ಕಲಬುರಗಿಯಲ್ಲಿ ವಕೀಲನ ಹತ್ಯೆ ಖಂಡಿಸಿ ಪ್ರತಿಭಟನೆ!
ಕಲಬುರಗಿ ಡಿಸೆಂಬರ್ 7: ಕಲಬುರಗಿಯಲ್ಲಿ ವಕೀಲನ ಹತ್ಯೆಯನ್ನು ಖಂಡಿಸಿ ವಕೀಲರು ಬೀದಿಗಿಳಿದು ಪ್ರತಿಭಟನೆ ಮಾಡಿದರು. ಸರ್ದಾರ್ ವಲ್ಲಾಬಾಯ್ ಪಟೇಲ್ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚುವ ಮೂಲಕ ವಕೀಲರು ಆಕ್ರೋಶ ಹೊರಹಾಕಿದರು.
ಕಳೆದ ದಿನ ಬೆಳಗ್ಗೆ ವಕೀಲ ಹಿರಣ್ಣ ಗೌಡ ಎಂಬುವವರನ್ನು ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ ಭಯಾನಕ ಘಟನೆ ನಡೆದಿದೆ. ಕಲಬುರಗಿಯ ಅಪಾರ್ಟ್ಮೆಂಟ್ ಬಳಿ 40 ವರ್ಷದ ವಕೀಲರನ್ನು ಅಪರಿಚಿತ ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ಮಾಡಿದ್ದಾರೆ.

ಮೃತರನ್ನು ಹಿರಣ್ಣ ಗೌಡ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ನ್ಯಾಯಾಲಯಕ್ಕೆ ತೆರಳುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆದಿದೆ.ಈ ವೇಳೆ ಅವರು ನ್ಯಾಯಾಲಯಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಒಂದೂವರೆ ಕಿಲೋಮೀಟರ್ಗೂ ಹೆಚ್ಚು ದೂರ ಆತನನ್ನು ಹಿಂಬಾಲಿಸಿದ ಹಂತರು ದಾಳಿ ಬಳಿಕ ಪರಾರಿಯಾಗಿದ್ದಾರೆ.
ಮಾರಕಾಸ್ತ್ರಗಳೊಂದಿಗೆ ವಕೀಲರನ್ನು ಬೆನ್ನಟ್ಟುತ್ತಿರುವ ದೃಶ್ಯಗಳು ಅಪಾರ್ಟ್ಮೆಂಟ್ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಿರಣ್ಣ ಅವರು ಈ ವೇಳೆ ಪರವಾನಗಿ ಪಡೆದ ಬಂದೂಕನ್ನು ಹೊಂದಿದ್ದರು ಎಂದು ವರದಿಯಾಗಿದೆ. ತನ್ನನ್ನು ರಕ್ಷಿಸಿಕೊಳ್ಳಲು ಬಂದೂಕು ತೆಗೆಯುವ ಮುನ್ನವೇ ಅವರ ಮೇಲೆ ಹಂತರು ದಾಳಿ ಮಾಡಿದ್ದಾರೆ.
ಅಪರಾಧಿಗಳ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಕಲಬುರಗಿ ಪೊಲೀಸ್ ಕಮಿಷನರ್ ಆರ್ ಚೇತನ್ ಅವರು ಮಾರಣಾಂತಿಕ ದಾಳಿಯ ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
'ಗುರುವಾರ ಬೆಳಗ್ಗೆ ವಕೀಲ ಹಿರಣ್ಣ ಗೌಡ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಅವರ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನಾವು ಎರಡು ತಂಡಗಳನ್ನು ರಚಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ವಕೀಲರ ಬಳಿ ಗನ್ ಇತ್ತು. ಅವರು ಅದನ್ನು ಬಳಸಿದ್ದಾರೆಯೇ ಎಂದು ನಮಗೆ ತಿಳಿದಿಲ್ಲ. ಎಫ್ಎಸ್ಎಲ್ ವರದಿ ಬಂದ ನಂತರ ನಮಗೆ ಅದರ ಬಗ್ಗೆ ತಿಳಿಯುತ್ತದೆ' ಎಂದು ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳೆದ ದಿನವೂ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ಕಲಬುರಗಿ ಜಿಲ್ಲಾ ವಕೀಲರ ಸಂಘದ ಸದಸ್ಯರು ನಗರದ ಎಸ್ವಿಪಿ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications