪರೀಕ್ಷೆಗೆ ಕೆಲ ಪರೀಕ್ಷಾರ್ಥಿಗಳು ಗೈರಾದ ಹಿನ್ನೆಲೆಯಲ್ಲಿ ಗೈರಾದ ಪರೀಕ್ಷಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಲಾಗಿದೆ.
ಕೆಪಿಎಸ್ಸಿ ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ನಿಗದಿಪಡಿಸಿದ್ದು, ಬೆಂಗಳೂರಿನಲ್ಲಿ ಡಿಸೆಂಬರ್ 29ರಂದು ಪರೀಕ್ಷೆ ನಡೆಯಲಿದೆ. ಡಿ.22ರೊಳಗೆ ರೈಲು ಟಿಕೆಟ್ ಸಮೇತ ದಾಖಲೆ ಸಲ್ಲಿಕೆಗೆ ಸೂಚಿಸಲಾಗಿದೆ.
ಡಿಸೆಂಬರ್ 14ರಂದು ಲೋಕೋಪಯೋಗಿ ಸಹಾಯಕ ಅಭಿಯಂತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಕಲಬುರಗಿ ಕೇಂದ್ರದಲ್ಲಿ ನಡೆದಿತ್ತು. ರೈಲು ವಿಳಂಬದಿಂದ ಸಾವಿರಾರು ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದರು. ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ಹಾಜರಾಗದೇ ಅಭ್ಯರ್ಥಿಗಳು ಪರದಾಡಿದ್ದರು.

ಐದು ಗಂಟೆ ವಿಳಂಬವಾಗಿ ಕಲಬುರಗಿಗೆ ರೈಲುಗಳು ಬಂದತು. ರೈಲ್ವೆ ಹಳಿ ಮೇಲೆಯೇ ಕುಳಿತು ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿ ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಸದ್ಯ ಈಗ ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ.
ರೈಲು ಹಳಿ ಕೆಲಸ ದುರಸ್ಥಿ, ರೈಲುಗಳು ವಿಳಂಬ
ಬೆಂಗಳೂರಿನ ಯಲಹಂಕ ಬಳಿ ರೈಲು ಹಳಿ ದುರಸ್ಥಿ ಕಾರ್ಯ ಇದ್ದಿದ್ದರಿಂದ ಯಲಹಂಕ ಬಳಿ ಎರಡು ಗಂಟೆ ರೈಲು ನಿಂತಲ್ಲಿಯೇ ನಿಂತಿತ್ತು. ಯಲಹಂಕ ದಾಟಿದ ಮೇಲೆ ಕೂಡ ಅನೇಕ ಕಡೆ ರೈಲು ನಿಂತಿದ್ದರಿಂದ, ನಿಗದಿತ ಸಮಯಕ್ಕಿಂತ ಐದು ಗಂಟೆ ವಿಳಂಬವಾಗಲು ಪ್ರಮುಖ ಕಾರಣವಾಗಿದೆ.
ರೈಲು ನಿಗದಿತ ಸಮಯಕ್ಕೆ ಬರುತ್ತದೆ ಎಂದು ವಿದ್ಯಾರ್ಥಿಗಳು, ಬೆಂಗಳೂರು, ಮೈಸೂರು, ಹಾಸನ ಸೇರಿದಂತೆ ಅನೇಕ ಕಡೆಗಳಿಂದ ಸಾವಿರಾರು ಅಭ್ಯರ್ಥಿಗಳು, ರೈಲಿನಲ್ಲಿ ಕಲಬುರಗಿಗೆ ಹೊರಟಿದ್ದರು. ಆದರೆ ರೈಲ್ವೆ ಹಳಿ ದುರಸ್ಥಿ ಕಾರ್ಯದಿಂದ ರೈಲು ವಿಳಂಬವಾಗಿದ್ದರಿಂದ ಪರೀಕ್ಷೆಗೆ ಹಾಜರಾಗದೇ ವಿದ್ಯಾರ್ಥಿಗಳು ಪರದಾಟ ನಡೆಸಿದರು.

ಹಾಸನ- ಸೊಲ್ಲಾಪುರ ಎಕ್ಸ್ಪ್ರೆಸ್ ರೈಲು ಮುಂಜಾನೆ ಆರು ಗಂಟೆಗೆ ಕಲಬುರಗಿಗೆ ಬರಬೇಕಿತ್ತು. ಐದು ಗಂಟೆ ವಿಳಂಬವಾಗಿ ಕಲಬುರಗಿಗೆ ರೈಲು ಬರುವ ಸಾಧ್ಯತೆ ಇದೆ. ಹೀಗಾಗಿ ಕಲಬುರಗಿಯಲ್ಲಿರುವ ಪರೀಕ್ಷೆ ಕೇಂದ್ರಕ್ಕೆ ಬರಲು ಸಾಧ್ಯವಾಗದೆ ಅಭ್ಯರ್ಥಿಗಳು ಆತಂಕಗೊಂಡಿದ್ದರು.
ಲೋಕೋಪಯೋಗಿ ಇಲಾಖೆ ಪರೀಕ್ಷೆಗೆ ಕೆಲ ಪರೀಕ್ಷಾರ್ಥಿಗಳು ಗೈರಾದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಬೇಕು, ಇಲ್ಲವೇ ಪರೀಕ್ಷೆ ಸಮಯ ಮರು ನಿಗದಿ ಮಾಡಬೇಕು ಎಂದು ಪರೀಕ್ಷಾ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.
ಅಭ್ಯರ್ಥಿಗಳಿಗೆ ಸ್ಪಂದಿಸದ ಕೆಪಿಎಸ್ಸಿ
ಇನ್ನು ರೈಲ್ವೆ ವಿಳಂಬದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲಾಗದೆ ಪರದಾಡುತ್ತಿರುವ ವಿದ್ಯಾರ್ಥಿಗಳು, ಪರೀಕ್ಷಾ ಸಮಯವನ್ನು ಮರು ನಿಗದಿ ಮಾಡಬೇಕು, ಇಲ್ಲವೇ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಫೋನ್ ಮಾಡಿ ಮನವಿ ಮಾಡಿದ್ದಾರೆ. ಆದರೆ ಅಭ್ಯರ್ಥಿಗಳಿಗೆ ಕೆಪಿಎಸ್ಸಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು.
Recommended Video
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications