Mallikarjun Kharge: ಮಲ್ಲಿಕಾರ್ಜುನ ಖರ್ಗೆ ಕೋಟೆ ಭೇದಿಸೋಕೆ ಬಿಜೆಪಿ ಮಾಸ್ಟರ್ ಪ್ಲ್ಯಾನ್ ಏನು?
ಬೆಂಗಳೂರು, ಫೆಬ್ರವರಿ.28: ಲೋಕಸಭಾ ಸಮರಕ್ಕೆ ದೇಶವೇ ಸಜ್ಜಾಗುತ್ತಿದೆ. ಮುಂದಿನ ತಿಂಗಳು ಚುನಾವಣಾ ದಿನಾಂಕ ಘೊಷನೆಯಾಗುವ ಸಾಧ್ಯತೆಯಿದೆ. ಇದರ ಮಧ್ಯೆಯೇ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನೇತೃತ್ವದ ಎನ್ಡಿಎ ಸಿದ್ಧತೆ ನಡೆಸಿದೆ. ಕಾಂಗ್ರೆಸ್ ನೇತೃತ್ವ 'ಇಂಡಿಯಾ' ಒಕ್ಕೂಟ ಕೂಡ ಅಧಿಕಾರಕ್ಕೆ ಏರಲು ಪ್ರಯತ್ನ ಪಡುತ್ತಿದೆ.
ಇತ್ತ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಸೇಡು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದೆ. ಜೊತೆಗೆ ಗೆಲ್ಲಲು ಯಾವ ಯಾವ ಮಾಸ್ಟರ್ ಪ್ಲ್ಯಾನ್ಗಳನ್ನು ಮಾಡಬೇಕಿದೆಯೊ ಅದೆಲ್ಲವನ್ನು ಮಾಡುತ್ತಿದೆ. ಅದರಲ್ಲಿಯೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಲಬುರಗಿ ಕ್ಷೇತ್ರದಲ್ಲಿ ಸೋಲಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

ಖರ್ಗೆ ಕಟ್ಟಿಹಾಕಲು ಬಿಜೆಪಿ ಮಾಸ್ಟರ್ ಪ್ಲ್ಯಾನ್!
ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ತಮ್ಮದಾಗಿಸಿಕೊಳ್ಳುವ ಆತುರದಲ್ಲಿರುವ ಬಿಜೆಪಿ ಮೊದಲು ತಮ್ಮ ಕಣ್ಣು ಇಟ್ಟಿರುವುದು ಕಲಬುರಗಿ ಲೋಕಸಭಾ ಕ್ಷೇತ್ರದ ಮೇಲೆ. ಹೌದು... ಕೇಸರಿ ಪಾಳಯದ ಕಣ್ಣು ಮಲ್ಲಿಕಾರ್ಜುನ್ ಖರ್ಗೆ ಅವರ ಭದ್ರಕೋಟೆ ಮೇಲೆ ಬಿದ್ದಿದೆ. ಇಲ್ಲಿಂದಲೇ ಕಾಂಗ್ರೆಸ್ ಬುಡ ಅಲುಗಾಡಿಸಲು ಸಿದ್ಧತೆ ನಡೆಸಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿರುವ ಬೆನ್ನಲ್ಲೇ ಮತ್ತೆ ಕಮಲ ಬಿಟ್ಟು ಕೈ ಹಿಡಿದಿರುವ ಕಾಂಗ್ರೆಸ್ ನಾಯಕರ ಕೈಯಲ್ಲಿ ಮತ್ತೆ ಕೇಸರಿ ಬಾವುಟ ಹಿಡಿಸಲು ಪ್ರಯತ್ನ ಪಡುತ್ತಿದ್ದಾರೆ. ಕಲಬುರಗಿಯ ಮತ್ತೊಬ್ಬ ಕಾಂಗ್ರೆಸ್ ಮುಖಂಡರಾದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವರ ಮೇಲೆ ಬಿಜೆಪಿ ಕಣ್ಣು ಹಾಕಿದೆ. ಅವರು ಕೂಡ ಬಿಜೆಪಿಯಿಂದ ಕಾಂಗ್ರೆಸ್ಗೆ ಸೇರಿದ್ದವರು.

ಕಲಬುರಗಿ ಭಾಗದ ಪ್ರಬಲ ಕೋಲಿ ಸಮಾಜದ ಮುಖಂಡರಾಗಿರುವ ಬಾಬುರಾವ್ ಚಿಂಚನಸೂರ ಅವರು ವಿಧಾನಸಭಾ ಚುನಾವಣೆಯಲ್ಲಿ ಗುರುಮಿಠಕಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಕಲಬುರಗಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ತೆಗೆದುಕೊಂಡಿರುವ ಸುರಪುರ ಮಾಜಿ ಶಾಸಕ ರಾಜುಗೌಡ ಕ್ಷೇತ್ರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಕಳೆದ ಬಾರಿ ತಮ್ಮ ಸ್ಥಾನ ಕಳೆದುಕೊಂಡಿರುವ ಖರ್ಗೆ ಅವರು ಮತ್ತೆ ಕ್ಷೇತ್ರದಲ್ಲಿ ಗೆಲುವು ಕಾಣಬಾರದು ಎಂದು ಪಣ ತೊಟ್ಟಿರುವ ಬಿಜೆಪಿ ಪ್ರಮುಖ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ. ಬಿಜೆಪಿಯ ಪ್ರಮುಖ ನಾಯಕರು ಕಲಬುರಗಿಯ ರಾಜಕೀಯ ಮುಖಂಡರನ್ನು ಭೇಟಿಯಾಗಿ ಒಳಗೊಳಗೆ ರಣತಂತ್ರ ಹೂಡುತ್ತಿದ್ದಾರೆ. ಈ ಎಲ್ಲಾ ಮಾಸ್ಟರ್ ಪ್ಲ್ಯಾನ್ ದಾಟಿ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕ್ಷೇತ್ರವನ್ನು ಹೇಗೆ ಉಳಿಸಿಕೊಳ್ಳುತ್ತಾರೋ ಕಾದು ನೋಡಬೇಕಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications