Get Updates
Get notified of breaking news, exclusive insights, and must-see stories!

'ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಕಾಂಗ್ರೆಸ್ ಮೂಗು ತೂರಿಸಲ್ಲ'

ಕಲಬುರಗಿ, ಜನವರಿ 08: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಇರುವುದಿಲ್ಲ ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯಿಲಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕಾಂಗ್ರೆಸ್ ಮೂಗು ತೂರಿಸುವುದಿಲ್ಲ. ಈ ವಿಷಯವಾಗಿ ಕಾಂಗ್ರೆಸ್ ಸಚಿವರು ಹೇಳಿಕೆ ಕೊಟ್ಟಿದ್ದರೆ ಅದು ಅವರ ವೈಯಕ್ತಿಕ ವಿಚಾರವೇ ಹೊರತು ಪಕ್ಷದ್ದಲ್ಲ ಎಂದರು.

ಜನವರಿ ತಿಂಗಳ ಅಂತ್ಯಕ್ಕೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ತಲುಪಿಸುವುದಾಗಿ ಹೇಳಿದ ಮೊಯಿಲಿ, 2025ರೊಳಗೆ ನವಕರ್ನಾಟಕ ನಿರ್ಮಾಣದ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸಲಾಗಿದ್ದು, ರಾಜ್ಯದ ಎಲ್ಲಾ ಭಾಗದ ಜನರ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಲಾಗಿದೆ ಎಂದರು.

No space for Lingayatha separate religion issue in congress manifesto

ರೈತಾಪಿ ವರ್ಗ, ಪ್ರಾದೇಶಿಕ ಅಭಿವೃದ್ಧಿ, ಎಲ್ಲಾ ವರ್ಗದ ಜನರಿಗೆ ಅಗತ್ಯ ಯೋಜನೆಗಳನ್ನು ಪ್ರಣಾಳಿಕೆ ಒಳಗೊಂಡಿರುತ್ತದೆ. ಮುಖ್ಯವಾಗಿ ಸತ್ಯ ಮತ್ತು ರಾಜಧರ್ಮದ ಆಧಾರದ ಮೇಲೆ ಈ ಬಾರಿಯ ಚುನಾವಣಾ ಪ್ರಣಾಳಿಕೆ ತಯಾರು ಮಾಡಲಾಗುತ್ತಿದ್ದು, ಪ್ರಣಾಳಿಕೆ ರಚನೆ ಸಂಬಂಧ ರಾಜ್ಯದ ಆರು ವಿಭಾಗಗಳಲ್ಲಿ ಎಲ್ಲಾ ಜಿಲ್ಲೆಯ ಜನಪ್ರತಿನಿಧಿಗಳು, ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಮೋದಿಗೆ ಭಯ:
ಗುಜರಾತ್ ಚುನಾವಣೆಗೆ ಬಗ್ಗೆ ಮಾತನಾಡಿದ ಸಂಸದ ವೀರಪ್ಪ ಮೊಯಿಲಿ, ಪ್ರಧಾನಿ ಮೋದಿ ಅವರಿಗೆ ಗುಜರಾತ್ ಚುನಾವಣೆಯಲ್ಲಿ ನಡುಕ ಶುರುವಾಗಿತ್ತು, "ನನ್ನ ಹತ್ಯೆಗೆ ಸುಪಾರಿ ನೀಡಲಾಗಿದೆ" ಎಂದು ಸುಳ್ಳು ಹೇಳಿ, ಭಾವನಾತ್ಮಕವಾಗಿ ಮಾತನಾಡಿ ಜನರ ಕರುಣೆ ಗಿಟ್ಟಿಸಿಕೊಂಡು ಗೆದ್ದರು. ಆದರೆ ಪ್ರಧಾನಿ ಅವರ ಈ ಕಲೆ ಕರ್ನಾಟಕದ ಚುನಾವಣೆಯಲ್ಲಿ ನಡೆಯದು ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+