Get Updates
Get notified of breaking news, exclusive insights, and must-see stories!

PSI recruitment scam: PSI ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್‌ಪಿನ್ ಬಂಧನ

ಕಲಬುರಗಿ, ನವೆಂಬರ್‌, 10: ಪಿಎಸ್‌ಐ, ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್‍ಪಿನ್ ಆರ್‌ಡಿ ಪಾಟೀಲ್‍ನನ್ನು ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ನಂತರ ಅಂದರೆ ಕಳೆದ 12 ದಿನಗಳಿಂದ ಆರ್‌ಡಿ ಪಾಟೀಲ್ ತಲೆ ಮರೆಸಿಕೊಂಡಿದ್ದು, ಪೊಲೀಸರು ತೀವ್ರ ಶೋಧ ನಡೆಸಿದ್ದರು. ಇದರ ಪ್ರತಿಫಲವಾಗಿ ಇಂದು ಮಹಾರಾಷ್ಟ್ರದಲ್ಲಿ ಪಾಟೀಲ್‌ನ ಬಂಧನವಾಗಿದೆ.

PSI and kea exam scam Cases Accused RD Patil arrest

ತಲಮರೆಸಿಕೊಂಡಿದ್ದ ಆರ್‌ಡಿ ಪಾಟೀಲ್ ಸೊಲ್ಲಾಪುರದಲ್ಲಿರುವ ಸಂಬಂಧಿಕರ ಮನೆಯಲ್ಲಿಯೇ ಅವಿತುಕೊಂಡಿದ್ದ. ಇಂದು ಈ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಸಂಬಂಧಿಕರ ಮನೆಯಿಂದಲೇ ಬಂಧಿಸಿ ಕಲಬುರಗಿಗೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯಂತರ ತಡೆ

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕಿಂಗ್‌ಪಿನ್‌ ಆಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್ ವಿರುದ್ಧ ರಾಜ್ಯದ ವಿವಿಧ ಕಡೆ ದಾಖಲಾಗಿರುವ 11 ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್ ಕೆಲವು ತಿಂಗಳು ಹಿಂದೆಯಷ್ಟೇ ಮಧ್ಯಂತರ ತಡೆ ನೀಡಿತ್ತು.

ಇದರಿಂದಾಗಿ ಪಾಟೀಲ್ ಸದ್ಯಕ್ಕೆ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಜೊತೆಗೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ಆದೇಶಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ, ಬೆಂಗಳೂರು, ಧಾರವಾಡ ಮತ್ತು ತುಮಕೂರಿನ ವಿವಿಧ ಠಾಣೆಗಳಲ್ಲಿ ಪ್ರತ್ಯೇಕವಾಗಿ ದಾಖಲಾಗಿರುವ 11 ಪ್ರಕರಣಗಳನ್ನೂ ಒಂದೇ ಕೋರ್ಟ್ ವಿಚಾರಣೆ ನಡೆಸಲು ಆದೇಶಿಸಬೇಕು ಎಂದು ಕೋರಿ ಆರ್.ಡಿ.ಪಾಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿತ್ತು.

ಪಾಟೀಲ್ ವಿರುದ್ಧ ಕಲಬುರಗಿಯ ಚೌಕ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಒಂದು ಪ್ರಕರಣ, ಸ್ಟೇಷನ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರಕರಣ, ಅಶೋಕ್ ನಗರ ಠಾಣೆಯಲ್ಲಿ ದಾಖಲಾಗಿರುವ ಐದು ಪ್ರಕರಣ, ಬೆಂಗಳೂರಿನ ರಾಮಮೂರ್ತಿ ನಗರ, ತುಮಕೂರಿನ ಕ್ಯಾತಸಂದ್ರ ಹಾಗೂ ಧಾರವಾಡದ ಉಪ ನಗರ ಠಾಣೆಗಳಲ್ಲಿ ದಾಖಲಾಗಿರುವ ತಲಾ ಒಂದೊಂದು ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಅಲ್ಲದೇ, ಇದೇ ಅಪರಾಧಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಿಸಿ ಪಾಟೀಲ್ ಅವರನ್ನು ಪೋಲಿಸರು ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ಅರ್ಜಿದಾರ ಪರ ವಕೀಲರು ಆತಂಕ ವ್ಯಕ್ತಪಡಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಗಳ ಮುಂದಿನ ಮುಂದಿನ ವಿಚಾರಣೆವರೆಗೆ ಪಾಟೀಲ್ ವಿರುದ್ಧ ಯಾವುದೇ ಬಲದ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು.

ಜೊತೆಗೆ ಕಲಬುರಗಿ, ಬೆಂಗಳೂರು, ಧಾರವಾಡ ಮತ್ತು ತುಮಕೂರಿನ ವಿವಿಧ ಠಾಣೆಗಳಲ್ಲಿ ಪ್ರತ್ಯೇಕವಾಗಿ ದಾಖಲಾಗಿರುವ 11 ಪ್ರಕರಣಗಳನ್ನು ಒಂದೇ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲು ನಿರ್ದೇಶಿಸಬೇಕೆಂಬ ಅರ್ಜಿದಾರನ ಮನವಿ ಕುರಿತು ಹೈಕೋರ್ಟ್ ತೀರ್ಮಾನ ಕೈಗೊಳ್ಳಬೇಕಿತ್ತು.

ಪ್ರಕರಣದ ಹಿನ್ನೆಲೆ

ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಕಲಬುಗಿರಯ ಚೌಕ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಪ್ರಧಾನ ಪ್ರಕರಣದಲ್ಲಿ ಅರ್ಜಿದಾರ ಆರ್.ಡಿ. ಪಾಟೀಲ್ ಅವರನ್ನು 14ನೇ ಆರೋಪಿಯನ್ನಾಗಿಸಲಾಗಿದೆ. ಅವರ ವಿರುದ್ಧ 11 ಪ್ರಕರಣಗಳು ಬಾಕಿಯಿದೆ. ಈ ಪೈಕಿ ಎಂಟು ಕಲಬುರಗಿ ವಿವಿಧ ಠಾಣೆಗಳಲ್ಲಿ, ಧಾರವಾಡ, ಬೆಂಗಳೂರು ಮತ್ತು ತುಮಕೂರಿನ ಬೇರೆ ಬೇರೆ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಿಸಲಾಗಿದೆ. ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಒಂದೇ ಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕು ಎಂದು ಪಾಟೀಲ್ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಿ, ಮೂಲ ಅರ್ಜಿ ಇತ್ಯರ್ಥಪಡಿಸುವರೆಗೆ ಎಲ್ಲಾ ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+