ಯಡಿಯೂರಪ್ಪಗೆ ರಿಲೀಫ್: ಕಲಬುರಗಿ ಹೈಕೋರ್ಟ್ನಿಂದ ಎಫ್ಐಆರ್ಗೆ ಮಧ್ಯಂತರ ತಡೆ
Recommended Video

ಕಲಬುರಗಿ, ಫೆಬ್ರವರಿ 22: ಆಪರೇಷನ್ ಕಮಲ ಆಡಿಯೋ ಕ್ಲಿಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗದ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಕಲಬುರಗಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಇದರಿಂದ ಆಪರೇಷನ್ ಕಮಲ ಪ್ರಕರಣದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ನಿರಾಳತೆ ಮೂಡಿಸಿದೆ.
ಯಡಿಯೂರಪ್ಪ ಅವರಲ್ಲದೆ, ಉಳಿದ ಮೂವರು ಆರೋಪಿಗಳಾದ ಹಾಸನ ಶಾಸಕ ಪ್ರೀತಂಗೌಡ, ದೇವದುರ್ಗದ ಶಾಸಕ ಶಿವನಗೌಡ ಮತ್ತು ಪತ್ರಕರ್ತ ಮರಂಕಲ್ ಅವರೂ ಸದ್ಯ ಎಫ್ಐಆರ್ನಿಂದ ಪಾರಾಗಿದ್ದಾರೆ.

ಆಪರೇಷನ್ ಕಮಲ ನಡೆಸುವ ಪ್ರಯತ್ನದಲ್ಲಿ ಯಡಿಯೂರಪ್ಪ ಮತ್ತು ಮೂವರ ವಿರುದ್ಧ ದೇವದುರ್ಗ ಪೊಲೀಶ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಜೆಡಿಎಸ್ ಶಾಸಕ ನಾಗನಗೌಡ ಕುಂದಕೂರು ಅವರ ಮಗ ಶರಣಗೌಡ ನೀಡಿದ್ದ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದರು.
ಇದನ್ನು ರದ್ದುಗೊಳಿಸುವಂತೆ ಕೋರಿ ಕಲಬುರಗಿ ಹೈಕೋರ್ಟ್ನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳು ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದರು.
ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿ ಪಿಜಿಎಂ ಪಾಟೀಲ್ ಎಫ್ಐಆರ್ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದರು.
ಗುರುಮಠಕಲ್ ಶಾಸಕ ನಾಗನಗೌಡ ಕುಂದಕೂರ ಅವರ ಪುತ್ರ ಶರಣಗೌಡ ಅವರು ಯಡಿಯೂರಪ್ಪ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದರು. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿತ್ತು.












Click it and Unblock the Notifications