Get Updates
Get notified of breaking news, exclusive insights, and must-see stories!

ಕಲಬುರಗಿಯ ರಟಗಲ್ ರೇವಣಸಿದ್ದೇಶ್ವರ ಜಾತ್ರೆ ರದ್ದು

ಕಲಬುರಗಿ, ಜುಲೈ 22 : ಕೊರೊನಾ ವೈರಸ್ ಹರಡುವ ಭೀತಿ ಹಿನ್ನಲೆಯಲ್ಲಿ ರಟಕಲ್ ಶ್ರೀ ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,966.

'ಭಕ್ತಾರು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಆಗಸ್ಟ್ 10ರಂದು ನಿಗದಿಯಾಗಿದ್ದ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ' ಎಂದು ದೇವಾಲಯದ ಅಡಳಿತಾಧಿಕಾರಿ ಹಾಗೂ ಸೇಡಂ ಸಹಾಯಕ ಆಯುಕ್ತ ರಮೇಶ ಕೋಲಾರ ಆದೇಶದಲ್ಲಿ ತಿಳಿಸಿದ್ದಾರೆ.

ಜಾತ್ರೆಯ ದಿನದಂದು ಸಾಂಪ್ರದಾಯಿಕವಾಗಿ ದೇವಾಲಯದ ಸಿಬ್ಬಂದಿ ಮತ್ತು ಅರ್ಚಕರಿಂದ ಪೂಜೆ ಸಲ್ಲಿಸಲಾಗುತ್ತದೆ. ಅಂದು ಸಾರ್ವಜನಿಕರು ಮತ್ತು ಭಕ್ತಾಧಿಗಳು ದೇವಾಲಯಕ್ಕೆ ಬರಬಾರದು ಎಂದು ಮನವಿ ಮಾಡಲಾಗಿದೆ.

Ratkal Revanasiddeshwar Temple Fair Cancelld

ಶ್ರಾವಣ ಮಾಸ ಆರಂಭವಾಗಿದ್ದು ಮಾಸದ ಪ್ರತಿ ಸೋಮವಾರ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳು ನಡೆಯುತ್ತಿದ್ದವು. ದೇವಾಲಯದ ಅರ್ಚಕರಿಂದ ಪೂಜೆಗಳು ನಡೆಯಲಿದ್ದು, ಅರ್ಚಕರಲ್ಲದೆ ಬೇರೆ ಭಕ್ತಾಧಿಗಳಿಗೆ ದೇವಾಲಯಕ್ಕೆ ಪ್ರವೇಶ ನಿಷೇಧಿಸಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ 99 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,966ಕ್ಕೆ ಏರಿಕೆಯಾಗಿದೆ. ಹಲವು ದೇವಾಲಯಗಳಲ್ಲಿ ಭಕ್ತರ ಪ್ರವೇಶಕ್ಕೆ ಈಗಾಗಲೇ ನಿಷೇಧ ಹೇರಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+