ಕಳಪೆ ರಸ್ತೆ ಕಾಮಗಾರಿ, ಕೈಯಲ್ಲಿ ಕಿತ್ತು ಬರುವ ಟಾರು
ಕಲಬುರಗಿ , ನ.30: ಕಲಬುರಗಿ ಜಿಲ್ಲೆಯ ಕಮಲಾಪುರದ ಗ್ರಾಮವೊಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸಿದ ಸರ್ಕಾರಿ ಗುತ್ತಿಗೆದಾರರು ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಆಡಳಿತ ಪಕ್ಷ ಬಿಜೆಪಿಯ ಕಾರ್ಯಕರ್ತ ಎಂದಿರುವ ವ್ಯಕ್ತಿ ತನ್ನದ ಪಕ್ಷದ ಶಾಸಕರ ವಿರುದ್ಧ ದನಿ ಎತ್ತಿದ್ದಾರೆ. ರಸ್ತೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ತಾವೇ ಬಗ್ಗೆ ಟಾರು ಕಿತ್ತು ಹಾಕುವುದನ್ನು ನೋಡಬಹುದು.
ವಿಡಿಯೋದಲ್ಲಿ ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು, ಸರ್. ಇದು ಕಮಲಾಪುರ ತಾಲೂಕಿನ ಚೆಂಗ್ಟಾ ಗ್ರಾಮದ ರಸ್ತೆ" ಎಂದು ಹೇಳುವುದನ್ನು ಕೇಳಬಹುದು.

ಈ ವಿಡಡಿಯೋವನ್ನು ಹಲವು ಮಂದಿ ಹಂಚಿಕೊಂಡಿದ್ದಾರೆ. ಅದರಲ್ಲಿ 'ಹೇಟ್ ಡಿಟೆಕ್ಟರ್' ಎಂಬ ಟ್ವಿಟ್ಟರ್ ಹ್ಯಾಂಡಲ್, "ಈ ಕಾಮಗಾರಿಯನ್ನು ಗುಲ್ಬರ್ಗ (ಗ್ರಾಮೀಣ) ಬಿಜೆಪಿ ಶಾಸಕ ಬಸವರಾಜ್ ಮಟ್ಟಿಮಡ್ ಅವರ ಮುಂದಾಳತ್ವದಲ್ಲಿ ಮಾಡಲಾಗಿದೆ. ನೀವು ಕಮಲಾಪುರ ಬಿಜೆಪಿ ಕಾರ್ಯಕರ್ತ ಸುಭಾಷ್ ಬಿರಾದಾರ್ ಅವರನ್ನು ವಿಡಿಯೋದಲ್ಲಿ ನೋಡಬಹುದು. ಇದು ರಸ್ತೆಯು ಹೇಗಿದೆ ಎಂಬುದನ್ನು ತೋರಿಸುತ್ತದೆ " ಎಂದು ಬರೆದಿದೆ.
ನಗರದಲ್ಲಿನ ಮೂಲಸೌಕರ್ಯಗಳ ಕಳಪೆ ಗುಣಮಟ್ಟದ ಬಗ್ಗೆ ರಾಜ್ಯ ಸರ್ಕಾರ ಟೀಕೆಗಳನ್ನು ಎದುರಿಸುತ್ತಲೇ ಇದೆ. ಗುತ್ತಿಗೆದಾರರು ವೆಚ್ಚವನ್ನು ಕಡಿತಗೊಳಿಸಲು ಕಡಿಮೆ ಗುಣಮಟ್ಟದ ವಸ್ತುಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಾಕಲಾಗಿದ್ದ ರಸ್ತೆಯು ಕಿತ್ತು ಹೋಗಿದ್ದು, ಸರ್ಕಾರವನ್ನು ಮುಜುಗರಕ್ಕೆ ಈಡುಮಾಡಿತ್ತು. ಬಳಿಕೆ ಇಂತಹ ಘಟನೆಗಳು ಹಲವೆಡೆ ವರದಿಯಾಗಿವೆ.
ಇನ್ನು, ಆಡಳಿತರೂಢ ಬಿಜೆಪಿ ಸರ್ಕಾರದ ಮೇಲೆ ಇರುವ ಗಂಭಿರ ಆರೋಪ 40% ಕಮಿಷನ್ ಸರ್ಕಾರ ಎಂಬುದು. ಹೀಗಾಗಿ ಇಂತಹ ಘಟನೆಗಳನ್ನು ಮುಂದಿರಿಸಿಕೊಂಡು ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ವಿರುದ್ಧ ಮತ್ತಷ್ಟು ವಾಗ್ದಾಳಿ ನಡಡೆಸುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications