ಮಾರ್ಚ್ 6ಕ್ಕೆ ರಾಜ್ಯಕ್ಕೆ ಮೋದಿ, ಖರ್ಗೆ ಕ್ಷೇತ್ರದಲ್ಲಿ 'ಲೋಕ' ಕಹಳೆ
Recommended Video
ಕಲಬುರಗಿ, ಮಾರ್ಚ್ 05: ನಾಳೆ (ಮಾರ್ಚ್ 06)ಕ್ಕೆ ರಾಜ್ಯಕ್ಕೆ ಮೋದಿ ಆಗಮಿಸಲಿದ್ದು, ಲೋಕಸಭಾ ಚುನಾವಣೆ ಪ್ರಚಾರಕ್ಕೆ ಕಹಳೆ ಮೊಳಗಿಸಲಿದ್ದಾರೆ.
ಕಾಂಗ್ರೆಸ್ನ ಹಿರಿಯ ಸಂಸದ, ಲೋಕಸಭೆಯಲ್ಲಿ ಕಾಂಗ್ರೆಸ್ನ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕ್ಷೇತ್ರ ಕಲಬುರ್ಗಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಸಮೀಕ್ಷೆ : ಬಾಲಕೋಟ್ ದಾಳಿ ನಂತರ ಮೋದಿ ಪುನರ್ ಆಯ್ಕೆ?
ಮೈತ್ರಿ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆಯನ್ನೇ ಮೋದಿ ಅವರು ಸುರಿಸುವ ನಿರೀಕ್ಷೆ ಇದ್ದು, ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿಯ ಪ್ರಚಾರಕ್ಕೆ ಇದು ಅಧಿಕೃತ ಚಾಲನೆ ಎನ್ನಲಾಗುತ್ತಿದೆ.
ಸಮಾವೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವುದು ಕುತೂಹಲ ಹುಟ್ಟಿಸಿದ್ದು, ಖರ್ಗೆ ಅವರ ವಿರುದ್ಧ ಮೋದಿ ಅವರು ಟೀಕಾ ಪ್ರಹಾರ ಹರಿಸುವ ನಿರೀಕ್ಷೆ ಇದೆ.
ಮೋದಿಯಿಂದ ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ ಎಂದ ಖರ್ಗೆ
ಕಾಂಗ್ರೆಸ್ ತ್ಯಜಿಸಿ, ನಿನ್ನೆಯಷ್ಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ್ ಜಾಧವ್ ಅವರು ನಾಳೆಯ ಸಮಾವೇಶದಲ್ಲಿ ಮೋದಿ ಉಪಸ್ಥಿತಿಯಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ.