ಲಂಬಾಣಿ ದಿರಿಸಿನಲ್ಲಿ ಪ್ರಚಾರ, ಮತದಾರರನ್ನು ಸೆಳೆದ ಸಂಸದೆ ಶೋಭಾ
ಚಿಂಚೋಳಿ ಮೇ 12 2019: ಚಿಂಚೋಳಿ ಉಪಚುನಾವಣೆಯನ್ನು ಗೆಲ್ಲಲೇ ಬೇಕು ಎನ್ನುವ ಪಣ ತೊಟ್ಟಿರುವ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ತಮ್ಮ ಬಿರುಸಿನ ಪ್ರಚಾರ ಕಾರ್ಯವನ್ನು ಮುಂದುವರೆಸಿದ್ದಾರೆ.
ಕ್ಷೇತ್ರದ ಉಸ್ತುವಾರಿಗಳಾದ ಮಾಜಿ ಸಚಿವ ವಿ ಸೋಮಣ್ಣ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಜೊತೆಗೂಡಿ ಸೂಗೂರು ಗ್ರಾಮದಲ್ಲಿ ಸುನಿಲ ವಲ್ಲಾಪುರೆಜಿ, ಅಮರನಾಥ ಪಾಟೀಲ, ಮಾಜಿ ಸಚಿವ ಶ್ರೀನಿವಾಸ್ ಪೂಜಾರಿ ಜೊತೆಗೂಡಿ ಪ್ರಚಾರ ನಡೆಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಚಾಕಾರ ವೆತ್ತದೆ ಇರುವ ಕಾಂಗ್ರೆಸ್ ನಾಯಕರು ಕೇವಲ ವೈಯಕ್ತಿಯ ತೆಜೋವಧೆಗೆ ಇಳಿದಿದ್ದಾರೆ. ಉಮೇಶ್ ಜಾಧವ್ ಅವರು ತಮ್ಮ ಸ್ವಾಭೀಮಾನಕ್ಕಾಗಿ ರಾಜೀನಾಮೆ ಕೊಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಚಿಂಚೋಳಿ ಕ್ಷೇತ್ರ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ. ಖರ್ಗೆ ಅವರು ಸುಳ್ಳು ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಅಭಿವೃದ್ದಿಪರ ಚರ್ಚೆ ಮಾಡಿ ಎಂದರು.

ಮಾಜಿ ಸಚಿವ ಶ್ರೀನಿವಾಸ್ ಪೂಜಾರಿ ಮಾತನಾಡಿ
ಮಾಜಿ ಸಚಿವ ಶ್ರೀನಿವಾಸ್ ಪೂಜಾರಿ ಮಾತನಾಡಿ, ಅವಿನಾಶ್ ಜಾಧವ್ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಜೋಡೆತ್ತುಗಳು. ಜೊಡೆತ್ತುಗಳ ನೊಗ ಕಳಚಿ ಬಿದ್ದಿದೆ. ಚಿಕಿತ್ಸೆ ನೆಪದಲ್ಲಿ ರೆಸಾರ್ಟ್ ವಾಸ್ತವ್ಯ ಮಾಡುತ್ತಿದ್ದಾರೆ. ಹೊರಗೆ ಬಂದು ಜನರ ಕಷ್ಟಕ್ಕೆ ಸ್ಪಂದಿಸಿ, ರಾಜಕೀಯ ಎಂದರೆ ವಿಶ್ರಾಂತಿ ಪಡೆಯುವ ಆಶ್ರಮ ಅಲ್ಲ. ಮಗನ ಗೆಲುವಿಗಾಗಿ ದೇಗುಲಕ್ಕೆ ಹೋಗುವ ಸಿಎಂ ಜನರ ಕಷ್ಟ ಅರಿಯುವ ಕಾರ್ಯ ಮಾಡಿಲ್ಲ ಎಂದರು.

ಶೋಭಾ ಕರಂದ್ಲಾಜೆ ಪ್ರಚಾರ
ಮತ್ತೊಂದೆಡೆ, ಮಾಜಿ ಸಚಿವ ಶೋಭಾ ಕರಂದ್ಲಾಜೆ ಅವರು ಕೂಡ್ಲೀ ಗ್ರಾಮದಿಂದ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದರು. ಲಂಬಾಣಿ ಮಹಿಳೆಯರ ಡ್ರೆಸ್ ಧರಿಸಿ ಲಂಬಾಣಿ ನೃತ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು ಹಾಗೂ ಎಲ್ಲರ ಗಮನ ಸೆಳೆಯಿತು.

ನಮ್ಮ ಸರ್ಕಾರ ಲಂಬಾಣಿ ನಿಗಮ ಸ್ಥಾಪಿಸಿತ್ತು
ಯಡಿಯೂರಪ್ಪ ಸರಕಾರ ಮೊದಲ ಬಾರಿಗೆ ಲಂಬಾಣಿ ನಿಗಮ ಸ್ಥಾಪನೆ ಮಾಡಿತ್ತು. ಜಾಧವ್ ಬಿಜೆಪಿ ಸೇರಿದ ಮೇಲೆ ಆನೆ ಬಲ ಬಂದಂತಾಗಿದೆ. ನಮ್ಮ ಶಾಸಕರ ಬಲ 106 ಕ್ಕೆ ಏರಲಿದೆ. ಕಾಂಗ್ರೆಸ್ ಪಕ್ಷ ಒಳಗಿನಿಂದಲೇ ಕುಸಿದು ಹೋಗುತ್ತಿದೆ. ಸಶಕ್ತ ದೇಶ ಹಾಗೂ ಸಶಕ್ತ ಕರ್ನಾಟಕಕ್ಕೆ ಬಿಜೆಪಿ ಗೆ ಬೆಂಬಲಿಸುವಂತೆ ಮನವಿ ಮಾಡಿದರು. ಲಂಬಾಣಿ ಧಿರಿಸು ಧರಿಸಿದ್ದ ಮಹಿಳೆಯರು ಅವರನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು.

ನವ ಕರ್ನಾಟಕ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ
ನವ ಕರ್ನಾಟಕ ನಿರ್ಮಾಣಕ್ಕೆ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಇದಕ್ಕಾಗಿ ಚಿಂಚೋಳಿಯ ಮತದಾರರು ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಅವರನ್ನು ಅಭೂತಪೂರ್ವ ಅಂತರದಿಂದ ಗೆಲ್ಲಿಸಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಕುಮಾರಿ ಶೋಭಾ ಕರಂದ್ಲಾಜೆಯವರ ಜೊತೆಯಲ್ಲಿ ಯುವ ನಾಯಕರಾದ ದೊಡ್ಡಪ್ಪ ಗೌಡ ಪಾಟೀಲ್ ನರಿಬೊಳ, ಶ್ರೀಮತಿ ಶಶಿಕಲಾ ಟೆಂಗಳಿ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಂಡರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications