ಬಿಜೆಪಿ ಕುತಂತ್ರ ಮಾಡಿಯೇ ಅನೇಕ ರಾಜ್ಯಗಳಲ್ಲಿ ಅಧಿಕಾರ ಪಡೆದಿದೆ: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ, ಜು.2: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಸರ್ಕಾರ ಪತನಕ್ಕೆ ಬಿಜೆಪಿಯ ಕುತಂತ್ರ ಕಾರಣ ಅನ್ನೋದು ಎಲ್ಲರಿಗೂ ಗೊತ್ತಿದೆ. ಮಹಾರಾಷ್ಟ್ರ ಒಂದೇ ಅಲ್ಲ, ಬಹುತೇಕ ಕಡೆ ಕುತಂತ್ರದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪಕ್ಷಾಂತರ ನಿಷೇಧ ಕಾಯ್ದೆ ಕಠಿಣವಾಗಬೇಕು. ಶಾಸಕರನ್ನು ಪಕ್ಷಾಂತರಗೊಳಿಸುವ ಕೆಲಸ ಮಾಡಬಾರದು ಇಂದಿಲ್ಲ. ಈ ನಿಟ್ಟಿನಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಕಠಿಣ ಮಾದರಿಯಲ್ಲಿ ಹೊರತರಬೇಕಿದೆ. ಇದು ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಮಾಡಬೇಕಾದ ಕೆಲಸ," ಎಂದು ಖರ್ಗೆ ತಿಳಿಸಿದರು.
ನಮ್ಮ ಮೈತ್ರಿಕೂಟ ಜನರಿಂದ ಅಧಿಕಾರ ಕಳೆದುಕೊಂಡಿಲ್ಲ. ಬಿಜೆಪಿಯ ಕುತಂತ್ರದಿಂದ ಅಧಿಕಾರ ಕಳೆದುಕೊಂಡಿದೆ. ಇದು ಪ್ರಜಾಪ್ರಭುತ್ವಕ್ಕೆ ಬಹುದೊಡ್ಡ ಹೊಡೆತವಾಗಲಿದೆ. ಮೋದಿಯವರಿಗೆ ಲೋಕಸಭೆಯಲ್ಲಿ 330ಕ್ಕಿಂತ ಹೆಚ್ಚು ಸ್ಥಾನ ಬಂದಿದ್ದರೂ ಮತ್ತು ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರೂ ತೃಪ್ತಿಯಿಲ್ಲ ಎಂದರು.

ಕಾಂಗ್ರೆಸ್ ಬಗ್ಗೆ ವಿದೇಶದಲ್ಲಿ ಮೋದಿ ಮಾತಾಡ್ತಾರೆ
ರಾಜಸ್ಥಾನದ ಕನ್ಹಯ್ಯ ಲಾಲ್ ಹತ್ಯೆ ಘಟನೆ ನಾವೆಲ್ಲರೂ ತೀವ್ರವಾಗಿ ಖಂಡಿಸಿದ್ದೇವೆ. ಯಾರೇ ತಪ್ಪು ಮಾಡಲಿ, ಯಾವ ಪಂಗಡದವನೇ ಆಗಿರಲಿ. ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಕೊಡಲೇಬೇಕೆಂದು ಹೇಳಿದರು. ಆರೋಪಿಗಳಿಗೆ ಪಾಕಿಸ್ತಾನದ ಜೊತೆ ನಂಟಿದೆ ಎಂಬ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ಇಂತಹ ವಿಷಯ ಮಾತಾಡಿ ಅಂದರೆ ಪ್ರಧಾನಿ ಮೋದಿ ಬಾಯಿನೇ ತೆರೆಯಂಗಿಲ್ಲ. ಆದರೆ, ಕಾಂಗ್ರೆಸ್ ಬಗ್ಗೆ ವಿದೇಶದಲ್ಲಿ ಮೋದಿ ಮಾತಾಡ್ತಾರೆ ಎಂದು ಟೀಕಿಸಿದರು.

ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, "ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಆಘಾಡಿ ಸರ್ಕಾರ ಪತನ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದ ವಿಷಯವಾಗಿ ಮಾತನಾಡಿ, ಯಾರೇ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದರೂ ಐದು ವರ್ಷ ಸ್ಪರ್ಧಿಸದಂತಹ ಕಾಯ್ದೆ ಜಾರಿಯಾಗಬೇಕೆಂದು," ಒತ್ತಾಯಿಸಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications