ಡಿಕೆಶಿ ಪದಗ್ರಹಣ: ಟಿವಿಯಲ್ಲಿ 10ಲಕ್ಷ ಜನರನ್ನು ಸೇರಿಸುವುದು ತಾಕತ್ ಅಲ್ಲ

ಕಲಬುರಗಿ, ಜುಲೈ 2: ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ವಾಕ್ಸಮರ ಮುಂದುವರಿದಿದೆ.

Recommended Video

      Corona Cases,Hassan ಹಾಸನದಲ್ಲಿ ಕೊರೊನಾಗೆ ಮತ್ತೊಂದು ಬಲಿ , ಆತಂಕದಲ್ಲಿ ಜನಗಳು | Oneindia Kannada

      ಡಿಕೆಶಿ ಪದಗ್ರಹಣ ಸಮಾರಂಭದ ಬಗ್ಗೆ ವ್ಯಂಗ್ಯವಾಡಿರುವ ಸಚಿವ ಜಾರಕಿಹೊಳಿ,"ಹತ್ತು ಲಕ್ಷ ಜನರನ್ನು ಸೇರಿಸಿ ತಾಕತ್ ಪ್ರದರ್ಶಿಸಬೇಕಿತ್ತು. ಟಿವಿಯಲ್ಲಿ ಲಕ್ಷ ಲಕ್ಷ ಜನ ನೋಡುತ್ತಾರೆಂದರೆ, ಅದಕ್ಕೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ"ಎಂದು ಹೇಳಿದರು.

      ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನಾ ಬ್ಯಾರೇಜ್ ಗೆ ಭೇಟಿ ನೀಡುವ ವೇಳೆ ಮಾತನಾಡಿದ ಸಚಿವರು, "ಜನರ ಮುಂದೆ ಪದಗ್ರಹಣ ಮಾಡದೇ, ಬರೀ ಟಿವಿ ಮುಂದೆ ಪ್ರಮಾಣವಚನ ಸ್ವೀಕರಿಸಿದ್ದಾರೆ"ಎಂದು ಜಾರಕಿಹೊಳಿ ಲೇವಡಿ ಮಾಡಿದರು.

      Minister Ramesh Jarkiholi Comment On DK Shivakumar Oath Taking Ceremony

      "ಡಿ.ಕೆ.ಶಿವಕುಮಾರ್ ಅವರ ಶಕ್ತಿ ಏನೆಂದು ನನಗೆ ತಿಳಿದಿದೆ. ಅವರೊಂದು ಪಕ್ಷದ ರಾಜ್ಯಾಧ್ಯಕ್ಷರು ಅಷ್ಟೇ..ನಾನು ಅವರ ಮಿತ್ರನಲ್ಲ"ಎಂದು ರಮೇಶ್ ಜಾರಕಿಹೊಳಿ ಹೇಳಿದರು.

      ಇತ್ತೀಚಿನ ದಿನಗಳಲ್ಲಿ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಆರೋಪ, ಪ್ರತ್ಯಾರೋಪ ತೀರಾ ಕೆಳಮಟ್ಟಕ್ಕೆ ಹೋಗಿತ್ತು. ಜಾರಕಿಹೊಳಿಯನ್ನು ಡಿಕೆಶಿ ಪರೋಕ್ಷವಾಗಿ 'ಮೆಂಟಲ್'ಎಂದಿದ್ದರು. ಅದಕ್ಕೆ ಜಾರಕಿಹೊಳಿ, ಬಾಡಿ ಲಾಂಗ್ವೇಜ್ ನೋಡಿದರೆ ಯಾರು ಮೆಂಟಲ್ ಎನ್ನುವುದು ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದ್ದರು.

      ಇಷ್ಟೇ ಅಲ್ಲದೇ, ರಮೇಶ್ ಜಾರಕಿಹೊಳಿ ಬೆಂಗಳೂರಿನ ಪಾಶ್ ಏರಿಯಾ ಎಂದೇ ಕರೆಯಲ್ಪಡುವ ಸದಾಶಿವ ನಗರದಲ್ಲಿ ಮನೆಯೊಂದನ್ನು ಖರೀದಿಸಿದ್ದರು. ಇದು, ಡಿ.ಕೆ.ಶಿವಕುಮಾರ್ ಅವರ ಮನೆಯ ಹಿಂದಿನ ಮನೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+