ಕೆಲವೇ ಕ್ಷಣಗಳಲ್ಲಿ ಪಂಚಭೂತಗಳಲ್ಲಿ ಲೀನರಾಗಲಿರುವ ಧರಂ ಸಿಂಗ್
ಕಲಬುರ್ಗಿ, ಜುಲೈ 28: ನಿನ್ನೆ(ಜುಲೈ 27) ನಿಧನರಾದ ಕರ್ನಾಟಕದ 17 ನೇ ಮುಖ್ಯಮಂತ್ರಿಯಾಗಿದ್ದ ಎನ್. ಧರಂ ಸಿಂಗ್ ಅವರ ಅಂತ್ಯಸಂಸ್ಕಾರ ಇನ್ನು ಕೆಲವೇ ಕ್ಷಣಗಳಲ್ಲಿ ನೆರವೇರಲಿದ್ದು, ಅಜಾತಶತ್ರು ಧರಂ ಸಿಂಗ್ ಪಂಚಭೂತಗಳಲ್ಲಿ ಲೀನರಾಗಲಿದ್ದಾರೆ.
ಇಂದು ಕಲಬುರ್ಗಿಯ ಅವರ ಹುಟ್ಟೂರಾದ ನೇಲೋಗಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಬೀದರ್, ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕ ಭಾಗದ ಸಾವಿರಾರು ಜನರು ಧರಂ ಸಿಂಗ್ ಅವರ ಅಂತಿಮ ದರ್ಶನ ಪಡೆದರು.

ನಿನ್ನೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ 80 ವರ್ಷದ ಧರಂ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ತ್ರಿವರ್ಣ ಧ್ವಜವನ್ನು ಸುತ್ತಿ ಹುಟ್ಟೂರಿಗೆ ಕೊಂಡೊಯ್ಯಲಾಯಿತು.
ಬೆಂಗಳೂರಿನಿಂದ ಬೀದರ್ ಗೆ ಹೆಲಿಕಾಪ್ಟರ್ ಮೂಲಕ ಕೊಡೊಯ್ದು, ನಂತರ ಬೀದರ್ ನಿಂದ ಕಲಬುರ್ಗಿಗೆ ರಸ್ತೆ ಮಾರ್ಗವಾಗಿ ಅವರ ಪಾರ್ಥಿವ ಶರೀರ ಕೊಂಡೊಯ್ಯಲಾಯ್ತು.ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯುತ್ತಿದ್ದ ವಾಹನವನ್ನು ಅವರ ಅಭಿಮಾನಿಗಳಲ್ಲೂ ಅಲ್ಲಲ್ಲಿ ತಡೆದು, ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆದು, ಅಶ್ರುತರ್ಪಣ ನೀಡಿದರು.
ಧರಂ ಸಿಂಗ್ ಅವರ ನೆಚ್ಚಿನ ಗೆಳೆಯರೂ, ಸಹೋದ್ಯೋಗಿಯೂ ಆಗಿದ್ದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪತ್ನಿ ರಾಧಾಬಾಯಿ ಅವರೊಂದಿಗೆ ಜೇವರ್ಗಿಗೆ ತೆರಳಿ ಧರಂ ಸಿಂಗ್ ಪತ್ನಿ ಪ್ರಭಾವತಿ ಮತ್ತು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ನಿನ್ನೆ(ಜುಲೈ 27) ಮಾಧ್ಯಮಗಳು, ಧರಂ ಸಿಂಗ್ ರೊಂದಿಗಿನ ಒಡನಾಟದ ಬಗ್ಗೆ ಕೇಳಿದಾಗ ಬಿಕ್ಕಿ ಬಿಕ್ಕಿ ಅತ್ತಿದ್ದ ಖರ್ಗೆ ಅವರು, ಇಂದು ಸಹ ತಮ್ಮ ಸ್ನೇಹಿತನ ಪಾರ್ಥಿವ ಶರೀರ ಕಂಡು ಮತ್ತೊಮ್ಮೆ ಬಿಕ್ಕಿದರು.
ಇನ್ನು ಕೆಲವೇ ಕ್ಷಣ ಗಳಲ್ಲಿ ಪಂಚಭೂತಗಳಲ್ಲಿ ಲೀನರಾಗುವ ಧರಂ ಸಿಂಗ್ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications