ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರಕ್ಕೆ ಲೇಡಿ ಅಮಿತಾಭ್ ಬಚ್ಚನ್
Recommended Video
ಕಲಬುರಗಿ, ಏ 18: ಕಳೆದ ಬಾರಿಯ ಚುನಾವಣೆಯಲ್ಲಿ ಗಡಿಭಾಗದ ಮತದಾರರನ್ನು ಓಲೈಸಲು ತೆಲುಗು ಕಲಾವಿದರ ಹಾವಳಿ ಜಾಸ್ತಿಯಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಪರಭಾಷಾ ನಟರು ಅಷ್ಟಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿಲ್ಲ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಲಬುರಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ ಈ ಬಾರಿ, ಬಿಜೆಪಿಯ ಡಾ. ಉಮೇಶ್ ಜಾಧವ್ ತೀವ್ರ ಪೈಪೋಟಿ ನೀಡುತ್ತಿರುವುದಕ್ಕೋ ಏನೋ, ತೆಲುಗು ನಟಿಯಿಂದ ಪ್ರಚಾರ ಮಾಡಿಸಲು ಕಾಂಗ್ರೆಸ್ ನಿರ್ಧರಿಸಿದೆ.
ತಮ್ಮ ಕಲಾವೃತ್ತಿ ಜೀವನದಲ್ಲಿ ಉತ್ತುಂಗದಲ್ಲಿದ್ದಾಗ ದಕ್ಷಿಣದ ಲೇಡಿ ಅಮಿತಾಭ್ ಬಚ್ಚನ್ ಎಂದೇ ಕರೆಯಲ್ಪಡುತ್ತಿದ್ದ ವಿಜಯಶಾಂತಿ, ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 19 ರಂದು ಕ್ಷೇತ್ರದ ವ್ಯಾಪ್ತಿಯ ಸೇಡಂ ಅಸೆಂಬ್ಲಿ ಭಾಗದಲ್ಲಿ ವಿಜಯಶಾಂತಿ ಪ್ರಚಾರ ನಡೆಸಲಿದ್ದಾರೆ.

ಖರ್ಗೆ ಪರ ಪ್ರಚಾರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಕೂಡಾ ಕಲಬುರಗಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದು ಹೋಗುವ ಮರುದಿನವೇ, ಪ್ರಿಯಾಂಕ ಸಭೆಯನ್ನು ಆಯೋಜಿಸಲಾಗಿದೆ.
ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಲಬುರಗಿ ಕ್ಷೇತ್ರದ ಮೇಲೆ ವಿಶೇಷ ನಿಗಾ ಇಟ್ಟಿರುವುದರಿಂದ, ಪ್ರಿಯಾಂಕ ಸಭೆಯನ್ನು ಖರ್ಗೆ ಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ಖರ್ಗೆಗೆ ನಿರೀಕ್ಷೆಗೂ ಮೀರಿದ ಪೈಪೋಟಿ ಬಿಜೆಪಿಯಿಂದ ಎದುರಾಗುತ್ತಿರುವುದೇ ಇದಕ್ಕೆ ಕಾರಣ ಎನ್ನುತ್ತದೆ ಗ್ರೌಂಡ್ ರಿಯಾಲಿಟಿ.
ಕಳೆದ ವಾರ ತಮಿಳು ನಟಿ ಖುಷ್ಬೂ ಸುಂದರ್, ಬೆಂಗಳೂರು ಸೆಂಟ್ರಲ್ ಲೋಕಸಭಾ ವ್ಯಾಪ್ತಿಯಲ್ಲಿ ರಿಜ್ವಾನ್ ಅರ್ಷದ್ ಪರ ಪ್ರಚಾರಕ್ಕೆ ಬಂದಿದ್ದರು. ಶಾಂತಿನಗರ ಅಸೆಂಬ್ಲಿ ವ್ಯಾಪ್ತಿಯಲ್ಲಿ ನಡೆದ ಖುಷ್ಬೂ ಸಭೆಯಲ್ಲಿ, ಕಾರ್ಯಕರ್ತನೊಬ್ಬ ಅನುಚಿತವಾಗಿ ವರ್ತಿಸದನೆಂದು ರಣಧೀರೆ ಖುಷ್ಬೂ ರಪ್ ಎಂದು ಕಪಾಳಕ್ಕೆ ಹೊಡೆದಿದ್ದು ಭಯಂಕರ ಸುದ್ದಿಯಾಗಿತ್ತು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications