ಸಿದ್ದರಾಮಯ್ಯ'ಸಿಎಂ' ಟ್ವೀಟ್ ಬಗ್ಗೆ ಕಾಲೆಳೆದ ಅರವಿಂದ ಲಿಂಬಾವಳಿ
ಚಿಂಚೋಳಿ, ಮೇ 16: 'ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು' ಎಂದು ಇತ್ತೀಚೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿರುವ ಟ್ವೀಟ್ ಬಗ್ಗೆ ಶಾಸಕ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿದ್ದಾರೆ. ಇದು ವಿಶ್ವಾಸದ ಪ್ರೀತಿಯೋ.. ಕಾಲೆಳೆಯೋ ಪ್ರಿತಿಯೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಚಿಂಚೋಳಿ ಬಿಜೆಪಿ ಅಭ್ಯರ್ಥಿ ಡಾ ಅವಿನಾಶ್ ಜಾಧವ್ ಪರ ಪ್ರಚಾರದಲ್ಲಿ ತೊಡಗಿರುವ ಅವರು ಇಂದು ಗ್ರಾಮಗಳಲ್ಲಿ ಬೋವಿ ಸಮುದಾಯದ ಮುಖಂಡರುಗಳ ಆಂತರಿಕ ಸಭೆಯನ್ನು ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಈ ಟ್ವೀಟ್ ಗಳ ಸಮರ ನೋಡಿದರೆ ಇದು ಚುನಾವಣೆ ಪ್ರಚಾರವೋ ಅಥವಾ ನಿಮ್ಮ ಕಿತ್ತಾಟವೋ ಗೊತ್ತಾಗುತ್ತಿಲ್ಲ. ಈ ರೀತಿ ಕಿತ್ತಾಟದಲ್ಲಿ ತೋಡಗಿಕೊಂಡಿದ್ದರೆ ಜನರು ವೋಟ್ ಹಾಕಲಿದ್ದಾರೆ ಎಂದು ಕೊಂಡಿದ್ದೀರಾ ಎಂದು ಪ್ರಶ್ನಿಸಿದರು.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಕನಿಷ್ಠ ಉಪಚುನಾವಣೆಯಲ್ಲಾದರೂ ಒಂದಾಗುತ್ತಾರೆ ಅಂದುಕೊಂಡಿದ್ದಿವಿ. ಆದರೆ ಈ ಕಿತ್ತಾಟ ನೋಡಿದಲ್ಲಿ ಚುನಾವಣೆಯ ನಂತರ ಸರಕಾರ ಉಳೀಯುವುದಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ರಾಜ್ಯದಲ್ಲಿ ಮತ್ತಷ್ಟು ಉಪಚುನಾವಣೆಗಳು ಬರಬಹುದಾಗಿದೆ. ಬಿಜೆಪಿ ಬೆಂಬಲಕ್ಕೆ ಹಲವು ನಾಯಕರು ರಾಜೀನಾಮೆ ನೀಡಬಹುದಾಗಿದೆ. ಉಪಚುನಾವಣೆಗಳು ಬರುವುದು ಖಚಿತ ಎಂದ ಅವರು, ರಮೇಶ್ ಜಾರಕಿಹೊಳಿ ಮಾತ್ರವಲ್ಲಾ ಬೇರೆಯವರೂ ಬರಬಹುದು. ಕಾಂಗ್ರೆಸ್ ಸಂಖ್ಯಾಬಲ ಕಡಿಮೆಯಾಗೋದು ಖಚಿತ ಎಂದರು.

ಮೊದಲು ಕಾಂಗ್ರೆಸ್ ತನ್ನ ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲಿ. ನಂತರ ಆಪರೇಷನ್ ಹಸ್ತಮಾಡಲಿ. ಸಿ ಪಿ ಯೋಗೀಶ್ವರ್ ಹಾಗೂ ರಮೇಶ್ ಜಾರಕಿಹೋಲಿ ಭೇಟಿ ವೈಯಕ್ತಿ. ಕೇಂದ್ರ ಬಿಜೆಪಿ ನಾಯಕರು ಸರಕಾರವನ್ನು ಅಭದ್ರಗೊಳಿಸುವ ಕಾರ್ಯಕ್ಕೆ ಕೈ ಹಾಕಬೇಡಿ ಎಂದು ಹೇಳಿದ್ದಾರೆ. ಆದರೆ ತಾನಾಗಿಯೇ ಸರಕಾರ ಬಿದ್ದರೆ ನಾವು ಸರಕಾರ ರಚನೆ ಮಾಡಲಿದ್ದೇವೆ ಎಂದರು.
ಬಿಜೆಪಿ ಅಭ್ಯರ್ಥಿ ಡಾ ಅವಿನಾಶ್ ಜಾಧವ್ ಬಹುಮತದಿಂದ ಗೆಲ್ಲುವುದು ಸ್ಪಷ್ಟ. ವೃತ್ತಿಯಿಂದ ವೈದ್ಯರಾಗಿರುವ ಅವರು ಚಿಂಚೋಳಿ ಕ್ಷೇತ್ರದ ಆರೋಗ್ಯವನ್ನು ಸುಧಾರಿಸುತ್ತಾರೆ ಎಂದರು.
-
ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ: 'ಸಿಎಂಗೆ ದೋಸೆ ಮಜಾ, ಮಕ್ಕಳಿಗೆ ಜೀವ ಭಯ' ಎಂದ ಆರ್. ಅಶೋಕ್ -
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ -
ಗೃಹ ಸಚಿವರ 'ಸಿದ್ದರಾಮಯ್ಯ ಇನ್ನೂ 2 ವರ್ಷ ಸಿಎಂ' ಹೇಳಿಕೆ: ಡಿಕೆ ಸುರೇಶ್ ಹೇಳಿದ್ದೇನು? -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು











Click it and Unblock the Notifications