ಕರ್ನಾಟಕದ ಮುಖ್ಯಮಂತ್ರಿ ರಿಮೋಟ್ ಸಿಎಂ : ನರೇಂದ್ರ ಮೋದಿ
Recommended Video
ಕಲಬುರಗಿ, ಮಾರ್ಚ್ 06 : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದರು. ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿಯಲ್ಲಿ ಮೋದಿ ಚುನಾವಣಾ ಪ್ರಚಾರ ನಡೆಸಿದರು.
ಕಲಬುರಗಿಯ ಎನ್.ವಿ.ಮೈದಾನದಲ್ಲಿ ಬುಧವಾರ ಕರ್ನಾಟಕ ಬಿಜೆಪಿ ಬೃಹತ್ ಸಮಾವೇಶವನ್ನು ಆಯೋಜಿಸಿತ್ತು. ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು 'ಕರ್ನಾಟಕ ಸರ್ಕಾರ ರೈತರ ವಿರೋಧಿ' ಎಂದು ಟೀಕಿಸಿದರು.
ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ ಡಾ.ಉಮೇಶ್ ಜಾಧವ್
ಬೀದರ್ಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಸ್ವಾಗತಿಸಿದರು. ಬಳಿಕ ಹೆಲಿಪಾಕ್ಟರ್ನಲ್ಲಿ ನರೇಂದ್ರ ಮೋದಿ ಅವರು ಕಲಬುರಗಿಗೆ ಆಗಮಿಸಿದರು.
ಕಾಂಗ್ರೆಸ್ ನಿಂದ 10 ಸೀಟು ಗಿಟ್ಟಿಸಿಕೊಂಡಿದ್ದೇವೆ ಎಂದ ದೇವೇಗೌಡ
ಭಾರತ್ ಪೆಟ್ರೋಲಿಯಂ ಡಿಪೋ ಸೇರಿದಂತೆ ಕಲಬುರಗಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಸರ್ಕಾರಿ ಕಾರ್ಯಕ್ರಮದ ಬಳಿಕ ಬಿಜೆಪಿಯ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಕುಟುಂಬ ರಾಜಕಾರಣದ ಬಗ್ಗೆ ಯಡಿಯೂರಪ್ಪರನ್ನು ಪ್ರಶ್ನಿಸಿದ ಅನಿತಾ ಕುಮಾರಸ್ವಾಮಿ