ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಫಲಿತಾಂಶ, ಅಂಕಪಟ್ಟಿ ವಿಳಂಬ: ವಿದ್ಯಾರ್ಥಿಗಳ ಪರದಾಟ
ಕಲಬುರಗಿ, ಜನವರಿ 13 : ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿನ ಆಡಳಿತಾತ್ಮಕ ಸಮಸ್ಯೆಗಳಿಂದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು, ಫಲಿತಾಂಶ, ಅಂಕಪಟ್ಟಿಗಳು ನಿಗದಿತ ಅವಧಿಯಲ್ಲಿ ಸಿಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ರಾಜ್ಯದ ಇತರೆ ವಿಶ್ವ ವಿದ್ಯಾಲಯಗಳ ಪರೀಕ್ಷೆ, ಮೌಲ್ಯಮಾಪನ, ಫಲಿತಾಂಶ, ಅಂಕಪಟ್ಟಿ ಸೇರಿದಂತೆ ಅಗತ್ಯ ದಾಖಲೆ ನಿಗದಿತ ಅವಧಿಯಲ್ಲಿ ನೀಡಲಾಗುತ್ತಿದೆ. ಆದರೆ, ಗುಲ್ಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜು, ಸ್ನಾತಕೋತ್ತರ ಕೇಂದ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಯಲ್ಲಿ ಪರೀಕ್ಷೆ ನಡೆಯಿಸಿ, ಫಲಿತಾಂಶ ಪ್ರಕಟಿಸಿ ಅಂಕಪಟ್ಟಿ ನೀಡದಿರುವುದು ಸಾಕಷ್ಟು ಸಮಸ್ಯೆ ತಂದಿದೆ.
ಲಿಂಗಸುಗೂರು ತಾಲೂಕಿನ ಒಳಬಳ್ಳಾರಿ ಚೆನ್ನಬಸವೇಶ್ವರ ಮಹಾವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀಮತಿ ಮಹಾಂತಮ್ಮ ಲಿಂಗನಗೌಡ ಮಹಾವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುದಗಲ್ಲ, ಸಜ್ಜಲಶ್ರೀ ಮಹಾವಿದ್ಯಾಲಯ ನಾಗರ ಹಾಳ ಸೇರಿದಂತೆ ಇತರೆ ಮಹಾ ವಿದ್ಯಾಲಯ, ಸ್ನಾತಕೋತ್ತರ ಕೇಂದ್ರಗಳಲ್ಲಿನ ವಿದ್ಯಾರ್ಥಿಗಳು ಫಲಿತಾಂಶ, ಅಂಕಪಟ್ಟಿ, ಘಟಿಕೋತ್ಸವ ಪ್ರಮಾಣ ಪತ್ರ, ತಾತ್ಕಾಲಿಕ ಪದವಿ ಪ್ರಮಾಣ ಪತ್ರ ಪಡೆಯಲು ಹರಸಾಹಸ ಪಡಬೇಕಾಗಿದೆ.

ಕೆಲ ವರ್ಷಗಳಿಂದ ಅಂಕಪಟ್ಟಿ ತಿದ್ದುಪಡಿ, ತಾತ್ಕಾಲಿಕ ಪದವಿ ಪ್ರಮಾಣ ಪತ್ರ, ಮರು ಮೌಲ್ಯಮಾಪನ ಫಲಿತಾಂಶ ಸೇರಿದಂತೆ ಶೈಕ್ಷಣಿಕ ತೊಂದರೆಗಳ ನಿವಾರಣೆಗೆ ಹಣ ಪಾವತಿಸಿ ಅರ್ಜಿ ಸಲ್ಲಿಸಿದ ಅನೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನಿರುದ್ಯೋಗಿಗಳಾಗಿ ಅಲೆದಾಡುವಂತಾಗಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕಾಲೇಜು ಅಧ್ಯಾಪಕರ ಸಂಘಟನೆಗಳ ಒಕ್ಕೂಟದ ರಾಜ್ಯ ಘಟಕ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಮಾತನಾಡಿ, "ರಾಜ್ಯದ ಇತರೆ ವಿಶ್ವ ವಿದ್ಯಾಲಯಗಳ ಆಡಳಿತ ಮಾದರಿ, ನಿಗದಿತ ಅವಧಿಯಲ್ಲಿ ಪರೀಕ್ಷೆ, ಫಲಿತಾಂಶ ದಾಖಲೆಗಳ ಪೂರೈಕೆ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಗುತ್ತಿಲ್ಲ. ತಾವು ಮಕ್ಕಳ ಸಮಸ್ಯೆ ಕಾಲೇಜುಗಳ ಸಮಸ್ಯೆ ಕುರಿತು ಸಾಕಷ್ಟು ಬಾರಿ ಗಮನಕ್ಕೆ ತಂದಿದ್ದರು ಪ್ರಯೋಜನವಾಗುತ್ತಿಲ್ಲ. ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು" ಎಂದು ಆಗ್ರಹಿಸಿದರು.
ಈ ಬಗ್ಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲ ಸಚಿವರು (ಮೌಲ್ಯಮಾಪನ) ಜ್ಯೋತಿಧಮ ಪ್ರಕಾಶ್ ಮಾತನಾಡಿದ್ದು, "ನಾನು ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವೆ. ಪರೀಕ್ಷೆ ಮತ್ತು ಫಲಿತಾಂಶ ವಿಳಂಬ ನೀತಿ, ಅಂಕಪಟ್ಟಿ, ಘಟಿಕೋತ್ಸವ ಪ್ರಮಾಣಪತ್ರ ಸೇರಿದಂತೆ ಇತರೆ ದಾಖಲಾತಿ ಪಡೆಯುವಲ್ಲಿ ಆಗುತ್ತಿರುವ ತೊಂದರೆಗಳ ಕುರಿತು ದೂರುಗಳು ಬಂದಿವೆ. ಆದ್ಯತೆ ಮೇರೆಗೆ ತಮ್ಮ ಅವಧಿಯಲ್ಲಿ ಎಲ್ಲ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ" ಎಂದು ತಿಳಿಸಿದ್ದಾರೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications