ಪಿಎಸ್ಐ ನೇಮಕಾತಿ ಅಕ್ರಮ: ನಿರೀಕ್ಷಣಾ ಜಾಮೀನಿಗಾಗಿ ದಿವ್ಯಾ ಅರ್ಜಿ
ಕಲಬುರಗಿ, ಏಪ್ರಿಲ್ 21: ಪೊಲೀಸ್ ಸಬ್- ಇನ್ಸ್ ಪೆಕ್ಟರ್(PSI) ನೇಮಕಾತಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆ ಮುಂದುವರೆದಿದೆ. ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಟಾಪ್ 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿ ಕಲಬುರಗಿ ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಒಡತಿ ದಿವ್ಯಾ ಹಾಗರಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ದಿವ್ಯಾ ಹಾಗರಗಿ ಅಲ್ಲದೆ, ಮುಖ್ಯೋಪಾಧ್ಯಾಯರಾದ ಕಾಶಿನಾಥ್ ಹಾಗೂ ಸಹ ಶಿಕ್ಷಕಿ ಅರ್ಚನಾ ಎಂಬುವರಿ ಇಲ್ಲಿನ ಜೆಎಫ್ಎಂಎ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ.
ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿ ಏಪ್ರಿಲ್ 20ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಅಭ್ಯರ್ಥಿಗಳಿಗೆ ಸೂಚಿಸಿದ್ದಾರೆ. 545 ಅಭ್ಯರ್ಥಿಗಳ ಪೈಕಿ ಟಾಪ್ 50 ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ನೋಟಿಸ್ ನೀಡಲಾಗಿತ್ತು. ಈ ಪೈಕಿ ಐದಾರು ಮಂದಿ ಬಿಟ್ಟು ಮಿಕ್ಕ ಎಲ್ಲಾ ಅಭ್ಯರ್ಥಿಗಳು ವಿಚಾರಣೆಗೆ ಹಾಜರಾಗಿದ್ದರು.

ಈ ಪ್ರಕರಣದಲ್ಲಿ ಇದುವರೆಗೂ 8 ಜನರನ್ನು ಬಂಧಿಸಲಾಗಿದೆ. ಭಾನುವಾರ ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಬಂಧಿಸಿದ್ದು, ಅಧಿಕಾರಿಗಳು ವಾಹನ ವಶಕ್ಕೆ ಪಡೆದಿದ್ದರು. ಸೋಮವಾರ ಜ್ಞಾನ ಜ್ಯೋತಿ ಇಂಗ್ಲಿಶ್ ಮಾಧ್ಯಮ ಶಾಲೆಯ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಇನ್ನೂ ಪತ್ತೆಯಾಗಿಲ್ಲ.
ಸಿಐಡಿ ಈಗಾಗಲೇ ಅಭ್ಯರ್ಥಿಗಳಾದ ಕಲಬುರಗಿಯ ವೀರೇಶ ನಿಡಗುಂದಿ, ಅರುಣ ಪಾಟೀಲ, ರಾಯಚೂರಿನ ಪ್ರವೀಣ ಕುಮಾರ, ಚೇತನ ನಂದಗಾಂವ ಬಂಧಿಸಿದೆ. ಪರೀಕ್ಷಾ ಮೇಲ್ವಿಚಾರಣೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿಯರಾದ ಸುಮಾ, ಸಿದ್ಧಮ್ಮ ಮತ್ತು ಸಾವಿತ್ರಿಯನ್ನು ಸಹ ಬಂಧಿಸಲಾಗಿದೆ. ಬಂಧಿತ ರಾಜೇಶ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. ಸಿಐಡಿ ಹೆಚ್ಚುವರಿ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಪ್ರಕಾಶ್ ರಾರೋಡ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications