ಕಲ್ಯಾಣ ಕರ್ನಾಟಕಕ್ಕೆ ಕೊಡುಗೆ ಶೂನ್ಯ; ಟ್ವೀಟ್ ಬಾಣ ಬಿಟ್ಟ ಪ್ರಿಯಾಂಕ್ ಖರ್ಗೆ
ಕಲಬುರಗಿ, ಮಾರ್ಚ್ 05: "ಬಿಜೆಪಿ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡುಗೆ ಶೂನ್ಯವಾಗಿದೆ. ಈ ಬಾರಿ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಏನೂ ಅನುದಾನ ನೀಡಿಲ್ಲ" ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಹೈದರಾಬಾದ್ ಕರ್ನಾಟಕ ಹೆಸರಿನ ಬದಲು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದರೆ ಜನರ ಭವಿಷ್ಯ ಬದಲಾಗುವುದಿಲ್ಲ. ಎಲ್ಲಾ ವಿಷಯದಲ್ಲೂ ಕಲ್ಯಾಣ ಕರ್ನಾಟಕವನ್ನು ಕಡೆಗಣಿಸಲಾಗುತ್ತದೆ. ಇದೀಗ ಬಜೆಟ್ ನಲ್ಲೂ ಇದೇ ರೀತಿ ಆಗಿದೆ" ಎಂದು ಬೇಸರ ವ್ಯಕ್ತಪಡಿಸಿದರು.

"ಈ ಮೊದಲು ಬಿಜೆಪಿ 371(ಜೆ) ತಿರಸ್ಕರಿಸಿತ್ತು. ಮತ್ತೆ ಈಗ ಬಜೆಟ್ ನಲ್ಲಿಯೂ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯವಾಗುತ್ತದೆ ಎಂದು ರಾಜೀನಾಮೆ ನೀಡಿದ ರಾಜಕಾರಣಿಗಳು ಈಗ ಎಲ್ಲಿದಾರೆ?" ಎಂದು ಟ್ವಿಟರ್ ನಲ್ಲಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.












Click it and Unblock the Notifications