Get Updates
Get notified of breaking news, exclusive insights, and must-see stories!

ಖರ್ಗೆ ನಾಡಿನಲ್ಲಿ ಕುರುಬ ಸಮಾವೇಶ: ಇದೇನು ಸಿದ್ದರಾಮಯ್ಯ ಶಕ್ತಿ ಪ್ರದರ್ಶನವೋ?

Recommended Video

      ಕರ್ನಾಟಕದ ವಿಷಯದಲ್ಲಿ ಸೋನಿಯಾ ಗಾಂಧಿಗೆ ದೊಡ್ಡ ತಲೆನೋವು | Oneindia Kannada

      ಕಲಬುರಗಿ, ಸೆ 29: ಕರ್ನಾಟಕ ಹಿರಿಯ ಕಾಂಗ್ರೆಸ್ ಮುಖಂಡರ ಅಸಹನೆಯ ಕಟ್ಟೆ ಈ ಮಟ್ಟಿಗೆ ಒಡೆಯುತ್ತದೆ ಎಂದು ಬಹುಷಃ ಕಾಂಗ್ರೆಸ್ ಹೈಕಮಾಂಡ್ ನಿರೀಕ್ಷಿಸಿರಲಿಕ್ಕಿಲ್ಲ.

      ಸಿದ್ದರಾಮಯ್ಯ ವಿರುದ್ದ ಹಿರಿಯ ಮತ್ತು ಮೂಲ ಕಾಂಗ್ರೆಸ್ಸಿಗರು ಒಂದಾಗಿದ್ದಾರೆ. ಪಕ್ಷದೊಳಗೆ ಎರಡು ಬಣಗಳಾಗಿರುವುದು ಅತ್ಯಂತ ಸ್ಪಷ್ಟವಾಗಿರುವ ಈ ಸಮಯದಲ್ಲಿ ಕಲಬುರಗಿಯಲ್ಲಿ ಸಮಾವೇಶವೊಂದನ್ನು ಭಾನುವಾರ (ಸೆ 29) ಆಯೋಜಿಸಲಾಗಿದೆ.

      ಮಲ್ಲಿಕಾರ್ಜುನ ಖರ್ಗೆಯವರ ರಾಜಕೀಯ ಕರ್ಮಭೂಮಿ ಕಲಬುರಗಿಯಲ್ಲಿ ಕುರುಬ ಸಮಾವೇಶ ನಡೆಯಲಿದೆ. ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಜನರು ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

      Siddaramaiah To Attend Kuruba Convention In Kalaburagi, The Karmabhoomi Of Mallikarjuna Kharge

      ಭಾನುವಾರ ಮಧ್ಯಾಹ್ನ ಕುರುಬ ಸಮುದಾಯದ ಪ್ರತಿಭಾ ಸಮಾವೇಶ ನಡೆಯಲಿದೆ. ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

      ಖರ್ಗೆಯವರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಮಂತ್ರಣ ಹೋಗಿದೆ. ಆದರೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಕಮ್ಮಿ ಎಂದು ಹೇಳಲಾಗುತ್ತಿದೆ.

      ತಮ್ಮ ವಿರುದ್ದ ಕತ್ತಿ ಮಸಿಯುತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡರ ವಿರುದ್ದ, ಶಕ್ತಿ ಪ್ರದರ್ಶನ ಮಾಡಲು ಸಿದ್ದರಾಮಯ್ಯ ಈ ವೇದಿಕೆಯನ್ನು ಬಳಸುವ ಸಾಧ್ಯತೆಯಿಲ್ಲದಿಲ್ಲ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+