ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರೇರಣೆ? ಎರಡನೇ ಬಾರಿ ಅಮಾನತಾದ ಪಿಎಸ್ಐ!
ಬೆಂಗಳೂರು, ಅ. 23: ಪ್ರವಾಹ ಸಂತ್ರಸ್ತರ ಜೀವದೊಂದಿಗೆ ಚೆಲ್ಲಾಟವಾಡಿದ್ದ, ವಿಲಕ್ಷಣ ವ್ಯಕ್ತಿತ್ವದ ಪೊಲೀಸ್ ಸಬ್ಇನ್ಸಪೆಕ್ಟರ್ ಮಲ್ಲಣ್ಣ ಯಲಗೋಡ್ ಅವರನ್ನು ಅಮಾನತು ಮಾಡಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಮಾಡಿದ್ದಾರೆ. ಕಳೆದ ಆರು ತಿಂಗಳುಗಳಲ್ಲಿ ಮಲ್ಲಣ್ಣ ಯಲಗೋಡ್ ಅಮಾನತಾಗುತ್ತಿರುವುದು ಇದು ಎರಡನೇ ಬಾರಿ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಣ್ಣ ಯಲಗೋಡ್ ಅವರು ಪ್ರವಾಹದಿಂದ ಮುಳುಗಡೆ ಆಗಿದ್ದ ಕೂಡಲಗಿ ಗ್ರಾಮದ ಸಂತ್ರಸ್ತರ ಜೀವದೊಂದಿಗೆ ಚೆಲ್ಲಾಟವಾಡಿರುವ ಆರೋಪ ಎದುರಿಸುತ್ತಿದ್ದಾರೆ.
ಭೀಮಾ ನದಿಯ ಪ್ರವಾಹದಿಂದ ತಪ್ಪಿಸಿಕೊಂಡು ಬಂದಿದ್ದ ಗ್ರಾಮಸ್ಥರನ್ನು ಏನಾದರೂ ರಕ್ಷಣೆ ಮಾಡೋಣ ಎಂದು ಮತ್ತೆ ಕೂಡಲಗಿ ಗ್ರಾಮಕ್ಕೆ ಪಿಎಸ್ಐ ಮಲ್ಲಣ್ಣ ಕರೆದುಕೊಂಡು ಹೋಗಿದ್ದರು. ಅಲ್ಲಿಂದ ಕುರಿಮರಿಯೊಂದನ್ನು ಎತ್ತಿಕೊಂಡು ಬಂದು ರಕ್ಷಣೆ ಮಾಡಿರುವುದಾಗಿ ಕ್ಯಾಮರಾಕ್ಕೆ ಪೋಸ್ ಕೊಟ್ಟಿದ್ದರು. ಇದರಿಂದ ಕಲಬುರಗಿ ಜಿಲ್ಲೆಯ ಇಡೀ ಪೊಲೀಸ್ ಇಲಾಖೆಗೆ ಮುಜುಗುರ ಉಂಟಾಗಿತ್ತು.

ಹಾಲಿನ ಅಭಿಷೇಕ ಮಾಡಿಸಿಕೊಂಡು ಅಮಾನತು
ವಿಪರ್ಯಾಸ ಎಂದರೆ ಪಿಎಸ್ಐ ಮಲ್ಲಣ್ಣ ಯಲಗೋಡ್ ಅವರು ಕಳೆದ ಆರು ತಿಂಗಳುಗಳಲ್ಲಿ ಈಗ ಎರಡನೇ ಬಾರಿ ಅಮಾನತಾಗಿದ್ದಾರೆ. ಕ್ಷೀರಾಭಿಷೇಕ ಮಾಡಿಸಿಕೊಂಡು ಈ ಮೊದಲು ಅಮಾನತಾಗಿದ್ದರು. ಕಳೆದ ಜೂನ್ ತಿಂಗಳಿನಲ್ಲಿ ಕೊರೊನಾ ಲಾಕ್ಡೌನ್ ಜಾರಿಯಲ್ಲಿದ್ದಾಗಲೂ ತಮ್ಮ ಹುಟ್ಟುಹಬ್ಬದಂದು ಹಾಲಿನ ಅಭಿಷೇಕವನ್ನು ಪಿಎಸ್ಐ ಮಲ್ಲಣ್ಣ ಯಲಗೋಡ್ ಅವರು ಮಾಡಿಸಿಕೊಂಡಿದ್ದರು. ಅದಕ್ಕಾಗಿ ಆಗಿನ ಕಲಬುರಗಿ ಜಿಲ್ಲಾ ಎಸ್ಪಿ ಯಡಾ ಮಾರ್ಟಿನ್ ಅವರು ಅಮಾನತು ಮಾಡಿ ಆದೇಶ ಮಾಡಿದ್ದರು.

ಇದೀಗ ಎರಡನೇ ಬಾರಿ ಅಮಾನತು
ಇದೀಗ ಎರಡನೇ ಬಾರಿ ತಮ್ಮ ವಿಲಕ್ಷಣ ವರ್ತನೆಯಿಂದ ಪಿಎಸ್ಐ ಮಲ್ಲಣ್ಣ ಯಲಗೋಡ್ ಅಮಾತನಾಗಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯ ಪಿಎಸ್ಐ ಸಂಗಮೇಶ್ ಅವರಿಗೆ ನೆಲೋಗಿ ಠಾಣೆಯ ಹೆಚ್ಚುವರಿ ಪ್ರಭಾರ ಜವಾಬ್ದಾರಿಯನ್ನು ವಹಿಸಿ ಕಲಬುರಗಿ ಎಸ್ಪಿ ಆದೇಶ ಮಾಡಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯ ವ್ಯಾಪ್ತಿಯು ಸೂಕ್ಷ್ಮ ಪ್ರದೇಶವಾಗಿದೆ. ಹೀಗಾಗಿ ಜೇವರ್ಗಿ ಠಾಣೆಯ ಪಿಎಸ್ಐ ಸಂಗಮೇಶ್ ಅವರನ್ನು ಪ್ರಭಾರ ಪಿಎಸ್ಐ ನೇಮಕ ಮಾಡಲಾಗಿದೆ ಎಂದು ಎಸ್ಪಿ ಆದೇಶದಲ್ಲಿ ತಿಳಿಸಿದ್ದಾರೆ.

ಸಿಂಗಂ ರೀತಿ ವರ್ತನೆ ಮಾಡುತ್ತಿದ್ದರು
ಅಮಾತನಾಗಿರುವ ಪಿಎಸ್ಐ ಮಲ್ಲಣ್ಣ ಯಲಗೋಡ್ ಅವರು ಸಿನಿಮಾ ದೃಶ್ಯಗಳನ್ನು ಅನುಸರಿಸುತ್ತಿದ್ದರು. ಇದು ಪೊಲೀಸ್ ಇಲಾಖೆಗೆ ಇರುಸು ಮುರುಸು ಉಂಟು ಮಾಡಿತ್ತು. ಸಿಂಗಂ, ಕೆಜಿಎಫ್ ಸಿನಿಮಾಗಳ ದೃಶ್ಯಗಳನ್ನು ಪೊಲೀಸ್ ಸಮವಸ್ತ್ರ ಧರಿಸಿ ಅನುಕರಣೆ ಮಾಡಿ ಮೊಬೈಲ್ನಲ್ಲು ಚಿತ್ರೀಕರಿಸಿಕೊಳ್ಳುತ್ತಿದ್ದರು. ಅದನ್ನು ಸಹಿಸಿಕೊಂಡಿದ್ದ ಪೊಲೀಸ್ ಇಲಾಖೆ, ಇದೀಗ ಪ್ರವಾಹ ಸಂತ್ರಸ್ತರೊಂದಿಗಿನ ವಿಲಕ್ಷಣ ವರ್ತನೆಗೆ ಅಮಾತನು ಮಾಡಿದೆ.

ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರೇರಣೆ?
ಪಿಎಸ್ಐ ಮಲ್ಲಣ್ಣ ಯಲಗೋಡ್ ಅವರಿಗೂ ಮೊದಲು, ಕಳೆದ ವರ್ಷ ಪ್ರವಾಹ ಸ್ಥಿತಿ ಎದುರಾಗಿದ್ದಾಗ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇಂಥದ್ದೆ ಹುಚ್ಚಾಟವನ್ನು ಮಾಡಿದ್ದರು. ಹೊನ್ನಾಳಿ ಬಳಿಯ ಬೇಲಿ ಮಲ್ಲೂರು-ಕೋಟೆ ಮಲ್ಲೂರು ರಸ್ತೆಯಲ್ಲಿ ಹರಿಯುತ್ತಿದ್ದ ಮೊಣಕಾಲುದ್ದದ ನೀರಿನಲ್ಲಿ ತೆಪ್ಪದಲ್ಲಿ ಹತ್ತಿಕೊಂಡು ಹುಟ್ಟು ಹಾಕುವ ಮೂಲಕ ರೇಣುಕಾಚಾರ್ಯ ಅವರು ನಗೆಪಾಟಲಿಗೆ ಈಡಾಗಿದ್ದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ











Click it and Unblock the Notifications