ಕಲಬುರಗಿಯಲ್ಲಿ ಜೋರು ಮಳೆ; ಸಿಡಿಲಿಗೆ ಮೂವರು ಬಲಿ
ಕಲಬುರಗಿ, ಏಪ್ರಿಲ್ 29: ಕಲಬುರಗಿ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದೆ. ಜಿಲ್ಲೆಯ ಕೆಲವೆಡೆ ನಿನ್ನೆ ಸಂಜೆ ವೇಳೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಸುರಿದಿದ್ದು, ಸಿಡಿಲಿಗೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಭುಂಯ್ಯಾರ್ ಮತ್ತು ಚಿಂಚೋಳಿ ತಾಲೂಕಿನ ಕೋಡ್ಲಿ ಗ್ರಾಮಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಭುಂಯ್ಯಾರ ಗ್ರಾಮದಲ್ಲಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸುಭಾಷ್ ಹಳಕೇರಿ (35) ಹಾಗೂ ಕುಪ್ಪಣ್ಣ ನವಲೆ (58) ಎಂಬುವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕೋಡ್ಲಿ ಗ್ರಾಮದಲ್ಲಿ ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಅನೀಲ್ ಭೋವಿ (22) ಎಂಬಾತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಕಮಲಾಪುರ, ರಟಕಲ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.












Click it and Unblock the Notifications