ಮತ್ತೆ ಮೋದಿ ಹೆಸರಲ್ಲಿ ಮತ ಕೇಳಿದರೆ ಬಾಯಲ್ಲಿ ಬೂಟ್ ಹಾಕ್ತೀವಿ: ಮುತಾಲಿಕ್
ಕಲಬುರಗಿ, ಜುಲೈ 4: ಪ್ರತಿ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಚುನಾವಣೆ ಪ್ರಚಾರ ನಡೆಸಿ ಗೆಲ್ಲುವ ರಾಜ್ಯ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿರಾಟ್ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರ ವಿರುದ್ಧ ನಾಲಿಗೆ ಹರಿಬಿಟ್ಟಿರುವ ವಿಡಿಯೋ ಈಗ ವೈರಲ್ ಆಗಿದೆ.
ಇನ್ನಾದರೂ ಐದು ವರ್ಷ ಕೆಲಸ ಮಾಡಿ. ಮುಂದಿನ ಬಾರಿಯೂ ಮೋದಿ ಅವರ ಹೆಸರು ಹೇಳಿದರೆ ಬಾಯಲ್ಲಿ ಬೂಟ್ ಹಾಕುತ್ತೇವೆ ಎಂದು ಮುತಾಲಿಕ್ ಹೇಳಿದ್ದಾರೆ.

'ಐದಾರು ಗೆಲ್ಲುತ್ತೀರಿ, ಇಪ್ಪತ್ತೈದು ವರ್ಷ ಒಂದು ಜಿಲ್ಲೆಯನ್ನಾಳುತ್ತೀರಿ. ನಾಚಿಕೆ ಬರುವುದಿಲ್ಲ ನಿಮಗೆ? ನಿರ್ಲಜ್ಜರು ನೀವು. ಈಗ ಹೇಳಬೇಕು ಅವರಿಗೆ ಮೋದಿ ಅವರ ಮುಖ ನೋಡಿ, ಮೋದಿ ಅವರ ಗಂಡಸ್ತನ ನೋಡಿ, ಮೋದಿ ಅವರ ಹಿಂದುತ್ವದ ವಿಚಾರ ನೋಡಿ ನಾವು ಅವರಿಗೆ ವೋಟ್ ಹಾಕಿದ್ದೇವೆ. ಈ ಐದು ವರ್ಷ ಬಾಯಿಮುಚ್ಚಿಕೊಂಡು ಕೆಲಸ ಮಾಡಿ. ಮುಂದಿನ ಸಲ ಏನಾದರೂ ಮೋದಿ ಎಂದರೆ ಬಾಯಲ್ಲಿ ಬೂಟ್ ಹಾಕ್ತೇವೆ ಎಂಬ ಎಚ್ಚರಿಕೆಯನ್ನು ಅವರಿಗೆ ಕೊಡಬೇಕಿದೆ' ಎಂದು ಹೇಳಿದ್ದಾರೆ.
ಮುತಾಲಿಕ್ ಅವರು ಇತ್ತೀಚೆಗಷ್ಟೇ ತಾವು ರಾಜಕೀಯದಿಂದ ದೂರ ಸರಿದಿರುವುದಾಗಿ ತಿಳಿಸಿದ್ದರು. ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ನೆಲೆ ಕಂಡುಕೊಳ್ಳುವುದು ಕಷ್ಟ. ಪಕ್ಷೇತರರಾಗಿ ಗೆದ್ದರೂ ಯಾರಿಗೂ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ ಎಂದಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications