ಮೋದಿಗೆ ಮಲ್ಲಿಕಾರ್ಜುನ ಖರ್ಗೆಯೆಂದರೆ ಹೆದರಿಕೆ: ಜಯಮಾಲ
Recommended Video
ಕಲಬುರಗಿ, ಏಪ್ರಿಲ್ 21: ಕೆಲವರಿಗೆ ಬಾಯಿಚಪಲ ಮಾತನಾಡುತ್ತಾರೆ. ದೇವರು ನಾಲಿಗೆ ಕೊಟ್ಟಿದ್ದಾನೆ ಉದ್ದ ಚಾಚುತ್ತಾರೆ, ಬಾಯಿ ಕೊಟ್ಟಿದ್ದಾನೆ ಅಗಲ ಮಾಡಿ ಏನೇನೋ ಮಾತನಾಡುತ್ತಾರೆ. ಆ ಬಗ್ಗೆ ನಾನು ಏನು ಹೇಳುವುದಿಲ್ಲ. ಯಾಕೆಂದರೆ, ನನ್ನ ಹಣೆಬರಹ ಬರೆಯುವವರು ನೀವು ನನ್ನ ಪರವಾಗಿವಾಗಿದ್ದೀರಿ. ಸಾಮೂಹಿಕ ಬೆಂಬಲ ಘೋಷಿಸಿದ್ದೀರಿ ಹಾಗಾಗಿ ನಿಮಗೆ ನಾನು ಆಭಾರಿಯಾಗಿದ್ದೇನೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ಕೋಸಗಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಆರ್ಯ ಈಡಿಗ ಸಮದಾಯದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂವಿಧಾನದ ಅಡಿಯಲ್ಲಿ ಎಲ್ಲಾ ಹಿಂದುಳಿದ, ದಲಿತ ಹಾಗೂ ಇತರೆ ಎಲ್ಲ ವರ್ಗಗಳಿಗೆ ಮೀಸಲಾತಿ ಒದಗಿಸಿದೆ. ಸಂವಿಧಾನದ ಆಶಯಗಳಿಗೆ ಧಕ್ಕೆ ಬಂದರೆ ಎಲ್ಲ ಸೌಲಭ್ಯಗಳು ರದ್ದಾಗಲಿವೆ. ಈ ಬಗ್ಗೆ ಎಚ್ಚರವಹಿಸಿ, ಕಾಂಗ್ರೆಸ್ ಪಕ್ಷಕ್ಕೆ ಹಾಗೂ ನನಗೆ ಮತ ನೀಡುವ ಮೂಲಕ ಸಂವಿಧಾನವನ್ನು ರಕ್ಷಿಸಬೇಕು ಎಂದು ಮನವಿ ಮಾಡಿದರು.
ಸಚಿವೆ ಜಯಮಾಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶದಲ್ಲಿ ಯಾರಿಗಾದರೆ ಹೆದರಿದ್ದರೆ ಅದು ಖರ್ಗೆ ಅವರಿಗೆ ಮಾತ್ರ. ಖರ್ಗೆ ಅವರು ಸಂಸತ್ತಿನಲ್ಲಿ ಮಾತನಾಡಿ ಸರಕಾರದ ಸಾಧನೆಗಳ ಬಗ್ಗೆ ಪ್ರಶ್ನೆ ಕೇಳುತ್ತಿದ್ದರೆ, ಮೋದಿ ಉತ್ತರಿಸುವುದೇ ಇಲ್ಲ ಎಂದು ಟೀಕಿಸಿದರು.

ಬಂಜಾರ ಸಮುದಾಯಕ್ಕೆ ಖರ್ಗೆ ಅವರ ಕೊಡುಗೆ ಏನು ಎಂದು ಜಾಧವ್ ಪ್ರಶ್ನೆ ಮಾಡ್ತಾರೆ. ನೀವೇ ಅಧಿಕಾರದಲ್ಲಿ ಇದ್ದರಲ್ಲ ಜಾಧವ್ ಅವರು ಚಿಂಚೋಳಿಯಲ್ಲಿ ಅದೇ ಬಂಜಾರ ಸಮುದಾಯ ಮಹಿಳೆಯರು ಹೊಟ್ಟೆ ಪಾಡಿಗೆ ದೂರದ ಊರುಗಳಿಗೆ ವಲಸೆ ಹೋಗುತ್ತಿದ್ದರೆ ನೀವೇನು ಕ್ರಮ ಕೈಗೊಂಡಿರಿ ಎಂದು ಪ್ರಶ್ನಿಸಿದರು.
ಕಳೆದ ಮೂರು ದಶಕಗಳಿಂದ ಅಧಿಕಾರದಲ್ಲಿದ್ದರಲ್ಲ ಅವರು ಈಡಿಗ ಸಮುದಾಯ ಭವನ ನಿರ್ಮಾಣ ಮಾಡಿಲ್ಲವಲ್ಲ ಯಾಕೆ? ಖರ್ಗೆ ಅವರನ್ನು ಕೇಳಿದ್ದರೆ ಕೊಡುತ್ತಿರಲಿಲ್ಲವೇ? ಎಂದು ಮಾಲೀಕಯ್ಯ ಗುತ್ತೇದಾರ ಹೆಸರು ಹೇಳದೆ ಕೇಳಿದರು.

ವೇದಿಕೆಯ ಮೇಲೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್, ಕೆ.ಬಿ.ಶಾಣಪ ಶರಣಪ್ಪ ಮಟ್ಟೂರು, ಶರಣಯ್ಯ ಗಾರಂಪಳ್ಳಿ, ಜಗದೇವ ಗುತ್ತೇದಾರ ಸೇರಿದಂತೆ ಮತ್ತಿತರಿದ್ದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ











Click it and Unblock the Notifications