ಹಿಂದೂ ಪರ ಸಂಘಟನೆ ಪ್ರತಿಭಟನೆ: ಕಲಬುರಗಿ ರೈಲು ನಿಲ್ದಾಣದ ಗೋಡೆಗೆ ಬಿಳಿ ಬಣ್ಣ
ಕಲಬುರಗಿ, ಡಿ. 13: ಹಸಿರು ಬಣ್ಣವನ್ನು ಬದಲಾಯಿಸಬೇಕು ಎಂದು ಆಗ್ರಹಿಸಿ ಹಿಂದೂ ಗುಂಪುಗಳ ಪ್ರತಿಭಟನೆ ಬೆನ್ನಲ್ಲೆ ರೈಲ್ವೆ ಇಲಾಖೆಯು ರೈಲು ನಿಲ್ದಾಣದ ಗೋಡೆಗೆ ಪುನಃ ಬಣ್ಣ ಬಳಿಯಲು ನಿರ್ಧರಿಸಿದ್ದು, ಬಣ್ಣ ಬಳಿಯಲಾಗುತ್ತಿದೆ.
ಕಲಬುರಗಿ ರೈಲು ನಿಲ್ದಾಣಕ್ಕೆ ಈ ಹಿಂದೆ ಹಸಿರು ಬಣ್ಣವನ್ನು ಬಳಿಯಲಾಗಿತ್ತು. ಇದಕ್ಕೆ ಹಿಂದೂ ಪರ ಸಂಗಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಬಣ್ಣದಿಂದ ರೈಲು ನಿಲ್ದಾಣ ಮಸೀದಿ ರೀತಿಯಲ್ಲಿ ಕಾಣಿಸುತ್ತಿದೆ ಎಂದು ಆರೋಪಿಸಿದ್ದರು.
Due to pressure from #Hindu groups. Railway department in #Kalaburgi has decided to repaint the railway station wall. They are repainting the green colour with white. #Karnataka https://t.co/yio4ZeC5RW pic.twitter.com/DAVXUlp4HN
— Imran Khan (@KeypadGuerilla) December 13, 2022
ಮಂಗಳವಾರ ಬೆಳಗ್ಗೆ ಹಿಂದೂ ಪರ ಸಂಘಟನೆಗಳು ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಇಲಾಖೆಯು ಹಸಿರು ಬಣ್ಣದ ಮೇಲೆ ಬಿಳಿ ಬಣ್ಣವನ್ನು ಬಳಿಸುತ್ತಿದ್ದಾರೆ.

ರೈಲು ನಿಲ್ದಾಣದ ಗೋಡೆಗಳ ಮೇಲೆ ಹಸಿರು ಬಣ್ಣ ಬಳಿದಿರುವುದು ಜಿಲ್ಲೆಯಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಹಸಿರು ಬಣ್ಣವನ್ನು ತೆಗೆಯಬೇಕು ಎಂದು ಸ್ಥಳೀಯ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ರೈಲ್ವೆ ಅಧಿಕಾರಿಗಳು ಇತ್ತೀಚೆಗೆ ರೈಲು ನಿಲ್ದಾಣದ ಗೋಡೆಗಳಿಗೆ ಹಸಿರು ಬಣ್ಣ ಬಳಿದಿದ್ದರು. ನಿಲ್ದಾಣದ ಮುಖ್ಯ ರಚನೆಯು ಗುಮ್ಮಟದ ಆಕಾರವನ್ನು ಹೊಂದಿದೆ. ಇದರ ಜೊತೆಗೆ ಈಗ ಗೋಡೆಗಳಿಗೆ ಹಸಿರು ಬಣ್ಣ ಬಳಿದಿರುವ ಕಾರಣ ಇದು ಮಸೀದಿಯಂತೆ ಕಾಣುತ್ತದೆ ಎಂದು ಸ್ಥಳೀಯ ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು.
ಕೂಡಲೇ ಹಸಿರು ಬಣ್ಣವನ್ನು ತೆಗೆಯುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳು ಮಂಗಳವಾರ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲಿಸ್ ಬಂದೋಬಸ್ತ್ ಮಾಡಲಾಗಿತ್ತು.

ರಾಜ್ಯದಲ್ಲಿ ಇತ್ತೀಚೆಗಷ್ಟೇ ಬಣ್ಣಗಳಲ್ಲಿಯೂ ವಿವಾದ ಶುರುವಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಎಲ್ಲಾ ವಿಷಯಗಳಲ್ಲಿಯೂ ಕೇಸರಿ ಬಣ್ಣವನ್ನು ತರಲು ಪ್ರಯತ್ನಿಸಲಾಗುತ್ತಿದೆ. ಉದಾಹರಣೆಗೆ ವಿವೇಕ ತರಗತಿಗಳಿಗೆ ಕೇಸರಿ ಬಣ್ಣ ಬಳಿಯಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ನಡೆಯನ್ನು ವಿರೋಧ ಪಕ್ಷಗಳು ಸೇರಿದಂತೆ ಹಲವು ಚಿಂತಕರು ವಿರೋಧಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications