ಕಲಬುರಗಿ ಪ್ರವಾಹ; ಸೈಯದ್ ಚಿಂಚೋಳಿ ಗ್ರಾಮ ಸ್ಥಳಾಂತರಕ್ಕೆ ಸೂಚನೆ
ಕಲಬುರಗಿ, ಅಕ್ಟೋಬರ್ 16: ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸ್ಥಳಾಂತರ ಮಾಡುವಂತೆ ಕಂದಾಯ ಸಚಿವ ಅರ್. ಅಶೋಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರವಾಹದಿಂದಾಗಿ ಗ್ರಾಮ ಮುಳುಗಡೆಯಾಗಿದೆ.
ಶುಕ್ರವಾರ ಸಚಿವ ಆರ್. ಅಶೋಕ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಇತ್ತೀಚೆಗೆ ಸುರಿದ ಮಳೆ ಮತ್ತು ಭೋಸಗಾ ಕೆರೆ ಪ್ರವಾಹದಿಂದ ಹಾನಿಗೊಳಗಾದ ಸೈಯದ್ ಚಿಂಚೋಳಿ ಗ್ರಾಮಕ್ಕೆ ಅವರು ಭೇಟಿ ನೀಡಿ, ಜನರ ಮಾತು ಮಾತುಕತೆ ನಡೆಸಿದರು.
ಸೈಯದ್ ಚಿಂಚೋಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಕಾಳಜಿ ಕೇಂದ್ರಕ್ಕೂ ಸಚಿವರು ಭೇಟಿ ನೀಡಿ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ಗ್ರಾಮ ಸ್ಥಳಾಂತರ ಸಂಬಂಧ ಗ್ರಾಮಕ್ಕೆ ಹತ್ತಿರದಲ್ಲಿಯೇ 11 ಎಕರೆ ಪ್ರದೇಶ ಗುರುತಿಸಲಾಗಿದೆ. ಗ್ರಾಮಸ್ಥರು ಒಪ್ಪಿದಲ್ಲಿ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಹಾಯಕ ಆಯುಕ್ತರಿಗೆ ಸೂಚಿಸಿದರು.

"ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಮೂರು ಹೊತ್ತು ಊಟದ ಜೊತೆಗೆ ಮೊಟ್ಟೆ, ಮಲಗಲು ಹೊದಿಕೆ, ಟವೆಲ್, ಸ್ಯಾನಿಟೈಸರ್ ನೀಡಬೇಕು. ಮಹಿಳೆಯರಿಗೆ ಸೀರೆ ಸಹ ನೀಡುವಂತೆ" ಅಧಿಕಾರಿಗಳಿಗೆ ಸಚಿವರು ನಿರ್ದೇಶ ನೀಡಿದರು.
ಎನ್ಡಿಆರ್ಎಫ್ ತಂಡ ರವಾನೆ: "ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ ಹಾಗೂ ಮುಂಬೈ ಕರ್ನಾಟಕದ ಬೆಳಗಾವಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕಳೆದ ಮೂರು ದಶಕದಲ್ಲಿ ಕಾಣದ ಭೀಕರ ಮಳೆಯಾಗಿದ್ದು,ರಕ್ಷಣಾ ಕಾರ್ಯಕ್ಕಾಗಿ ಎನ್. ಡಿ. ಆರ್. ಎಫ್. ತಂಡ ಕಳುಹಿಸಲಾಗಿದೆ" ಎಂದರು.
"ಕರ್ನಾಕಟದ ಒಟ್ಟು 173 ತಾಲೂಕುಗಳನ್ಬು ಪ್ರವಾಹ ಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ನೆರೆ ಪರಿಹಾರ ಕಾರ್ಯ ನಡೆಯುತ್ತಿದ್ದು, ಕಲಬುರಗಿ ಜಿಲ್ಲೆಯ 11 ತಾಲೂಕುಗಳು ಸಹ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಸೇರಿವೆ" ಎಂದು ಅಶೋಕ್ ವಿವರಣೆ ನೀಡಿದರು.
50 ಸಾವಿರ ಪರಿಹಾರ: "ಪ್ರಕೃತಿ ವಿಕೋಪಕ್ಕೆ ತುತ್ತಾದ ಮನೆಗಳ ದುರಸ್ತಿಗೆ 50 ಸಾವಿರ ರೂ. ಮತ್ತು ಸಂಪೂರ್ಣ ಮನೆ ಕುಸಿತ ಪ್ರಕರಣದಲ್ಲಿ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಮಳೆಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕೆ ಬೆಳೆಗಳ ಸಮೀಕ್ಷೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ" ಎಂದು ಆರ್. ಅಶೋಕ ಹೇಳಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications