ಕಲಬುರಗಿಯಲ್ಲಿ ಒಂದೆರಡು ತಿಂಗಳಲ್ಲಿ ಕ್ಯಾನ್ಸರ್ ಆಸ್ಪತ್ರೆ ಆರಂಭ
ಕಲಬುರಗಿ, ಆಗಸ್ಟ್ 13: ಕಲಬುರಗಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗಳ ಅನುಕೂಲಕ್ಕಾಗಿ ಕಲಬುರಗಿಯಲ್ಲಿ ಒಂದೆರಡು ತಿಂಗಳಲ್ಲಿ ಸರ್ಕಾರ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಶುಕ್ರವಾರ ಕಲಬುರಗಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ "ಜನ-ಮನ" ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಟ್ರಾಮಾ ಸೆಂಟರ್ ಮತ್ತು ಮಲ್ಟಿ ಸ್ಪೆಷಾಲಿಟಿ ಹಾಗೂ ಮಹಿಳೆಯರ ಮತ್ತು ಮಕ್ಕಳ ಪ್ರತ್ಯೇಕ ಆಸ್ಪತ್ರೆಗಳು ಸಹ ಕಲಬುರಗಿಯಲ್ಲಿ ಪ್ರಾರಂಭವಾಗಲಿವೆ ಎಂದರು.
ವಿದ್ಯಾಸಿರಿ ಯೋಜನೆಯ ಫಲಾನುಭವಿಗಳು ಇ-ಪುಸ್ತಕ ಸೌಲಭ್ಯ ಕಲ್ಪಿಸುವ ಬಗ್ಗೆ ಸಚಿವರ ಗಮನ ಸೆಳೆದಾಗ ಸಚಿವರು ಈ ಸೌಲಭ್ಯವನ್ನು ಹೆಚ್.ಕೆ.ಆರ್.ಡಿ.ಬಿ.ಯಿಂದ ಕಲ್ಪಿಸಲಾಗುವುದು. ಈ ಭಾಗದ ಅಭ್ಯರ್ಥಿಗಳು ಐ.ಎ.ಎಸ್. ಪರೀಕ್ಷೆಯ ತರಬೇತಿ ಪಡೆಯಲು ಅನುಕೂಲವಾಗುವಂತೆ ಒಂದು ತಿಂಗಳೊಳಗೆ ಸುಸಜ್ಜಿತ ತರಬೇತಿ ಕೇಂದ್ರ ಪ್ರಾರಂಭಿಸಲು ಸಹ ಕ್ರಮ ಕೈಗೊಳ್ಳಲಾಗುವುದು.

ವಿದ್ಯಾಸಿರಿ ಯೋಜನೆ ಬಗ್ಗೆ ಮಾಹಿತಿ
ವಿದ್ಯಾಸಿರಿ ಯೋಜನೆಯಡಿ ಈಗ ಪ್ರತಿ ತಿಂಗಳು ನೀಡಲಾಗುತ್ತಿರುವ 1500 ರೂ. ಹಣವನ್ನು 3000 ರೂ. ಹೆಚ್ಚಿಸುವಂತೆ ಸಂಬಂಧಿಸಿದ ಸಚಿವರ ಗಮನಕ್ಕೆ ತರಲಾಗುವುದೆಂದರು. ಕಲಬುರಗಿ ಜಿಲ್ಲೆಯಲ್ಲಿರುವ ಎಲ್ಲ ಲೈಂಗಿಕ ಅಲ್ಪಸಂಖ್ಯಾತರಿಗೆ 500ರೂ.ಮಾಸಾಶನ ಸೌಲಭ್ಯ ಮತ್ತಿತರ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ ಸಚಿವರು ಮಾಸಾಶನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದೆಂದರು.

ಕೃಷಿ ಭಾಗ್ಯ ಯೋಜನೆಯಲ್ಲಿ ಅಕ್ರಮದ ಬಗ್ಗೆ
ಕೃಷಿ ಭಾಗ್ಯ ಯೋಜನೆಯಡಿ ನಡೆದಿದೆ ಎನ್ನಲಾದ ಅಕ್ರಮ ಅವ್ಯವಹಾರದ ಬಗ್ಗೆ ವಿಚಾರಣೆ ನಡೆಸಲಾಗುವುದು. ಸರ್ಕಾರದ ಯೋಜನೆಗಳು ಜನರಿಗೆ ಪಾರದರ್ಶಕವಾಗಿ ತಲುಪಿಸುವ ಜವಾಬ್ದಾರಿ ಆಯಾ ಯೋಜನೆಗಳ ಅನುಷ್ಠಾನಾಧಿಕಾರಿಗಳ ಮೇಲಿದೆ. ಇಂತಹ ದೂರುಗಳು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ತೊಗರಿ ಬೆಳೆ ವಿತರಣೆ
ಅನ್ನಭಾಗ್ಯ ಯೋಜನೆಯಡಿ ತೊಗರಿ ಬೆಳೆ ವಿತರಿಸುವ ಹಾಗೂ ಪಡಿತರ ಕಾರ್ಡುದಾರರಿಗೆ ನೀಡಲಾಗುವ ಆಹಾರಧಾನ್ಯದ ಪ್ರಮಾಣ ಹೆಚ್ಚಿಸುವ ಬಗ್ಗೆ ಆಹಾರ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು. ಕ್ಷೀರಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ವಿತರಿಸಲಾಗುವ ಹಾಲನ್ನು ಆರು ದಿನ ವಿತರಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದರು.

ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜನಮನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಆಯೋಜಿಸಿದ "ಜನ-ಮನ" ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಅಧ್ಯಕ್ಷತೆ ವಹಿಸಿದ್ದರು.

ಜನಮನ ಕಾರ್ಯಕ್ರಮದಲ್ಲಿ ಗಣ್ಯರು
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ್ ಪಾಲ್ಗೊಂಡಿದ್ದರು.

ಕಲಬುರಗಿ ಜಿಲ್ಲಾ ಸಾಧನೆಯ ಪುಸ್ತಕ ಬಿಡುಗಡೆ
ಇದಕ್ಕೂ ಮುನ್ನ ಜಿಲ್ಲಾ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದ ಮೂರು ವರ್ಷಗಳ ಕಲಬುರಗಿ ಜಿಲ್ಲಾ ಸಾಧನೆಯ ಪುಸ್ತಕ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ಉಜ್ವಲ್ಕುಮಾರ್ ಘೋಷ್ ಆಶಯ ಭಾಷಣ ಮಾಡಿದರು. ವಾರ್ತಾಧಿಕಾರಿ ಜಿ. ಚಂದ್ರಕಾಂತ್ ಸ್ವಾಗತಿಸಿದರು. ಶಶಿಕಲಾ ಜಡೆ ಕಾರ್ಯಕ್ರಮ ನಿರೂಪಿಸಿದರು ವಂದಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications