ಗುಲ್ಬರ್ಗಾ ವಿಮಾನ ನಿಲ್ದಾಣಕ್ಕೆ ಸೇವಾಲಾಲ್ ಹೆಸರಿಡಿ: ಎಚ್ಡಿಕೆಗೆ ಮನವಿ
ಕಲಬುರಗಿ, ಸೆಪ್ಟೆಂಬರ್ 17: ಹೈದರಾಬಾದ್ -ಕರ್ನಾಟಕದ ಭಾಗದಲ್ಲಿ ಇಂದು ಬಹುಕಾಲದ ಕನಸು ನನಸಾಗಿದೆ. ವಿಮಾನ ಹಾರಾಟ ಶುರುವಾಗಿದೆ. ಈ ನಡುವೆ ಗುಲ್ಬರ್ಗಾದ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಅವರ ಹೆಸರಿಡುವಂತೆ ಬಂಜಾರ ಸಮುದಾಯದವರು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬಂಜಾರಗಳ ತಾಂಡಗಳಿಗೆ ಭೇಟಿ ಮಾಡಿದ ಕುಮಾರಸ್ವಾಮಿ ಅವರು, ರಾಜ್ಯದ 1500 ತಾಂಡಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಸಾಂಸ್ಕೃತಿಕ ಕೇಂದ್ರಗಳನ್ನು ನಿರ್ಮಿಸಲಾಗುವುದು. ಈ ವರ್ಷ 400 ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಗಳ ನಿರ್ಮಾಣ ಹಾಗೂ ಪುನಶ್ಚೇತನಕ್ಕೆ ಚಾಲನೆ ನೀಡಲಾಗುವುದು ಎಂದರು.ಕರ್ನಾಟಕ ರಾಜ್ಯ ತಾಂಡ ಅಭಿವೃದ್ಧಿ ನಿಗಮ ನಡೆಸಿದ ಸಮೀಕ್ಷೆಯಿಂದ ಶೇ.45ರಷ್ಟು ಸೇವಾಲಾಲ್ ಸಾಂಸ್ಕೃತಿಕ ಭವನಗಳು ಶಿಥಿಲಾವಸ್ಥೆಯಲ್ಲಿವೆ ಎಂಬ ಅಂಶ ಬೆಳಕಿಗೆ ಬಂದಿದೆ.
ಸಮೀಕ್ಷೆಯಲ್ಲಿ ವ್ಯಕ್ತವಾದ ಅಂಶಗಳನ್ನು ಆಧರಿಸಿ, ಕರ್ನಾಟಕದಲ್ಲಿ ನೆಲೆಸಿರುವ ಬಂಜಾರ ಜನಾಂಗದಲ್ಲಿ ಪಾರಂಪರಿಕವಾಗಿ ಬಂದಿರುವ ವಿಶಿಷ್ಟವಾದ ಸಂಸ್ಕೃತಿ, ಕಲೆಗಳನ್ನು ಉಳಿಸಿ, ಪ್ರೋತ್ಸಾಹಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಮೂಲಕ ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಗಳನ್ನು ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುವ ಯೋಜನೆಯನ್ನು ರೂಪಿಸಲಾಗಿದೆ ಎಂದರು. ಕುಮಾರಸ್ವಾಮಿಗಳ ಜತೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತಿತ್ತರರು ಈ ಸಂದರ್ಭದಲ್ಲಿ ಹಾಜರಿದ್ದರು.

ರಾಜ್ಯದಲ್ಲಿ ಸುಮಾರು 3373 ತಾಂಡಗಳಿವೆ
ರಾಜ್ಯದಲ್ಲಿ ಸುಮಾರು 3373 ತಾಂಡಗಳಿದ್ದು, ಇವುಗಳಲ್ಲಿ ವಾಸ ಮಾಡುತ್ತಿರುವ ಬಂಜಾರ ಜನಾಂಗದವರು ತಮ್ಮ ಆರಾಧ್ಯ ಗುರುಗಳಾದ ಸೇವಾಲಾಲ್ ಅವರ ಹೆಸರಿನಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳುತ್ತ ಬರುತ್ತಿದ್ದಾರೆ.
"ಮಠ್" ಹೆಸರಿನಲ್ಲಿ ಸಣ್ಣಪುಟ್ಟ ಸಾಂಸ್ಕೃತಿಕ ಕೇಂದ್ರಗಳನ್ನು ನಿರ್ಮಿಸಿಕೊಂಡು ತಮ್ಮ ಕಲೆಯನ್ನು ಅಭಿವ್ಯಕ್ತಿಗೊಳಿಸುತ್ತಾ ಬಂದಿದ್ದಾರೆ. ಬಂಜಾರ ಜನಾಂಗದ ಮದುವೆ, ಹಬ್ಬ, ಶುಭ ಸಮಾರಂಭ, ನ್ಯಾಯ ಪಂಚಾಯಿತಿ ಮುಂತಾದ ಆಚರಣೆಗಳು ಈ "ಮಠ್" ಮುಂಭಾಗದಲ್ಲಿಯೇ ನಡೆಯುತ್ತಿವೆ.

ಸೇವಾಲಾಲ್ ಸಾಂಸ್ಕೃತಿಕ ಭವನಗಳು ಶಿಥಿಲಾವಸ್ಥೆ
ಕರ್ನಾಟಕ ರಾಜ್ಯ ತಾಂಡ ಅಭಿವೃದ್ಧಿ ನಿಗಮ ನಡೆಸಿದ ಸಮೀಕ್ಷೆಯಿಂದ ಶೇ.45ರಷ್ಟು ಸೇವಾಲಾಲ್ ಸಾಂಸ್ಕೃತಿಕ ಭವನಗಳು ಶಿಥಿಲಾವಸ್ಥೆಯಲ್ಲಿವೆ ಎಂಬ ಅಂಶ ಬೆಳಕಿಗೆ ಬಂದಿದೆ.
ಪ್ರತಿ ಕೇಂದ್ರದ ನಿರ್ಮಾಣಕ್ಕಾಗಿ 10 ಲಕ್ಷ ರೂ.ಗಳವರೆಗೂ ಆರ್ಥಿಕ ಅನುದಾನ ನಿಡಲಾಗುವುದು. ಪ್ರಸಕ್ತ ವರ್ಷ ಈ ಉದ್ದೇಶಕ್ಕಾಗಿ 23 ಕೋಟಿ ರೂ. ವೆಚ್ಚ ಭರಿಸಲಿದ್ದು, ಮುಂದಿನ 3 ವರ್ಷಗಳಲ್ಲಿ ಒಟ್ಟಾರೆ 112 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಹೇಳಿದರು.

ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರು ಏಕೆ?
ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರು ಏಕೆ? ಎಂಬ ಪ್ರಶ್ನೆಗೆ ಬಂಜಾರ ಸಮುದಾಯದ ಅಧ್ಯಕ್ಷೆ ಬಿ.ಟಿ ಲಲಿತಾ ನಾಯಕ್ ಉತ್ತರಿಸಿದ್ದಾರೆ. ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಬಂಜಾರ ಸಮುದಾಯದವರು ಅಪಾರವಾದ ಭೂಮಿಯನ್ನು ಕಳೆದುಕೊಂಡಿದ್ದಾರೆ. ಕೆಲವರಿಗೆ ಮಾತ್ರ ಪರಿಹಾರ ಸಿಕ್ಕಿದೆ. ಸಂತ ಸೇವಾಲಾಲ್ ಅವರ ಹೆಸರಿಡುವ ಮೂಲಕ ಬಂಜಾರ ಸಮುದಾಯದ ಋಣ ತೀರಿಸಲಿ ಎಂದಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಬಂಜಾರ ಸಮುದಾಯಕ್ಕೆ ಉದ್ಯೋಗ
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬಂಜಾರ ಸಮುದಾಯದ ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವಂತೆ ಕೂಡಾ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ 2,500ಕ್ಕೂ ಅಧಿಕ ತಾಂಡಾಗಳಿದ್ದು, ಈ ಬಗ್ಗೆ ಸರ್ಕಾರ, ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಬೇಕಿದೆ. ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಬೇಕು ಎಂದು ಬಿ.ಟಿ ಲಲಿತಾನಾಯ್ಕ್ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications